ಗುತ್ತಿಗೆ ಕ್ಷೇತ್ರದಲ್ಲಿ ಕೊಳ್ಳುರ್ ವಿಶಿಷ್ಟ ಛಾಪು: ಪಾಟೀಲ
Team Udayavani, Sep 21, 2018, 12:41 PM IST
ಬೀದರ: ನಗರದ ಜಿ.ಕೆ. ಟವರ್ನಲ್ಲಿ ಕೊಳ್ಳುರ್ ಗುರುನಾಥ ಕನ್ಸ್ಟ್ರಕ್ಷನ್ ಇನ್ಫ್ರಾ ಪ್ರೈವೇಟ್ ಲಿಮಿಟೆಡ್ ಕಚೇರಿಯನ್ನು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ ಪಾಟೀಲ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇಡೀ ರಾಜ್ಯದಲ್ಲೇ ಉತ್ತಮ ಗುಣಮಟ್ಟದ ಕೆಲಸ ಮಾಡುವ ಮೂಲಕ ಗುರುನಾಥ ಕೊಳ್ಳುರ್ ಅವರು ಗುತ್ತಿಗೆ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿಕೊಂಡಿದ್ದಾರೆ.
ನಿಗದಿತ ಅವಧಿಗಿಂತ ಮೊದಲೇ ಕೆಲಸ ಮಾಡಿ ತೋರಿಸುವುದು ಇವರ ವಿಶೇಷತೆಯಾಗಿದೆ. ವೃತ್ತಿ ಜೊತೆಗೆ ದಾನಿ ಎನಿಸಿದ್ದು, ಸಮಾಜೋಧಾರ್ಮಿಕ ಚಟುವಟಿಕೆಗಳಿಗೆ ಸದಾ ಸಹಾಯಹಸ್ತ ನೀಡುತ್ತಿದ್ದಾರೆ. ಸರಳ, ಸಜ್ಜನಿಕೆಯೇ ಇಂದು ಕೊಳ್ಳುರ್ ಅವರನ್ನು ಸಮಾಜದಲ್ಲಿ ಎತ್ತರಕ್ಕೆ ಬೆಳೆಸಿದೆ. ಸ್ವತಃ ಕಷ್ಟಗಳನ್ನು ಎದುರಿಸಿ ಮೇಲೆ ಬಂದ ಕೊಳ್ಳುರ್ ಅವರು ಸದಾ ಇನ್ನೊಬ್ಬರ ಸಂಕಷ್ಟಕ್ಕೆ ಸ್ಪಂದಿಸುವ ದೊಡ್ಡ ಗುಣ ಹೊಂದಿದ್ದಾರೆ. ಜಾತಿ, ಮತದ ಭೇದ ಮಾಡದೆ ಅವಕಾಶ ಸಿಕ್ಕಾಗ ಕೈಲಾದಷ್ಟು ನೆರವು ನೀಡುವ, ಉದಾರವಾಗಿ ಸಹಾಯ ಮಾಡುವ ಮನಸ್ಸಿನವರಾಗಿದ್ದಾರೆ ಎಂದು ಹೇಳಿದರು.
ಚಿದಂಬರಾಶ್ರಮ ಸಿದ್ದಾರೂಢ ಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಸಮಾಜೋಧಾರ್ಮಿಕ ಕಾರ್ಯಕ್ರಮಗಳು ಕೊಳ್ಳುರ್ ಅವರು ಇಲ್ಲದೆ ನಡೆಯುವುದಿಲ್ಲ ಎಂಬಂತಿದೆ. ಸಮಾಜದ
ವಿವಿಧ ಸೇವಾ ಚಟುವಟಿಕೆಗಳಲ್ಲಿ ಕೊಳ್ಳುರ್ ಅವರು ಅಷ್ಟೊಂದು ಸಕ್ರಿಯ ಸಹಭಾಗಿತ್ವ ಹೊಂದಿರುವುದು ಮಾದರಿ. ಅವರ ಸರಳ ಜೀವನ, ಪಾಲಕರ ಬಗೆಗಿನ ಗೌರವಾಭಿಮಾನ ಇಂದಿನ ಯುವಕರಿಗೆ ಮಾದರಿಯಾಗಿದೆ.
ಹೆತ್ತವರ ಆಶೀರ್ವಾದವಿದ್ದಾಗಲೇ ಎಲ್ಲ ಹಾದಿಗಳು ಸುಗಮ ಆಗುತ್ತವೆ. ಅದಕ್ಕೆ ಕೊಳ್ಳುರ್ ಅವರ ಜೀವನ-ಸಾಧನೆಯೇ ಸಾಕ್ಷಿ ಎಂದು ಹೇಳಿದರು. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ|
ಬಸವಲಿಂಗ ಪಟ್ಟದ್ದೇವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಮೇಹಕರ-ತಡೋಳಾ ಗುರುಕುಲಾಶ್ರಮದ ಶ್ರೀ ರಾಜೇಶ್ವರ ಶಿವಾಚಾರ್ಯರು, ಕೌಠಾ ಬಸವಯೋಗಾಶ್ರಮದ ಶ್ರೀ ಸಿದ್ದರಾಮ ಶರಣರು ಬೆಲ್ದಾಳ್, ಸಂಸದ ಭಗವಂತ ಖೂಬಾ ಮಾತನಾಡಿದರು.
ಈ ಸಂದರ್ಭದಲ್ಲಿ ಅಕ್ಕ ಅನ್ನಪೂರ್ಣ ತಾಯಿ ಅವರು ಬರೆದಿರುವ ಗುರುವಚನ ಧರ್ಮಗ್ರಂಥದ 13ನೇ ಆವೃತ್ತಿಯನ್ನು ಸಚಿವ ರಾಜಶೇಖರ ಪಾಟೀಲ್ ಬಿಡುಗಡೆ ಮಾಡಿದರು. ಬಸವಗಿರಿ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ತಾಯಿ, ಹುಲಸೂರು ಗುರುಬಸವೇಶ್ವರ ಸಂಸ್ಥಾನದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇದ್ದೇವರು, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಜ್ಯೋತಿರ್ಮಯಾನಂದ ಮಹಾರಾಜ, ಬಸವ ಸೇವಾ ಪ್ರತಿಷ್ಠಾನದ ಡಾ| ಗಂಗಾಂಬಿಕೆ ಅಕ್ಕ, ಬಸವ ಮಂಟಪದ ಮಾತೆ ಸತ್ಯಾದೇವಿ, ಶಾಸಕರಾದ ರಹೀಮ್ ಖಾನ್, ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಅರವಿಂದಕುಮಾರ ಅರಳಿ, ಡಾ| ಚಂದ್ರಶೇಖರ ಪಾಟೀಲ, ರಮೇಶ ಮಠಪತಿ, ಗುರುನಾಥ ಕೊಳ್ಳುರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ