ಬೀದರನಲ್ಲಿ ಲಕ್ಷ ಹೆಕ್ಟೇರ್‌ ಬೆಳೆ ಹಾನಿ


Team Udayavani, Sep 21, 2020, 5:57 PM IST

bofara-tdy-2

ಭಾಲ್ಕಿ: ತಾಲೂಕಿನ ಬ್ಯಾಲಹಳ್ಳಿ (ಕೆ) ಗ್ರಾಮದ ಹೊರ ವಲಯದಲ್ಲಿನ ಕಾರಂಜಾ ಜಲಾಶಯಕ್ಕೆ ರವಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕಈಶ್ವರ ಖಂಡ್ರೆ ಭೇಟಿ ನೀಡಿ ಜಲಾಶಯದಲ್ಲಿನ ನೀರಿನ ಮಟ್ಟ ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಳೆಯಿಂದ ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಹೆಕ್ಟೇರ್‌ ಬೆಳೆ ಹಾನಿ ಆಗಿದ್ದು, ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಸ್ತೆ, ಸೇತುವೆಗಳು ಹಾಳಾಗಿವೆ. ಸಾಕಷ್ಟು ಕಡೆಗಳಲ್ಲಿ ಮನೆಗಳು ಕುಸಿತ ಕಂಡಿವೆ. ಮಳೆಯಿಂದ ಬಹುತೇಕ ಹೊಲಗಳು ಜಲಾವೃತಗೊಂಡಿವೆ. ಸೋಯಾಬಿನ್‌, ಉದ್ದು, ತೊಗರಿ ಬೆಳೆ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಸಮಾರೋಪಾದಿಯಲ್ಲಿ ಪ್ರವಾಹ ನಿರ್ವಹಿಸಲು ಜಿಲ್ಲೆಗೆ ತಕ್ಷಣ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ ಪರಿಹಾರ ನೀಡುವಂತೆ ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು.

ಜಿಲ್ಲೆಯ ರೈತರ ಜೀವನಾಡಿಯಾದ ಈ ಜಲಾಶಯದಲ್ಲಿ 7.69 ಟಿಎಂಸಿ ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಇದ್ದು, ಜಿಲ್ಲೆಯಲ್ಲಿ ಈ ಬಾರಿ ವ್ಯಾಪಕವಾಗಿ ಮಳೆಯಾದ ಪರಿಣಾಮ ಇದು ವರೆಗೂ 4 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಿದ್ದು, ಮುಂದಿನ ಕೆಲ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ. ಇದರಿಂದ ಜಿಲ್ಲೆಯಲ್ಲಿನ ಕುಡಿವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಮಂತ್ರಿಯಿದ್ದ ಸಂದರ್ಭದಲ್ಲಿಅತಿವಾಳ ಹಾಗೂ ಕಾರಂಜಾ ಏತ ನೀರಾವರಿ  ಯೋಜನೆ, 131 ಕಿಮೀ. ಬಲದಂಡೆ, 31 ಕಿಮೀ. ಎಡದಂಡೆ ಕಾಲುವೆ ಆಧುನೀಕರಣಕ್ಕೆ ಯೋಜನೆ ರೂಪಿಸಿ, ಅನುದಾನ ಬಿಡುಗಡೆಗೊಳಿಸಿದ್ದೇನೆ. ಇದೀಗ ಸಿಸಿ ಲೈನಿಂಗ್‌ ಕಾಮಗಾರಿ ಪೂರ್ಣಗೊಂಡಿದೆ. ತಾಲೂಕಿನ 29 ಸಾವಿರ ಹೆಕ್ಟೇರ್‌ ಭೂಮಿಗೆ ನೀರು ಹರಿಯಲಿದ್ದು, ರೈತರಿಗೆ ವರದಾನ ಆಗಲಿದೆ ಎಂದು ಹೇಳಿದರು.

4 ವರ್ಷಗಳ ಬಳಿಕ ಕಾರಂಜಾ ಭರ್ತಿ ಆಗುತ್ತಿದ್ದು, ಕೃಷ್ಣಾ ಕಣಿವೆಯಿಂದ ಪ್ರತಿ ವರ್ಷ ಕಾರಂಜಾ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಸಿಎಂ ಗಮನಕ್ಕೂ ತಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಬಸವಕಲ್ಯಾಣ ಸಹಾಯಕ ಆಯುಕ್ತ ಭುವನೇಶ ಪಾಟೀಲ, ತಹಶೀಲ್ದಾರ್‌ ಅಣ್ಣರಾವ್‌ ಪಾಟೀಲ, ಉಪ ತಹಶೀಲ್ದಾರ್‌ ದಿಲ್‌ರಾಜ ಪಸರಗಿ, ರಾಜಶೇಖರ ಪಾಟೀಲ, ಶಶಿಧರ ಕೋಸಂಬೆ ಇತರರು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.