ಲಾಕ್‌ಡೌನ್‌: ಬೀದಿಗೆ ಬಂತು ಛಾಯಾಗ್ರಾಹಕರ ಬದುಕು


Team Udayavani, Apr 28, 2020, 6:15 PM IST

BIDAR-TDY-1

ಬೀದರ: ದೇಶದಲ್ಲಿ ತಲ್ಲಣ್ಣ ಸೃಷ್ಟಿಸುತ್ತಿರುವ ಕೋವಿಡ್ 19 ಬಾಧೆ ಛಾಯಾಗ್ರಹಣ ಉದ್ಯಮಕ್ಕೂ ಪೆಟ್ಟು ನೀಡಿದೆ. ಲಾಕ್‌ಡೌನ್‌ದಿಂದಾಗಿ ಮದುವೆ ಸೇರಿ ಶುಭ ಕಾರ್ಯಗಳೆಲ್ಲವೂ ರದ್ದಾಗಿರುವುದರಿಂದ

ಫೋಟೋಗ್ರಾಫಿಯನ್ನೇ ನಂಬಿ ಬದುಕಿನ ಬಂಡಿ ಸಾಗಿಸುತ್ತಿದ್ದ ಜಿಲ್ಲೆಯ ನೂರಾರು ಛಾಯಾಗ್ರಾಹಕರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನಕ್ಕಾಗಿ ಕ್ಯಾಮರಾಗಳನ್ನೇ ಮಾರುವ ಸ್ಥಿತಿ ಬಂದಿದೆ. ಫೆಬ್ರವರಿಯಿಂದ ಜೂನ್‌ ತಿಂಗಳು ಮದುವೆ ಸಮಯ. ಕೋವಿಡ್ 19  ಸೋಂಕಿನ ಭೀತಿಯಿಂದ ಮದುವೆ ಸಮಾರಂಭಗಳಿಗೆ ತಡೆ ಬಿದ್ದಿದೆ. ಇದರಿಂದ ವೃತ್ತಿನಿರತ ಛಾಯಾಗ್ರಾಹಕರ ಉದ್ಯಮಕ್ಕೆ ಕೊರೊನಾ ದೊಡ್ಡ ಮಟ್ಟದ ಹೊಡೆತ ನೀಡಿದೆ. ಹಾಗಾಗಿ ಸಭೆ-ಸಮಾರಂಭಗಳಲ್ಲಿ ಚೆಂದದ ಚಿತ್ರಗಳನ್ನು ಸೆರೆ ಹಿಡಿದು ಎಲ್ಲರ ಮುಖದಲ್ಲೂ ನಗು ಅರಳಿಸುತ್ತಿದ್ದ ಛಾಯಾಗ್ರಾಹಕರ ಮುಖದ ಮೇಲಿನ ನಗುವೇ ಮಾಯವಾಗಿದೆ.

ಬದಲಾದ ಕಾಲಘಟ್ಟದಲ್ಲಿ ಫೋಟೋಗ್ರಾಫಿಯೂ ಸಹ ವೈವಿಧ್ಯತೆಗೆ ಒಳಗಾಗುತ್ತಿದೆ. ಸಮಾರಂಭಗಳ ಜತೆಗೆ ಪ್ರೀ ವೆಡ್ಡಿಂಗ್‌ನಂಥ ಫೋಟೋ ಶೂಟ್‌ ಗಳು ಹೆಚ್ಚುತ್ತಿವೆ. ಇದಕ್ಕಾಗಿ ತಂತ್ರಜ್ಞಾನಕ್ಕೆ ತಕ್ಕಂತೆ ಛಾಯಾಗ್ರಾಹಕರು ಉತ್ತಮ ದರ್ಜೆ ಕ್ಯಾಮೆರಾಗಳನ್ನು ಖರೀದಿಸಿದ್ದಾರೆ. ಇದಕ್ಕಾಗಿ ಎರಡೂ¾ರು ಲಕ್ಷ ರೂ. ಬಂಡವಾಳ ಹಾಕಿದ್ದಾರೆ. ಜತೆಗೆ ಪ್ರತ್ಯೇಕವಾದ ಎಲ್‌ ಇಡಿ ಪರದೆ, ಡ್ರೋಣ್‌ ಕ್ಯಾಮರಾ, ಶೂಟಿಂಗ್‌ ಮತ್ತು ಮಿಕ್ಸಿಂಗ್‌ ಯೂನಿಟ್‌ಗಳಿಗೆ ಲಕ್ಷಾಂತರ ರೂ. ಹೂಡಿದ್ದು, ಛಾಯಾಗ್ರಹಣವೂ ಸಹ ಉದ್ಯಮವಾಗಿ ಬೆಳೆದಿದೆ.

ಪ್ರತಿ ವರ್ಷ ಮದುವೆ ಸೀಸನ್‌ ದಿನಗಳಲ್ಲಿ 15-20 ಸಮಾರಂಭಗಳನ್ನು ಮಾಡುತ್ತ ಲಕ್ಷಾಂತರ ರೂಪಾಯಿಗಳ ಉತ್ತಮ ವಹಿವಾಟು ನಡೆಸುತ್ತಿದ್ದ ಛಾಯಾಗ್ರಾಹಕರು ಉಳಿದ ತಿಂಗಳು ನಾಮಕರಣ, ಮನೆ ವಾಸ್ತು, ಜನ್ಮದಿನದಂತಹ ಕಾರ್ಯಕ್ರಮ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಅನೇಕ ಯುವಕರ ಉದ್ಯೋಗಕ್ಕೆ ಈ ವ್ಯವಹಾರ ಆಶ್ರಯವೂ ಆಗಿದೆ. ಆದರೆ, ಈಗ ಛಾಯಾಗ್ರಾಹಣ ಉದ್ಯಮಕ್ಕೆ ಕೋವಿಡ್ 19 ಲಾಕ್‌ಡೌನ್‌ ಬರಸಿಡಿಲು ಬಡಿದಂತಾಗಿದ್ದು, ದುಡಿಮೆ ಕಿತ್ತುಕೊಂಡಿದೆ. ಬಹುತೇಕ ಮದುವೆಗಳು ಮುಂದೂಡಲಾಗಿದ್ದರೆ, ಕೆಲವರು ಸರಳವಾಗಿ ದೇವಸ್ಥಾನ, ನೋಂದಣಿ ಕಚೇರಿಯಲ್ಲಿ ಶುಭ ಕಾರ್ಯ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕೈಗೆ ಕೆಲಸವೂ ಇಲ್ಲದೇ, ಇತ್ತ ಗ್ರಾಹಕರಿಗೆ ಮುಂಗಡ ಹಣ ವಾಪಸ್‌ ನೀಡಲು ಸಹ ಸಾಧ್ಯವಾಗದೇ ಪರಿತಪಿಸುತ್ತಿದ್ದಾರೆ.

ಬೀದರ ನಗರ ಸೇರಿದಂತೆ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಛಾಯಾಗ್ರಾಹಕರಿದ್ದು, ವಿಡಿಯೋ ಮತ್ತು ಫೋಟೋಗ್ರಾಫಿ ವೃತ್ತಿ ರೂಢಿಸಿಕೊಂಡಿದ್ದಾರೆ. 90ಕ್ಕೂ ಹೆಚ್ಚು ಸ್ಟುಡಿಯೋಗಳು ನಡೆಸುತ್ತ ವ್ಯವಹರಿಸುತ್ತಾರೆ. ಕೆಲವರು ಮನೆಯಿಂದಲೇ ಆರ್ಡರ್‌ ತೆಗೆದುಕೊಂಡು ವಹಿವಾಟು ಮಾಡುತ್ತಿದ್ದಾರೆ. ಈಗ ಈ ವೃತ್ತಿಯನ್ನು ನಂಬಿರುವ ಕುಟುಂಬಗಳು ಬೀದಿಗೆ ಬಂದಿವೆ.

ಕೋವಿಡ್ 19  ಸೋಂಕು ಛಾಯಾಗ್ರಾಹಕರ ದುಡಿತಯನ್ನೇ ಕಿತ್ತುಕೊಂಡಿದೆ. ಲಾಕ್‌ಡೌನ್‌ದಿಂದಾಗಿ ಮದುವೆ ಸಮಾರಂಭಗಳು ರದ್ದಾಗಿ ಲಕ್ಷಾಂತರ ರೂ. ನಷ್ಟ ಆಗಿದೆ. ಕಾರ್ಯಕ್ರಮಗಳು ರದ್ದಾಗಿರುವುದರಿಂದ ಗ್ರಾಹಕರು ಕೊಟ್ಟ

ಮುಂಗಡ ಹಣವನ್ನು ಹಿಂದಿರುಗಿಸಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಇನ್ನೂ ಕೆಲಸಗಾರರ ಪರಿಸ್ಥಿತಿ ಹೇಳ ತೀರದ್ದಾಗಿದೆ. ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿದೆ.  ಉದಯ ಜೀರ್ಗೆ, ಸ್ಟುಡಿಯೋ ಮಾಲೀಕ

 

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.