ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ರಜೆ ನೀಡಿ


Team Udayavani, May 1, 2018, 3:48 PM IST

yad-1.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರನೇ ರಾಜ್ಯ ವೇತನ ಆಯೋಗ ತನ್ನ ಅಂತಿಮ ವರದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಶಿಫಾರಸು ಮಾಡಿದೆ.

ವೇತನ ಆಯೋಗದ ಅಧ್ಯಕ್ಷ ಎಂ.ಆರ್‌. ಶ್ರೀನಿವಾಸಮೂರ್ತಿ ಮತ್ತು ಸದಸ್ಯರು ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಸುಮಾರು 500 ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರದಿಯ ಅಂಶಗಳನ್ನು ಬಹಿರಂಗಪಡಿಸಲು ಆಯೋಗ ಮತ್ತು ಸರ್ಕಾರ ನಿರಾಕರಿಸಿದೆ. 

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಮತ್ತು ಪಿಂಚಣಿಗಳನ್ನು ಪರಿಷ್ಕರಿಸುವ ಕುರಿತು ಆಯೋಗ ಜ.31ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಶೇ. 30ರಷ್ಟು ವೇತನ ಪರಿಷ್ಕರಣೆಗೆ ಸೂಚಿಸಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಆಯೋಗದ ಅವಧಿ ಸೋಮವಾರಕ್ಕೆ ಕೊನೆಗೊಳ್ಳುತ್ತಿರುವುದರಿಂದ ತನ್ನ ಅಂತಿಮ ವರದಿ ಸಲ್ಲಿಸಿದ್ದು, ಕೆಲವು ಇಲಾಖೆಗಳಲ್ಲಿ ವೇತನ ನಿಗದಿ ಕುರಿತಂತೆ ಇರುವ ವ್ಯತ್ಯಾಸ, ಒಂದೇ ಹುದ್ದೆಯಲ್ಲಿರುವ ನೌಕರರ ಮಧ್ಯೆ ಇರುವ ವೇತನ ಅಸಮಾನತೆ ನಿವಾರಣೆ, ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ. 

ಹಿರಿಯ ನೌಕರರಿಗೆ ವೇತನ ಬಡ್ತಿ ಮತ್ತು ಫಿಟ್‌ ಮೆಂಟ್‌ ಕಡ್ಡಾಯವಾಗಿ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ ಉಚಿತ ಆರೋಗ್ಯ ಭದ್ರತೆ ಒದಗಿಸುವ ‘ಜ್ಯೋತಿ ಸಂಜೀವಿನಿ’ (ನಗದು ರಹಿತ ಚಿಕಿತ್ಸಾ ಸೌಲಭ್ಯ) ಅನುದಾನಿತ ಸಂಸ್ಥೆಗಳ ನೌಕರರಿಗೂ ನೀಡಬೇಕು ಮತ್ತು ಎಲ್ಲಾ ಕಾಯಿಲೆಗಳಿಗೂ ಅನ್ವಯ ಮಾಡಬೇಕು. ಸ್ವಯಂ ನಿವೃತ್ತಿ ಪಡೆಯಲು ಇರುವ ಗರಿಷ್ಠ ಸೇವಾವಧಿಯನ್ನು 33 ವರ್ಷದಿಂದ 30 ವರ್ಷಕ್ಕೆ ಇಳಿಸಬೇಕು ಎಂದು ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.

ನೌಕರರ ವೇತನದಲ್ಲಿ ಅಸಮಾನತೆ ಹೋಗಲಾಡಿಸಲು ಕೆಲ ಭತ್ಯೆಗಳನ್ನು ನೀಡುವಂತೆ ಮತ್ತು ತರ್ಕಬದ್ಧವಾಗಿ ವೇತನ ನಿಗದಿಪಡಿಸಬೇಕು ಎಂದು ಹೇಳಿದೆ. ಅಲ್ಲದೆ, ವೇತನ ಬಡ್ತಿ ನೀಡುವ ಸಂದರ್ಭದಲ್ಲಿ ನೌಕರರ ಕಾರ್ಯಕ್ಷಮತೆ ಪರಿಗಣಿಸಬೇಕು. ಈ ಮೂಲಕ ಸರ್ಕಾರಿ ನೌಕರರಲ್ಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಅವಕಾಶ ಕಲ್ಪಿಸಬೇಕು. ಇದರಿಂದ ಅವರ ಕಾರ್ಯಕ್ಷಮತೆ ಸುಧಾರಣೆಯಾಗಿ ಕೆಲಸಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಆಯೋಗ ಶಿಫಾರಸು ಮಾಡಿದೆ.

ಇದಲ್ಲದೆ, ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ತುಟ್ಟಿ ಭತ್ಯೆ ಸೂತ್ರದಲ್ಲಿ ಕೆಲವೊಂದು ಮಾರ್ಪಾಟುಗಳನ್ನು ಮಾಡಿಕೊಳ್ಳಬೇಕು. ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆ, ರಜೆ ಪ್ರಯಾಯಿತಿ, ವೈದ್ಯಕೀಯ ಮರುಪಾವತಿ ಪ್ರಮಾಣವನ್ನು ಪ್ರಸ್ತುತ ಹಣದುಬ್ಬರ ಪ್ರಮಾಣಕ್ಕೆ ತಕ್ಕಂತೆ ಹೆಚ್ಚಿಸಬೇಕು ಎಂದೂ ಆಯೋಗವು ತನ್ನ ಶಿಫಾರಸಿನಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆಯೂ ಆಯೋಗ ಕೆಲವು ಶಿಫಾರಸುಗಳನ್ನು ಮಾಡಿದ್ದು, ಪ್ರಸ್ತುತ ಇರುವ ಖಾಲಿ ಹುದ್ದೆಗಳ ಪೈಕಿ ಅಗತ್ಯವಿರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ನೌಕರರಿಗೆ ಆಗಾಗೆ ತರಬೇತಿ ನೀಡಬೇಕು ಎಂದು ಹೇಳಿದೆ. ಅಲ್ಲದೆ, ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರೊಂದಿಗೆ ಅವರಿಗೆ ನೀಡುವ ನಗದು ಪುರಸ್ಕಾರದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿರುವುದಾಗಿ ತಿಳಿದುಬಂದಿದೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.