ಕುಷ್ಠ ರೋಗ ನಿರ್ಮೂಲನೆ ಜಾಗೃತಿ
Team Udayavani, Feb 5, 2018, 12:53 PM IST
ಬಸವಕಲ್ಯಾಣ: ಕುಷ್ಠ ರೋಗಿಗಳನ್ನು ಎಲ್ಲರಂತೆ ಕಾಣವ ಮನೋಭಾವ ಪ್ರತಿಯೊಬ್ಬರಲ್ಲೂ ಬರಬೇಕು ಎಂದು
ಆರ್ಬಿಟ್ ಸಂಸ್ಥೆ ಸಂಯೋಜಕ ತುಕ್ಕಾರಡ್ಡಿ ಹೇಳಿದರು.
ಕೌಡಿಯಾಳ(ಆರ್) ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ಪರ್ಶ ಕುಷ್ಠರೋಗ ಅರಿವಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಷ್ಠ ರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು. ಕುಷ್ಠರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರ ಎಂಬ ರೋಗಾಣುವಿನಿಂದ ಬರುತ್ತದೆ.
ವೈದ್ಯರ ಸಲಹೆಯಂತೆ ನಿಯಮಿತವಾಗಿ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಎಂದು
ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ವಿಶ್ವನಾಥ ಬಿರಾದಾರ ಮಾತನಾಡಿ, ಕುಷ್ಠ ಬಂದರೆ ಹೆದರುವ ಅಗತ್ಯವಿಲ್ಲ. ರೋಗಿಗಳು ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು
ಎಂದರು.
ಆರ್ಬಿಟ್ ಸಂಸ್ಥೆಯ ಕಾರ್ಯಕರ್ತ ಜ್ಞಾನೇಶ್ವರ ಹಾರಕೂಡೆ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮುಖರಾದ ಕಾಶಿನಾಥ ಕಾಟೆ, ಸತೀಶ ಕುಲಕರ್ಣಿ, ಲಕ್ಷ್ಮಣ ಜಮಾದರ, ರಮೇಶ ಪಾಟೀಲ ಇದ್ದರು. ರಾಘವೇಂದ್ರ ಪವಾರ ಸ್ವಾಗತಿಸಿ, ನಿರೂಪಿಸಿದರು. ವೀರೇಂದ್ರ ಬಿರಾದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!