“ದಾಂಪತ್ಯ ಧರ್ಮ ಪಾಲನೆಯಿಂದ ನೆಮ್ಮದಿ ಸಾಧ್ಯ’


Team Udayavani, Dec 12, 2020, 7:36 PM IST

“ದಾಂಪತ್ಯ ಧರ್ಮ ಪಾಲನೆಯಿಂದ ನೆಮ್ಮದಿ ಸಾಧ್ಯ’

ಬೀದರ: ದಾಂಪತ್ಯ ಧರ್ಮ ಪಾಲನೆಯಿಂದ ಜೀವನ ಪ್ರೀತಿ, ಜಾಗತಿಕ ಶಾಂತಿ, ನೆಮ್ಮದಿ ಸಾಧ್ಯವೆಂದು ಡಿಸಿ ರಾಮಚಂದ್ರನ್‌ ಆರ್‌. ಹೇಳಿದರು.

ನಗರದಲ್ಲಿ ಜಿಲ್ಲಾ ಕಸಾಪ ಮತ್ತು ಬಸವ ಕೇಂದ್ರದಿಂದ ಚನಶೆಟ್ಟಿ ಪರಿವಾರದ ಕಲ್ಯಾಣಮಹೋತ್ಸವ ನಿಮಿತ್ತ ಆಯೋಜಿಸಿದ್ದಕಾವ್ಯ ಕುಂಚ ಗಾಯನ, ಜನಜಾಗೃತಿ ಕಾರ್ಯಕ್ರಮದಲ್ಲಿ ಸಾಹಿತಿ ಮೇನಕಾಪಾಟೀಲ ರಚಿತ “ಬಸವಪ್ರಿಯ ಡಾ| ಶಿವಾನಂದ ಸ್ವಾಮಿಗಳು’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಮದುವೆಗೆಸಾಂಸ್ಕೃತಿಕ ಸ್ಪರ್ಶ ನೀಡಿ ಕೊರೊನಾ, ಕೃಷಿ,ಪರಿಸರ, ಮತದಾನ, ಆರೋಗ್ಯ ಮೊದಲಾದ ವಿಷಯಗಳನ್ನು ಮದುವೆಯ ಭಾಗವಾಗಿ ಜನಜಾಗೃತಿ ಮಾಡುವುದರೊಂದಿಗೆ ಪುಸ್ತಕ ಬಿಡುಗಡೆ ಮಾಡುತ್ತಿರುವುದು ಅಭಿನಂದನಾರ್ಹ ಕಾರ್ಯವಾಗಿದೆ ಎಂದರು.

ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು, ಶ್ರೀ ಅಕ್ಕ ಅನ್ನಪೂರ್ಣಮಾತನಾಡಿದರು. ಬಸವಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಉಮಾಕಾಂತಮುಸ್ತಾಪುರೆ, ಕನಕಟ್ಟಾ ಚಂದ್ರಶೇಖ ಚನಶೆಟ್ಟಿ ಭಾಗವಹಿಸಿದ್ದರು.

ಕಾವ್ಯ ಕುಂಚ ಗಾಯನ: ಸಮಾರಂಭದಲ್ಲಿ ಸಾಹಿತಿಗಳಾದ ವಿಜಯಕುಮಾರ ಗೌರೆ,ಚನ್ನಬಸವ ಹೇಡೆ, ಕಸ್ತೂರಿ ಪಟಪಳ್ಳಿ, ಸಾಧನಾ ರಂಜೋಳಕರ ಹಾಗೂ ಪುಷ್ಪಾ ಕನಕ ಕವನ ವಾಚನ ಮಾಡಿದರೆ ಅದಕ್ಕೆ ಶಿವಕುಮಾರ ಪಾಂಚಾಳ ಹಾಗೂ ಸಂಗಡಿರು ರಾಗ ಸಂಯೋಜಿಸಿ ಸಂಗೀತ ನೀಡಿದರು. ಅದಕ್ಕೆ ತಕ್ಕಂತೆ ಯೋಗೀಶ ಮಠದ ಅವರು ಕುಂಚದ ಮೂಲಕ ಚಿತ್ರ ಬಿಡಿಸಿದರು. ನಾಗರಾಜ ಜೋಗಿ ಮತ್ತು ವೈಜನಾಥ ಸಜ್ಜನಶೆಟ್ಟಿ ತಂಡದವು ಸಂಗೀತ ನಡೆಸಿಕೊಟ್ಟರು. ಆನಂದ ವಿಜಯಪುರ ಅವರಿಂದ ಜೂನಿಯರ್‌ ರವಿಚಂದ್ರ ಅಭಿನಯ ನಡೆಸಿಕೊಟ್ಟರು.

ನೂತನ ಸಂಸತ್‌ನಲ್ಲಿ ಬಸವಣ್ಣನ ಪ್ರತಿಮೆ ಸ್ಥಾಪಿಸಲಿ :

ಬೀದರ: ದೆಹಲಿಯಲ್ಲಿ ನಿರ್ಮಿಸುತ್ತಿರುವ ನೂತನ ಸಂಸತ್‌ ಭವನದ ಪ್ರವೇಶ ದ್ವಾರದ ಎದುರು ಅನುಭವ ಮಂಟಪದಮೂಲಕ ವಿಶ್ವಕ್ಕೆ ಪ್ರಪ್ರಥಮ ಬಾರಿಗೆ ಸಂಸತ್ತಿನ ಪರಿಕಲ್ಪನೆ ಪರಿಚಯಿಸಿದ ಬಸವೇಶ್ವರರ ಪ್ರತಿಮೆ ಸ್ಥಾಪಿಸಬೇಕು ಎಂದು ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಒತ್ತಾಯಿಸಿದ್ದಾರೆ.

ಪ್ರತಿಮೆ ಮೇಲೆ “ಜಗತ್ತಿನ ಮೊಟ್ಟ ಮೊದಲ ಪ್ರಜಾಪ್ರಭುತ್ವ ವಿಚಾರಗಳ ಪ್ರತಿಪಾದಕ ಹಾಗೂ ಲೋಕ ಸಂಸತ್ತಿನ ಸಂಸ್ಥಾಪಕ’ ಎಂದು ಬರೆಸಬೇಕು. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಅನುಭವ ಮಂಟಪದ ಚಿತ್ರ ಅಳವಡಿಸಬೇಕು. ಪ್ರಜಾಪ್ರಭುತ್ವ ಹಾಗೂ ವಿಶ್ವ ಕಲ್ಯಾಣದ ಸಂದೇಶ ಸಾರುವ ಬಸವಾದಿ ಶರಣರವಚನಗಳ ಫಲಕಗಳನ್ನು ತೂಗು ಹಾಕಬೇಕು ಎಂದು ಪ್ರಕಟಣೆ ಮೂಲಕ ಬೇಡಿಕೆ ಮಂಡಿಸಿದ್ದಾರೆ.

ವಾಸ್ತವ ತೆರೆದಿಟ್ಟ ಪ್ರಧಾನಿ: ಜಗತ್ತಿನಲ್ಲಿ 13ನೇ ಶತಮಾನದಲ್ಲಿ ರಚನೆಯಾದ ಮ್ಯಾಗ್ನಾ ಕಾರ್ಟಾ ಬಗ್ಗೆ ಚರ್ಚೆಗಳು ನಡೆಯುತ್ತವೆ. ಆದರೆ, ಅದಕ್ಕೂ ಮುನ್ನ ಅಂದರೆ 12ನೇ ಶತಮಾನದಲ್ಲೇ ಬಸವಣ್ಣ ಅನುಭವ ಮಂಟಪ ಮೂಲಕ ಲೋಕ ಸಂಸತ್ತಿನ ನಿರ್ಮಾಣಮಾಡಿದ್ದರು ಎಂದು ನೂತನ ಸಂಸತ್‌ ಭವನದ ಶಿಲಾನ್ಯಾಸಕಾರ್ಯಕ್ರಮದಲ್ಲಿ ಹೇಳುವ ಮೂಲಕ ಪ್ರಧಾನಿ ವಿಶ್ವದೆದುರು ವಾಸ್ತವ ಸಂಗತಿ ತೆರೆದಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.