Bidar; ಪರ ಭಾಷೆ ನಾಮಫಲಕ ಪುಡಿಗೊಳಿಸಿದ ಕರವೇ


Team Udayavani, Mar 5, 2024, 4:36 PM IST

Bidar; ಪರ ಭಾಷೆ ನಾಮಫಲಕ ಪುಡಿಗೊಳಿಸಿದ ಕರವೇ

ಬೀದರ್: ನಾಮಫಲಕ ಕನ್ನಡದಲ್ಲಿ ಅಳವಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಶೇ.60 ರಷ್ಟು ಕನ್ನಡ ಬಳಸದ ನಾಮಫಲಕಗಳನ್ನು ಕಿತ್ತೊಗೆಯುವುದಾಗಿ ಮೊದಲೇ ಎಚ್ಚರಿಕೆ ನೀಡಿದ್ದ ಕಾರ್ಯಕರ್ತರು, ಕನ್ನಡ ಬಾವುಟದ ಬಣ್ಣ ಬಳಿದಿದ್ದ ಬಡಿಗೆಗಳಿಂದ ಹೊಡೆದು ವಾಣಿಜ್ಯ ಮಳಿಗೆಗಳ ಅನ್ಯಭಾಷೆಯ ನಾಮಫಲಕಗಳನ್ನು ಪುಡಿಗೊಳಿಸಿದರು.

ಗಣೇಶ ಮೈದಾನದಿಂದ ಮೋಹನ್ ಮಾರ್ಕೆಟ್ ವರೆಗಿನ ಮಾರ್ಗದಲ್ಲಿ ಅನ್ಯ ಭಾಷೆಯಲ್ಲಿ ಹಾಕಲಾಗಿದ್ದ ನಾಮಫಲಕಗಳನ್ನು ಒಡೆದು ಆಕ್ರೋಶ ಹೊರ ಹಾಕಿದರು. ಜಿ.ವಿ. ಮಾಲ್‌ನ ನಾಮಫಲಕ ಕೈಯಿಂದಲೇ ಒಡೆದರು. ಮೋಹನ್ ಮಾರ್ಕೆಟ್ ಎದುರಿನ ಮುಖ್ಯರಸ್ತೆ ಮಧ್ಯೆ ಕುಳಿತು ಕೆಲಕಾಲ ರಸ್ತೆ ತಡೆ ಮಾಡಿದರು. ಆಡಳಿತ ಹಾಗೂ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಯವರ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಜಿ.ವಿ. ಮಾಲ್ ವರೆಗೆ ಮೆರವಣಿಗೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ, ರಾಜ್ಯ ಕಾರ್ಯದರ್ಶಿ ಜಗದೀಶ್ ಬಿರಾದಾರ, ಜಿಲ್ಲಾ ಘಟಕದ ಉಪಾಧ್ಯಕ್ಷ ಸೋಮಶೇಖರ ಸಜ್ಜನ್, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪುರ, ಬೀದರ್ ಉತ್ತರ ಘಟಕದ ಅಧ್ಯಕ್ಷ ಸಚಿನ್ ಬೆನಕನಳ್ಳಿ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಹೇಡೆ, ಪ್ರಮುಖರಾದ ಉದಯಕುಮಾರ ಅಷ್ಟೂರೆ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಅನಂತರ ಬಿಡುಗಡೆ ಮಾಡಿದರು.

ಎರಡನೇ ಹಂತದ ಹೋರಾಟ: ಕನ್ನಡದಲ್ಲಿ ಶೇ.60 ರಷ್ಟು ನಾಮಫಲಕ ಅಳವಡಿಕೆಗೆ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಅದಾಗಿಯೂ ವಾಣಿಜ್ಯ ಮಳಿಗೆ, ಶಿಕ್ಷಣ ಸಂಸ್ಥೆ, ಮಾಲ್, ಆಸ್ಪತ್ರೆ ಮೊದಲಾದವರು ಎಚ್ಚೆತ್ತುಕೊಳ್ಳದ ಕಾರಣ ಎರಡನೇ ಹಂತದ ಹೋರಾಟ ಆರಂಭಿಸಲಾಗಿದೆ ಎಂದು ಸೋಮನಾಥ ಮುಧೋಳ ಹೇಳಿದರು.

ಜಿಲ್ಲಾ ಆಡಳಿತ ಹಾಗೂ ನಗರಸಭೆ ಕನ್ನಡ ನಾಮಫಲಕ ಕಡ್ಡಾಯ ಆದೇಶ ಜಾರಿಗೊಳಿಸುವಲ್ಲಿ ವಿಫಲವಾಗಿವೆ. ಈ ಸಂಬಂಧ ವ್ಯಾಪಾರಿಗಳು, ಸಾಹಿತಿಗಳು ಹಾಗೂ ಕನ್ನಡಪರ ಹೋರಾಟಗಾರರ ಒಂದೇ ಒಂದು ಸಭೆ ನಡೆಸಿಲ್ಲ ಎಂದು ಆರೋಪಿಸಿದ ಸೋಮನಥ, ಕನ್ನಡ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ನೆಲದಲ್ಲಿ ಕನ್ನಡ ಭಾಷೆ ಕಡೆಗಣನೆಯನ್ನು ಸಹಿಸಲಾಗದು. ಜಿಲ್ಲೆಯಾದ್ಯಂತ ಕನ್ನಡದಲ್ಲಿ ಶೇ.60 ರಷ್ಟು ನಾಮಫಲಕ ಅಳವಡಿಕೆ ಆದೇಶ ಪಾಲನೆ ಆಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಅಮಿತ್ ಶಿವಪೂಜೆ, ವಿನಾಯಕ ರೆಡ್ಡಿ ಬುಧೇರಾ, ಪ್ರಭು ಯಾಕತಪುರ, ವಿಶ್ವನಾಥ ಗೌಡ, ಮಹೇಶ ಕಾಪಸೆ, ಅಲ್ಲಾಬಕ್ಷ ಸೋನಾಡಿ, ಗೋಪಾಲ್ ಕುಲಕರ್ಣಿ, ಸುಭಾಷ್ ಗಾಯಕವಾಡ್, ಸಾಯಿನಾಥ ಕಾಂಬಳೆ ಸೇರಿದಂತೆ ವೇದಿಕೆಯ ಜಿಲ್ಲೆಯ ವಿವಿಧೆಡೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.