ಚಿರತೆ ಪ್ರತ್ಯಕ್ಷ: ಶಾಸಕ-ಅಧಿಕಾರಿಗಳು ದೌಡು


Team Udayavani, Oct 14, 2021, 12:10 PM IST

10

ಹುಮನಾಬಾದ: ತಾಲೂಕಿನ ಹಣಕುಣಿ ಗ್ರಾಮದ ಹೊರವಲಯದಲ್ಲಿ ಚಿರತೆಗಳು ಪ್ರತ್ಯಕ್ಷವಾದ ಹಿನ್ನೆಲೆ ಬುಧವಾರ ಜಿಲ್ಲಾ ಅರಣ್ಯ ಅಧಿಕಾರಿ ಎಸ್‌. ಶಿವಸಂಕರ್‌ ಹಾಗೂ ಸ್ಥಳೀಯ ಶಾಸಕ ರಾಜಶೇಖರ ಪಾಟೀಲ್‌ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.

ಗ್ರಾಮದ ಹೊರವಲಯದ ಕಬ್ಬಿನ ಗದ್ದೆವೊಂದರಲ್ಲಿ ಚಿರತೆ ಹಾಗೂ ಚಿರತೆ ಮರಿ ಪತ್ತೆಯಾಗಿರುವ ಕುರಿತು ಅರಣ್ಯ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಕೂಡ ಗ್ರಾಮಕ್ಕೆ ಚಿರತೆ ಬಂದಿರುವ ಸುದ್ದಿ ತಿಳಿದು ಆತಂಕದಲ್ಲಿದ್ದಾರೆ. ಹೊಲಗಳ ಕಡೆಗೆ ತೆರಳಲು ರೈತರು ಹೆದರುತ್ತಿದ್ದಾರೆ. ಶೀಘ್ರದಲ್ಲಿಯೇ ಚಿರತೆ ಬಂಧನಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುವಂತೆ ಶಾಸಕರಿಗೆ ಒತ್ತಾಯಿಸಿದರು.

ಇದನ್ನೂ ಓದಿ:  ಅರಸೊತ್ತಿಗೆಯ ನಾಡಹಬ್ಬದಿಂದ ದಸರೆ ವೈಭವದ ಹೆಜ್ಜೆ ಗುರುತುಗಳು

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅರಣ್ಯ ಅಧಿಕಾರಿ, ಗ್ರಾಮಸ್ಥರು ಹಾಗೂ ರೈತರು ಅತಿ ಹೆಚ್ಚಿನ ಜಾಗೃತಿ ವಹಿಸಬೇಕು. ಸಂಜೆ ಹಾಗೂ ಬೆಳಿಗ್ಗೆ ಅವಧಿಯಲ್ಲಿ ಚಿರತೆಗಳು ಜಾಗೃತವಾಗಿರುತ್ತವೆ. ಉಳಿದ ಅವಧಿಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತವೆ. ಗ್ರಾಮದಲ್ಲಿ ಒಬ್ಬರೇ ಓಡಾಡುವುದು ಮಾಡಬೇಡಿ. ಮಕ್ಕಳು, ದನಕರುಗಳನ್ನು ಹೊಲದ ಕಡೆಗೆ ಸದ್ಯಕ್ಕೆ ತರುವುದನ್ನು ತಪ್ಪಿಸಿ. ಚಿರತೆಗಳ ಬಂಧನಕ್ಕೆ ಸಕಲ ಸಿದ್ಧತೆಗಳು ಮಾಡಿಕೊಂಡಿದ್ದೇವೆ. ಅದರ ಚಲನವಲನಗಳ ಬಗ್ಗೆ ಸತತ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಬೋನ್‌ ಕೂಡ ಸಿದ್ಧಪಡಿಸಲಾಗುತ್ತಿದ್ದು, ಆದಷ್ಟು ಬೇಗ ಚಿರತೆ ಬಂಧಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ| ಚದ್ರಶೇಖರ ಪಾಟೀಲ, ತಾಲೂಕು ಅರಣ್ಯಾಧಿಕಾರಿ ಬಸವರಾಜ ಡಾಂಗೆ, ತಹಶೀಲ್ದಾರ್‌ ನಾಗಯ್ನಾ ಹಿರೇಮಠ, ಕಂದಾಯ ಇಲಾಖೆಯ ಶ್ರೀನಾಥ, ಅರಣ್ಯ ಸಿಬ್ಬಂದಿಗಳಾದ ಸಂತೋಷ ನಾಯ್ಕೊಡೆ, ಅಂಬಾದಾಸ ಪಲಾಟಿ, ಗೊಂಡೆರಾವ ಶಾಖಾ, ರವಿರೂಪ ಸಿಂಗ್‌, ಸಂಜುಕುಮಾರ, ಮಾಳಪ್ಪಾ, ಸಂಗಮೇಶ್ವರ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.