ಕುವೈತ್‌ ಗೃಹ ಬಂಧನದಲ್ಲಿದ್ದ ಯುವಕರಿಗೆ ಮುಕ್ತಿ


Team Udayavani, Sep 8, 2017, 1:39 PM IST

BID-2.jpg

ಬೀದರ: ನಕಲಿ ಏಜೆಂಟರ ಮೋಸದಿಂದ ಬದುಕು ಕಟ್ಟಿಕೊಳ್ಳಲು ಕುವೈತ್‌ಗೆ ತೆರಳಿ ಗೃಹ ಬಂಧನದಲ್ಲಿದ್ದ ಜಿಲ್ಲೆಯ ಯುವಕರಿಗೆ ಮುಕ್ತಿ ಸಿಕ್ಕಿದೆ.ಮಾಧ್ಯಮದಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ನಕಲಿ ಏಜೆಂಟರು ಯುವಕರಿಗೆ ಸೌಲಭ್ಯ ಕಲ್ಪಿಸಿದ್ದು, ಭಾರತಕ್ಕೆ ಮರಳಿ ಬರಲು ವ್ಯವಸ್ಥೆ ಮಾಡಿಸಿದ್ದಾರೆ.

ಕೈ ತುಂಬಾ ಹಣ ಸಂಪಾದಿಸುವ ಆಸೆಯಿಂದ ಹುಮನಾಬಾದ ತಾಲೂಕಿನ 13 ಜನ ಯುವಕರು ವೀಸಾ ಏಜೆಂಟರ ಮೋಸದಾಟಕ್ಕೆ ಸಿಲುಕಿ ಸಂಕಷ್ಟಕ್ಕೆ ಸಿಲುಕಿದ್ದರು. ಕುವೈತ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡಲು ಮುಂಬೈ ಮೂಲಕ ತೆರಳಿದ್ದ ಪ್ರತಿಯೊಬ್ಬ ಯುವಕರಿಂದ 80 ಸಾವಿರ ರೂ. ಪಡೆದು ಟೂರಿಸ್ಟ್‌ ವೀಸಾ ನೀಡಿ ಮೋಸ ಮಾಡಲಾಗಿತ್ತು. ವೀಸಾ ಅವಧಿ ಮುಗಿದಿದ್ದು, ಕಳೆದ 10 ದಿನದಿಂದ ಕಟ್ಟಡವೊಂದರಲ್ಲಿ ಕೂಡಿ ಹಾಕಿ ಕೆಲಸವನ್ನೂ ಕೊಡದೆ, ಅನ್ನ ನೀರು ನೀಡದೇ ಕಿರುಕುಳ ನೀಡಲಾಗುತ್ತಿತ್ತು.

ಗೃಹ ಬಂಧನದಲ್ಲಿದ್ದ ಯುವಕರು ಸಾಮಾಜಿಕ ಜಾಲತಾಣ ವಾಟ್ಸ್‌ಆ್ಯಪ್‌ ಸಂದೇಶದ ಮೂಲಕ ಆತಂಕಕಾರಿ ಮಾಹಿತಿ ನೀಡಿದ್ದರು. ತಮಗಾದ ವಂಚನೆ, ಅನುಭವಿಸುತ್ತಿರುವ ನರಳಾಟದ ಬಗ್ಗೆ ಮಾಧ್ಯಮದ ಮಿತ್ರರೊಬ್ಬರಿಗೆ ವಿಡಿಯೋ
ಸಂದೇಶ ರವಾನಿಸಿ, ನಮ್ಮನ್ನು ಜೀತದಾಳು ಮಾಡಿಕೊಳ್ಳುವ ಭೀತಿ ಇದ್ದು, ಬಂಧನದಿಂದ ಮುಕ್ತ ಮಾಡಲು ಸಹಕರಿಸುವಂತೆ ಮನವಿ ಮಾಡಿದ್ದರು. ಈ ಕುರಿತು “ಉದಯವಾಣಿ’ ಬುಧವಾರದ ಸಂಚಿಕೆಯಲ್ಲಿ “ಕುವೈತ್‌ನಲ್ಲಿ
ಬೀದರನ 13 ಯುವಕರಿಗೆ ಗೃಹ ಬಂಧನ’ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ವರದಿ ಗಮನಿಸಿದ ನಕಲಿ ಏಜೆಂಟರು ಗಾಬರಿಗೊಂಡು ಬಂಧನದಲ್ಲಿರುವ ಯುವಕರನ್ನು ಸಂಪರ್ಕಿಸಿ ಊಟ ಸೇರಿದಂತೆ ಇತರ ವ್ಯವಸ್ಥೆ ಮಾಡಿದ್ದಾರೆ. ವೀಸಾ ಅವಧಿ ಮುಗಿದು ಹಣ ಇಲ್ಲದೇ ಹೆಣಗಾಡುತ್ತಿದ್ದ ನಾಲ್ವರು ಯುವಕರಿಗೆ ಸ್ವದೇಶಕ್ಕೆ ವಾಪಸ್‌ ಬರಲು ಟಿಕೆಟ್‌ ಕಳುಹಿಸಿದ್ದಾರೆ. ಚಂದ್ರಕಾಂತ ಬಸವಕಲ್ಯಾಣ, ಆನಂದ, ಪರಶುರಾಮ ಸಿಂದಗಿ
ಮತ್ತು ಗೌತಮ ಮಂಗಲಗಿ ಎಂಬ ಯುವಕರು ಕುವೈತ್‌ ಏರ್‌ಪೋರ್ಟ್‌ನಿಂದ ಹೊರಟಿದ್ದು ವಾಯಾ ಮಸ್ಕತ್‌ ಮೂಲಕ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಭಾರತಕ್ಕೆ ವಾಪಸ್ಸಾಗುತ್ತಿರುವ ಬಗ್ಗೆ ಯುವಕರು ಖುದ್ದು ವಿಡಿಯೋ ಸಂದೇಶ ಕಳುಹಿಸಿದ್ದಾರೆ.

ಇನ್ನುಳಿದ 9 ಯುವಕರನ್ನೂ ಸ್ವದೇಶಕ್ಕೆ ಕರೆತರಲು ಏಜೆಂಟರು ವ್ಯವಸ್ಥೆ ಮಾಡಿದ್ದಾರೆ. ಮಾಧ್ಯಮದ ಸುದ್ದಿಯಿಂದ ಕೊನೆಗೂ ಗೃಹ ಬಂಧನದಲ್ಲಿದ್ದ ಯುವಕರು ನಿಟ್ಟಿಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.