ವಕೀಲರ ಜವಾಬಾರಿ ಹೆಚ್ಚಿದೆ: ಹುಕ್ಕೇರಿ
Team Udayavani, Dec 4, 2021, 5:42 PM IST
ಶಹಾಪುರ: ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ಅಪರಾಧ ಪ್ರಕರಣಗಳು ನೂತನ ಬಗೆಯಲ್ಲಿ ನಡೆಯುತ್ತಿರುವುದರಿಂದ ಅದನ್ನು ಎದುರಿಸಲು ವಕೀಲರು ಸಿದ್ಧರಾಗಬೇಕಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ ತಿಳಿಸಿದರು.
ನಗರದಲ್ಲಿ ವಕೀಲರ ಸಂಘವು ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವ ವಕೀಲರು ಸದಾ ಅಧ್ಯಯನ ಶೀಲರಾಗಬೇಕು. ನ್ಯಾಯಾಲಯದ ಕಲಾಪದಲ್ಲಿ ಹಿರಿಯ ವಕೀಲರು ವಾದ ಮಂಡಿಸುತ್ತಿರುವಾಗ ಅದನ್ನು ಗಮನವಿಟ್ಟು ಕೇಳಬೇಕು. ನಿರಂತರವಾಗಿ ಪರಿಶ್ರಮ ಮಾಡುತ್ತಾ ಕೆಲಸ ಮಾಡಬೇಕು. ಕಕ್ಷಿದಾರರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಶಾಂತಗೌಡ ವಿ. ಪಾಟೀಲ್ ಮಾತನಾಡಿದರು. ಸರ್ಕಾರಿ ಅಭಿಯೋಜಕ ವಿನಾಯಕ ಕೋಡ್ಲಾ, ಹಿರಿಯ ವಕೀಲರಾದ ಶ್ರೀನಿವಾಸರಾವ್ ಕುಲಕರ್ಣಿ, ಎಸ್.ಶೇಖರ, ಎಂ.ಆರ್. ಮಾಲಿ ಪಾಟೀಲ್, ಭೀಮನಗೌಡ, ನಾಜಿಯಾ ಬೇಗಂ, ಆರ್.ಎಂ. ಹೊನ್ನಾರಡ್ಡಿ, ವಿಶ್ವನಾಥರಡ್ಡಿ ಸಾಹು, ಯೂಸೂಫ್ ಸಿದ್ದಕ್ಕಿ, ಟಿ.ನಾಗೇಂದ್ರ, ವಿಶ್ವನಾಥರಡ್ಡಿ ಪಾಟೀಲ್, ಎಂ.ಎನ್. ಪೂಜಾರಿ, ಹೇಮರಡ್ಡಿ ಕೊಂಗಂಡಿ, ಸಂತೋಷ ಸತ್ಯಂಪೇಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್