ಕೋಲಿ ಸಮಾಜ ಏಳ್ಗೆಗೆ ಯತ್ನ


Team Udayavani, Mar 5, 2018, 12:33 PM IST

bid-2.jpg

ಹುಮನಾಬಾದ: ರಾಜ್ಯ ಸರ್ಕಾರ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಹಿಂದುಳಿದ ಅಂಬಿಗರ, ಗಂಗಾಮತ, ಕೋಲಿ, ಕಬ್ಬಲಿಗ ಸಮುದಾಯಗಳ ಏಳ್ಗೆಗಾಗಿ ಶ್ರಮಿಸುತ್ತಿದೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ತೇರು ಮೈದಾನದಲ್ಲಿ ರವಿವಾರ ಗಂಗಾಮತ ಕೋಲಿ ಕಬ್ಬಲಿಗ ಟೋಕ್ರೆ ಕೋಲಿ, ಅಂಬಿಗರ ಚೌಡಯ್ಯ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಸರ್ಕಾರ ಬೀದರ ಜಿಲ್ಲೆಗೆ ನಿಗಮದ ಅಧ್ಯಕ್ಷಸ್ಥಾನ ನೀಡಿದೆ. ಈ ಭಾಗದ ಸಮುದಾಯ ಜನರ ಏಳ್ಗೆಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಕೆಲಸ ಮಾಡುತ್ತಿದೆ. 

ಕಾಂಗ್ರೆಸ್‌ ಸರ್ಕಾರ ಎಲ್ಲಾ ಜಾತಿ ಧರ್ಮಗಳ ಜನರನ್ನು ಸಮನಾಗಿ ಕಾಣುವ ಮೂಲಕ ಎಲ್ಲರ ಸವರ್ತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕ್ಷೇತ್ರದಲ್ಲಿ ಕೂಡ ಸಮುದಾಯದ ಜನರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಯಾವುದೇ ಒಂದು ಸಮುದಾಯ ಆರ್ಥಿಕವಾಗಿ ಬೆಳೆಯಬೇಕಾದರೆ ಆ ಸಮುದಾಯದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು. ಎಲ್ಲರೂ ಏಕತೆಯಿಂದ ಸಂಘಟಿತರಾಗಿದ್ದರೆ ಮಾತ್ರ ಆ ವರ್ಗದ ಜನರ ಏಳ್ಗೆ ಸಾಧ್ಯ ಎಂದರು.

ಸಂಸದ ಭಗವಂತ ಖೂಬಾ ಮಾತನಾಡಿ, ಹಿಂದುಳಿದ ಅಂಬಿಗರ, ಗಂಗಾಮತ, ಕೋಲಿ, ಕಬ್ಬಲಿಗ ಸಮುದಾಯವನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಒತ್ತಾಯಿಸುತ್ತಿರುವ ಸಮಾಜದ ಮುಖಂಡರಿಗೆ ನಾನು ಕೂಡ ಬೆಂಬಲ ನೀಡುತ್ತೇನೆ. ರಾಜ್ಯ ಸರ್ಕಾರದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಂಡು ದೆಹಲಿಗೆ ಬಂದರೆ ನಾನು ಕೂಡ ಸಮಾಜದ ಜನರ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ಸಾಹಿತಿ ಪಾರ್ವತಿ ಸೋನಾರೆ ಮಾತನಾಡಿ, ಸಮುದಾಯದ ಜನರು ದುಶ್ಚಟಗಳನ್ನು ಬಿಟ್ಟು, ಆಳುವವರ ಗುಲಾಮರಾಗದೆ,
ಸ್ವಾವಲಂಬಿ ಜೀವನ ಮಾಡುವಂತರಾಗಬೇಕು. ನೇರ ನುಡಿಗಳಿಂದ ಗುರುತಿಸಿಕೊಂಡ ಅಂಬಿಗರ ಚೌಡಯ್ಯ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಜೀವನಕ್ಕೆ ಅರ್ಥ ದೊರೆಯುತ್ತದೆ ಎಂದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ನಸಿಮೋದ್ದಿನ್‌ ಪಟೇಲ, ಅಂಕುಶ ಗೋಖಲೆ, ದತ್ತಾತ್ರೇಯ ಮಹಾರಾಜ, ಸಮಾಜ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದರ, ಶಿವಾಜಿ ಮೇಟಿಗಾರ, ಸೋಮನಾಥ ಪಾಟೀಲ, ಗೌರಮ್ಮ ನರನಾಳ, ಶಾರದಾಬಾಯಿ ಬಾವಗಿ, ಲಕ್ಷ್ಮಣ ಔಂಟಿ, ಸುಭಾಷ ಅಂತಪ್ಪಗಂಗಾ, ಶಾಲಿನಿ ವಾಡೇಕರ್‌, ಶಾಂತಪ್ಪಾ ಕೋಡಿ, ಅರವಿಂದ ಪಾಟೀಲ, ಸುನೀಲ ಖಾಶೆಂಪುರ, ರಾಜು ಪಂಚಾಳ, ಶಿವಶಂಕರ ಹಡಪದ, ದತ್ತು ಲದ್ದಿ, ನಾಗಭೂಷಣ ಸಂಗಮ, ಅಶೋಕ ಹಣಕುಣಿ, ದಯಾನಂದ ಮೇತ್ರಿ, ಶಂಕರ ಡಾಕುಳಗಿ, ನರಸಪ್ಪ ನರನಾಳ, ಅರುಣ ಬಾವಗಿ, ಸಂಜು ಗೌಳಿ, ವೀರಣ್ಣ ಹಳ್ಳಿಖೇಡ(ಕೆ), ಬಸವರಾಜ ಸದಲಾಪುರೆ, ಶಿವರಾಜ ಮಂಗಲಗಿ ಸೇರಿದಂತೆ ಸಮಾಜದ ಅನೇಕ ಮುಖಂಡರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.