“ಸಮಾಜಮುಖೀ ಸಾಹಿತ್ಯ ರಚನೆ ಹೆಚ್ಚಾಗಲಿ”


Team Udayavani, Aug 14, 2022, 4:23 PM IST

7social-work

ಬೀದರ: ಪ್ರಸ್ತುತ ಸಮಾಜದಲ್ಲಿ ಪ್ರಶ್ನಿಸುವ ಗುಣದೊಂದಿಗೆ ಸಮಾಜ ಮುಖೀಯಾದಂಥ ಸಾಹಿತ್ಯ ರಚನೆ ಇನ್ನಷ್ಟು ಅವಶ್ಯಕತೆ ಇದೆ ಎಂದು ಖ್ಯಾತ ನಟ, ಸಾಹಿತಿ ಸುಚೇಂದ್ರ ಪ್ರಸಾದ್‌ ಹೇಳಿದರು.

ನಗರದಲ್ಲಿ ಜಿಲ್ಲಾ ಕಸಾಪ ಮತ್ತು ಕಪ್ಪಣ್ಣ ಅಂಗಳ ಬೆಂಗಳೂರು ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಪಾರ್ವತಿ ವಿ. ಸೋನಾರೆ ಅವರ “ಅಪ್ಪನೊಳಗೊಬ್ಬ ಅವ್ವ’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಒಂದು ಪುಸ್ತಕ ಬಿಡುಗಡೆ ಮಾಡುವುದು ಎಂದರೆ ವಿಚಾರಧಾರೆಗಳನ್ನು ಅನಾವರಣಗೊಳಿಸುವುದು ಎಂದರ್ಥ. ಜತೆ ಜತೆಗೆ ಲೋಕಾರ್ಪಣೆಗೊಳ್ಳುತ್ತದೆ ಎಂದರೆ ಆ ವೇದಿಕೆ ಅನೇಕ ಪ್ರಥಮಗಳಿಗೆ ಸಾಕ್ಷಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಒಂದು ಸ್ಥಿತಿಯಿಂದ ಮತ್ತೂಂದು ಸ್ಥಿತಿಗೆ ಬದಲಾಗುವ ಈ ಕಾಲಘಟ್ಟದಲ್ಲಿ ಹಿತ ಅನ್ನಿಸುವಂಥ ಸಹಿತದ ಸಾಹಿತ್ಯ ರಚನೆಯಾಗುತ್ತಿರುವುದು ಉತ್ತಮ ಬೆಳವಣಿಗೆ. ಪ್ರತಿ ಪದ ಮತ್ತು ಅಕ್ಷರಕ್ಕೆ ನಾನಾ ಅರ್ಥ ಇದೆ. ಒಂದೊಂದು ಲೇಖನದಲ್ಲಿ ಎಷ್ಟೊಂದು ಅರ್ಥಗಳು ಅಡಗಿ ಕುಳಿತಿರುತ್ತವೆ. ಹಾಗಾಗಿ ಯಾವದೇ ಗ್ರಂಥವನ್ನು ಅಲ್ಪ ಎಂದು ಕಡೆಗಣಿಸದಿರಿ. ಕಂಬಳಿ ಹೊತ್ತು ಮಲಗುವ ನಮ್ಮಂಥವರಿಗೆ ಹಿರಿಯರು ತಮ್ಮ ಸಾಹಿತ್ಯದ ಮೂಲಕ ಬಡಿದೆಬ್ಬಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದ ಸುಚೇಂದ್ರ ಪ್ರಸಾದ್‌, ಪಾರ್ವತಿ ಅವರ ಈ ಕೃತಿಯಲ್ಲಿ ಯಾವುದೂ ಕಪೋಲಕಲ್ಪಿತ ಕಥೆಗಳಲ್ಲ, ಅನೇಕರ ಜೀವನದ ವ್ಯಥೆಗಳಾಗಿವೆ. ಸತ್ಯ ಸಂಗತಿಯನ್ನು ಪರಾಮರ್ಶಿಸುವ ದಿಸೆಯಲ್ಲಿ ಸತ್ವಯುತವಾದ ಸಾಹಿತ್ಯ ಹೊರತಂದಿದ್ದಾರೆ ಎಂದು ಬಣ್ಣಿಸಿದರು.

ಪ್ರಾಚಾರ್ಯ ಡಾ| ಬಸವರಾಜ ಬಲ್ಲೂರ, “ಅಪ್ಪನೊಳಗೊಬ್ಬ ಅವ್ವ’ ಕೃತಿ ವೈಚಾರಿಕ ಲೇಖನಗಳ ಗುತ್ಛವಾಗಿದೆ. ಕೋವಿಡ್‌ ಸಂದಿಗ್ಧ ಸ್ಥಿತಿಯಲ್ಲಿನ ಜನರ ಯಾತನೆ, ತಲ್ಲಣ್ಣ ಮತ್ತು ಸುತ್ತಲಿನ ಜಗತ್ತಿನ ಒಟ್ಟು ಚಿತ್ರಣಗಳನ್ನು ತಮ್ಮ ಬರಹಗಳ ಮೂಲಕ ಹಿಡಿದಿಡುವ ಕೆಲಸ ಮಾಡಿದ್ದಾರೆ. ಮಹಿಳೆಯರ ಅಸ್ಮತೆಯ ಬಗ್ಗೆಯೂ ಇಲ್ಲಿದೆ. ಹಾಗಾಗಿ ಈ ಲೇಖನಗಳನ್ನು ಸಂಶೋಧನಾ ದೃಷ್ಟಿಯಿಂದ ನೋಡಬೇಕಾಗಿದೆ ಎಂದು ಹೇಳಿದರು.

ಡಾ| ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್‌ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಚಿಂತಕಿ ಗುರಮ್ಮಾ ಸಿದ್ಧಾರೆಡ್ಡಿ ಮತ್ತು ಲೇಖಕಿ ಪಾರ್ವತಿ ಸೋನಾರೆ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಂಘಟಕ ಶ್ರೀನಿವಾಸ ಜಿ. ಕಪ್ಪಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಕೆ ಫೌಂಡೇಶನ್‌ ಅಧ್ಯಕ್ಷ ಗುರುನಾಥ ಕೊಳ್ಳೂರ, ಜೆ.ಎನ್‌ ಡಪಳಾಪೂರ್‌ ವೇದಿಕೆಯಲ್ಲಿದ್ದರು.

ಹಿರಿಯ ರಂಗಕರ್ಮಿ ಕಪ್ಪಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಮೈಸೂರು, ಬೆಂಗಳೂರು ಕೇಂದ್ರೀತ ಜನ ಕೂಪಮಂಡೂಕರಾಗಿ ಈ ಭಾಗದ ಕಲೆ, ಸಾಹಿತ್ಯಗಳಿಗೆ ಪರಂಪರೆಯೇ ಇಲ್ಲ ಎಂಬಂತೆ ಕಡೆಗಣಿಸುತ್ತಿರುವ ಹೊತ್ತಿನಲ್ಲಿ ಇಳಿವಯಸ್ಸಿನ ಕಪ್ಪಣ್ಣ ಈ ಪ್ರದೇಶದತ್ತ ಮುಖ ಮಾಡಿದ್ದು, ಇನ್ನೂ ಪ್ರವೇಶವೇ ಮಾಡದ ವಿವಿಧ ವಲಯಗಳು ಪರಮಾರ್ಶೆಗೊಳ್ಳಲಿ. ಅದಕ್ಕೆ ನಾವೆಲ್ಲರೂ ಸಮಿಪವರ್ತಿಗಳಾಗಿ ಸಹಯೋಗ ನೀಡುತ್ತೇವೆ. -ಸುಚೇಂದ್ರ ಪ್ರಸಾದ್‌ ಖ್ಯಾತ ನಟ, ಸಾಹಿತಿ

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.