ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ಐಸಿ ಪಾತ್ರ ಅಪಾರ


Team Udayavani, Feb 8, 2019, 9:13 AM IST

bid-2.jpg

ಬೀದರ: ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ ಐಸಿ ಪ್ರತಿನಿಧಿಗಳ ಪಾತ್ರ ಅಪಾರವಾಗಿದೆ ಎಂದು ದಕ್ಷಿಣ ಮಧ್ಯ ವಲಯದ ಅಧ್ಯಕ್ಷ ಮಲ್ಲಿಕಾರ್ಜುನ್‌ ನಾಡಗೌಡ ಅಭಿಪ್ರಾಯಪಟ್ಟರು.

ನಗರದ ಶಿವನಗರದ ಪಾಪನಾಶ ಕಲ್ಯಾಣ ಮಂಟಪದಲ್ಲಿ ಗುರುವಾರ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ರಾಯಚೂರು ವಿಭಾಗ ಮಟ್ಟದ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ ವೃತ್ತಿ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪಂಚವಾರ್ಷಿಕ ಯೋಜನೆಗಳಲ್ಲಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಕೋಟಿಗಟ್ಟಲೆ ಹಣ ಹೂಡಲಾಗುತ್ತದೆ. ಇದು ನಿಜಕ್ಕೂ ನಮ್ಮ ಪ್ರತಿನಿಧಿಗಳ ಶ್ರಮದ ಫಲವಾಗಿರುವುದು ಹೆಮ್ಮೆಯ ಸಂಕೇತ ಎಂದರು. 

1956ರಲ್ಲಿ ಭಾರತೀಯ ಜೀವ ವಿಮಾ ನಿಗಮ ಆರಂಭವಾಯಿತು. 2000 ಇಸವಿ ವರೆಗೆ ಇದೊಂದೇ ಏಕಸ್ವಾಮ್ಯ ವಿಮಾ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಿರುವ ಹೆಗ್ಗಳಿಕೆ ಇದೆ. 1956ಕ್ಕೂ ಮುನ್ನ 244 ವಿಮಾ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದವು. 1944ರಲ್ಲಿ ಎಸ್‌. ಎಸ್‌. ಅಲಿ ಅವರು ಐಎಲ್‌ಯು ಸಂಘಟನೆ ಹುಟ್ಟು ಹಾಕಿದರು. 1956ರಲ್ಲಿ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳಿಗೆ ಕೊಡಲಾಗುವ ಕಮಿಷನ್‌ ರದ್ದುಪಡಿಸಲು ಆಗಿನ ಸರ್ಕಾರ ಮುಂದಾದಾಗ ಅಲಿ ಅವರು ದೇಶಾದ್ಯಂತ ಹೋರಾಟ ಮಾಡಿ ಕಮಿಷನ್‌ ರದ್ದತಿ ಬಿಲ್‌ಅನ್ನು ನಿಲ್ಲಿಸುವಲ್ಲಿ ಯಶಸ್ಸು ಕಂಡರು. ಆದ್ದರಿಂದ ಅಲಿ ಅವರನ್ನು ಎಲ್‌ ಐಸಿ ಪಾಲಿನ ಭೀಷ್ಮ ಎಂದು ಕರೆಯಲಾಗುತ್ತದೆ ಎಂದು ವಿವರಿಸಿದರು.

2000ರ ನಂತರ ದೇಶದಲ್ಲಿ ಎಲ್‌ಐಸಿಗೆ ಪ್ರತಿಸ್ಪರ್ಧಿಗಳಾಗಿ 25 ವಿಮಾ ಕಂಪನಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ನಾವಿಂದು ಸ್ಪರ್ಧೆಗಿಳಿಯಬೇಕಿದೆ. ಸಂಘಟನೆಯಲ್ಲಿ ಶಕ್ತಿಯಿದೆ ಎಂಬುದನ್ನು ತೋರಿಸಬೇಕಿದೆ. ವಿದ್ಯೆ ಹಾಗೂ ವಿನಯವನ್ನು
ಮೈಗೂಡಿಸಿಕೊಂಡು ನಮ್ಮ ಪ್ರಾಣ, ಮಾನ ಕಾಪಾಡಿಕೊಳ್ಳಲು ವೃತ್ತಿಪರ ಪ್ರತಿನಿಧಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಹೇಳಿದರು.

ಎಲ್‌ಐಸಿ ರಾಯಚೂರು ಹಿರಿಯ ವಿಭಾಗಾಧಿಕಾರಿ ಕೆ.ಆರ್‌. ವೆಂಕಟೇಶ ಪ್ರಸಾದ ಮುಖ್ಯ ಅತಿಥಿಗಳಾಗಿ ಮಾತನಾಡಿ, ದೇಶಾದ್ಯಂತ ಒಟ್ಟು 113 ವಿಭಾಗೀಯ ಶಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ರಾಯಚೂರು ವಿಭಾಗ ಈ ಬಾರಿ ಮೂರನೇ ಸ್ಥಾನಕ್ಕೆ ತಲುಪಿರುವುದು ಹೆಮ್ಮೆಯ ಸಂಗತಿಯಾಗಿದೆ. 

ಇದಕ್ಕೆಲ್ಲ ನಮ್ಮ ಜೀವ ವಿಮಾ ನಿಗಮದ ಅಧಿಕಾರಿಗಳು ಹಾಗೂ ವೃತ್ತಿಪರ ಪ್ರತಿನಿಧಿಗಳಾದ ತಮ್ಮ ಸಮನ್ವಯತೆ ಪ್ರಮುಖ ಕಾರಣವಾಗಿದೆ. ಮುಂದಿನ ಎರಡು ತಿಂಗಳಲ್ಲಿ ಉಳಿದ ಕಾರ್ಯ ಪೂರ್ಣಗೊಳಿಸಿ ಸಶಕ್ತ ಎಲ್‌ಐಸಿ ಕಂಪನಿಯಾಗಿ ನಿಲ್ಲಲು ಕೈ ಜೋಡಿಸಬೇಕೆಂದು ಕರೆ ನೀಡಿದರು. ಜೀವನದಲ್ಲಿ ಮೂರು ಪ್ರಮುಖ ಆಯ್ಕೆಗಳಿವೆ. ಕೇವಲ ಪ್ರತಿನಿಧಿಯಾಗಿ ಕೆಲಸ ಮಾಡುವುದು, ವೃತ್ತಿಪರರತೆಯಾಗಿ ಎದ್ದು ನಿಲ್ಲವುದು. ಇದನ್ನು ಸಂರಕ್ಷಿಸಿಕೊಳ್ಳಲು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕಾಗುತ್ತದೆ ಎಂದರು.

ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ ಬಿರಾದಾರ, ಎಲ್‌ಐಸಿ ರಾಯಚೂರು ವಿಭಾಗದ ಮಾರುಕಟ್ಟೆ ಪ್ರಬಂಧಕ ಸುಬ್ರಮಣಿಯನ್‌, ಲಿಯಾಫಿ (ಲೈಫ್‌ ಇನ್‌ಶೂರೆನ್ಸ್‌ ಏಜೆಂಟ್ಸ್‌ ಫೆಡರೆಷನ್‌ ಆಫ್‌ ಇಂಡಿಯಾ) ರಾಯಚೂರು ವಿಭಾಗದ ಕಾರ್ಯದರ್ಶಿ ಕೆ.ಮಲ್ಕಾಜಯ್ನಾ, ಕೆ.ತಿರುಮಲರೆಡ್ಡಿ, ಬೀದರ್‌ ಎಲ್‌ಐಸಿ ಶಾಖಾಧಿಕಾರಿ ರಮೇಶ ಗಾಯಬಾ, ಉಪ ಶಾಖಾಧಿಕಾರಿ ಆರ್‌.ಬಸನಗೌಡ, ಎಲ್‌ಐಸಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಎಸ್‌.ಡಿ.ಎಚ್‌. ಬಾಬಾ, ಬಿ.ಈಶ್ವರ, ಬಿ.ನಾಗರಾಜ, ಎಂ.ಕಂದಕೂರ, ರಾಜಶೇಖರ ಲಾಡಿ, ಎಂ.ನಾಗಪ್ಪ , ವೆಂಕಟೇಶ ಉದಬಾಳ, ರಮೇಶ ದಳವಾಯಿ, ಸುಧಿಧೀರ, ಗಣಪತಿ ಸೋಲಪುರೆ ವೇದಿಕೆಯಲ್ಲಿದ್ದರು. ಶಿವಶರಣಪ್ಪ ಹಣಮಶೆಟ್ಟಿ, ವೀರಣ್ಣ ಬ್ಯಾಗೋಟ್ಟಿ, ಧನರಾಜ ಸ್ವಾಮಿ, ಪ್ರಭು ಹಾವಶೆಟ್ಟಿ ಹಾಗೂ ಎಲ್‌ಐಸಿ ಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.