ಹುಮನಾಬಾದ್‌ನಲ್ಲಿ ನೀರಿಗಾಗಿ ಹಾಹಾಕಾರ

8 ದಿನಗಳಿಂದ ನೀರು ಪೂರೈಕೆ ಸ್ಥಗಿತ

Team Udayavani, Sep 13, 2020, 5:58 PM IST

bidar-tdy-1

ಸಾಂದರ್ಭಿಕ ಚಿತ್ರ

ಹುಮನಾಬಾದ: ಕಳೆದ ಎಂಟು ದಿನಗಳಿಂದಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ಆಗದ್ದರಿಂದ ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತಾಗಿದೆ.

ಸ್ಥಳೀಯ ಪುರಸಭೆ ಸಮರ್ಪಕ ನೀರು ಪೂರೈಕೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆ ನೀರು ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಜನ ನೀರಿಗಾಗಿ ಅಲೆದಾಡುವಂತಾಗಿದೆ. ಮನೆಯಿಂದ ಕಚೇರಿಗೆ ವಾಹನದಲ್ಲಿ ಸುತ್ತಾಡುವ ಪುರಸಭೆ ಅಧಿಕಾರಿಗಳು ಒಂದು ದಿನ ಕೂಡ ಪಟ್ಟಣದಲ್ಲಿನ ಜನರಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಹತ್ತು ದಿನಗಳ ಕಾಲ ಕುಡಿಯುವ ನೀರು ಬರದಿದ್ದರೆ ಜನರು ಹೇಗೆ ಜೀವನ ನಡೆಸುತ್ತಾರೆ ಎಂದು ಯೋಚಿಸುವ ಗೋಜಿಗೂ ಹೋಗಿಲ್ಲ. ಪಟ್ಟಣದ ಒಂದೇ ಒಂದು ವಾರ್ಡ್‌, ಬಡಾವಣೆಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ: ಕಳೆದ ಆರು ತಿಂಗಳ ಹಿಂದೆ ಕಾರಂಜಾ ಜಲಾಶಯದಿಂದ ಪಟ್ಟಣಕ್ಕೆ ನೀರು ಪೂರೈಕೆ ಮಾಡುತ್ತಿದ್ದ ಜಾಕ್‌ವೆಲ್‌ ಮೋಟಾರ್‌ ಹಾಗೂ ಟಿಸಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ದುರಸ್ತಿಗೆ ಕಳುಹಿಸಲಾಗಿತ್ತು. ಆರು ತಿಂಗಳಾದರೂ ರಿಪೇರಿ ಆಗಿಲ್ಲ. ಒಂದು ಮೋಟಾರ್‌ ದುರಸ್ತಿಗೀಡಾದರೆ ಕೂಡಲೇ ಪರ್ಯಾಯ ಮೋಟರ್‌ ವ್ಯವಸ್ಥೆ ಮಾಡಬೇಕು ಎಂಬ ನಿಟ್ಟಿನಲ್ಲಿ ಎರಡು ಮೋಟಾರ್‌ ಮತ್ತು ಎರಡು ಟಿಸಿ ವ್ಯವಸ್ಥೆ ಮಾಡಲಾಗಿತ್ತು. ಕೂಡಲೇ ದುರಸ್ತಿ ಮಾಡಿದ್ದರೆ ಪಟ್ಟಣದಲ್ಲಿ ನೀರಿನ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ದುರಸ್ತಿ ಮಾಡಿಸುವಲ್ಲಿ ಪುರಸಭೆ ಮುಖ್ಯಾಧಿಕಾರಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತಾಲೂಕಿನ ಹುಡಗಿ ಪಂಪ್‌ ಹೌಸನಲ್ಲಿ ಮೋಟಾರ್‌ ಹಾಗೂ ಟಿಸಿ ದುರಸ್ತಿಗೆ ಕಳುಹಿಸಿದ್ದು ಇಂದಿಗೂ ಮರಳಿ ಬಂದಿಲ್ಲ. ಅದೇ ರೀತಿ ಕಾರಂಜಾ ಜಲಾಶಯದಲ್ಲಿನ ಮೋಟಾರ್‌ ಹಾಗೂ ಟಿಸಿ ರಿಪೇರಿಗೆ ಕಳುಹಿಸಿದ್ದು, ಇಂದಿಗೂ ಮರಳಿ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಪುರಸಭೆ ಸಿಬ್ಬಂದಿ ಹೇಳುತ್ತಾರೆ.

ಪ್ರತಿ ತಿಂಗಳು ಸಮಸ್ಯೆ: ಕಳೆದ ಅನೇಕ ತಿಂಗಳಿಂದ ಪ್ರತಿ ತಿಂಗಳು ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಆಗುತ್ತಿದೆ. ಯಾವ ಕಾರಣಕ್ಕೆ ಪದೇಪದೇ ಮೋಟಾರ್‌, ಟಿಸಿ ದುರಸ್ತಿಗೆ ಬರುತ್ತಿವೆ ಎಂದು ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಪ್ರಶ್ನಿಸುತ್ತಿದ್ದಾರೆ. ಆಯಾ ವಾರ್ಡ್‌ಗಳ ಜನರು ಸಮಸ್ಯೆಯನ್ನು ಸದಸ್ಯರಿಗೆ ಹೇಳಿಕೊಂಡರೆ, ಅವರು ಪುರಸಭೆ ಅಧಿಕಾರಿ ಯಾವುದೇ ಕೆಲಸ ಮಾಡುತ್ತಿಲ್ಲಎಂದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ ಹಳೆ ಪ್ರದೇಶದಲ್ಲಿನ ಕೊಳವೆಬಾವಿಗಳಲ್ಲಿ ಹಾಗೂ ತೆರೆದ ಬಾವಿಗಳಲ್ಲಿ ಉಪ್ಪು ನೀರು ಇದ್ದು, ಕುಡಿಯಲು ಯೋಗ್ಯವಾಗಿಲ್ಲ. ಪುರಸಭೆ ಕುಡಿಯುವ ನೀರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡು ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ. ಸ್ಥಳೀಯ ಶಾಸಕರು ಕೂಡ ನೀರಿನ ಸಮಸ್ಯೆಯತ್ತ ಮತ್ತು ಅಧಿಕಾರಿಗಳ ಕರ್ತವ್ಯದ ಕಡೆ ಗಮನಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೋಟಾರ್‌ ದುರಸ್ತಿಗೆ ಬಂದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ರಿಪೇರಿಗೆ ಕಳುಹಿಸಿದ ಮೋಟಾರ್‌ ಹಾಗೂ ಟಿಸಿ ಇಂದಿಗೂ ಬಂದಿಲ್ಲ. ಪಟ್ಟಣದ ವಿವಿಧೆಡೆ ಕೊಳವೆ ಬಾವಿಗಳಿದ್ದು, ಜನರು ನೀರು ಬಳಸುವಂತೆ ತಿಳಿಸಲಾಗಿದೆ.- ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ

ಕುಡಿಯುವ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಪುರಸಭೆ ಸದಸ್ಯರು ಕೂಡ ಗಮನಕ್ಕೆ ತಂದಿದ್ದಾರೆ. ಪದೇಪದೇ ನೀರಿನಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಆಡಳಿತಾ ಧಿಕಾರಿ ಬಸವಕಲ್ಯಾಣ ಸಹಾಯಕ ಆಯುಕ್ತರಿಗೆ ಪಟ್ಟಣಕ್ಕೆ ಆಗಮಿಸಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ತಿಳಿಸಿದ್ದೇನೆ. –ರಾಜಶೇಖರ ಪಾಟೀಲ, ಶಾಸಕರು ಹುಮನಾಬಾದ

 

-ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.