ಬಡ-ನಿರ್ಗತಿಕರಿಗೆ ಬೆಳಕು ಶಿವಕುಮಾರ ಸ್ವಾಮೀಜಿ
Team Udayavani, Sep 8, 2018, 11:39 AM IST
ಬೀದರ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅನ್ನ, ಅರಿವೆ, ಆಸರೆಯೊಂದಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಲಕ್ಷಾಂತರ ಬಡ, ನಿರ್ಗತಿಕ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ್ದಾರೆ ಎಂದು ಪತ್ರಕರ್ತ ನಾಗೇಶ ಪ್ರಭಾ ಹೇಳಿದರು.
ನೌಬಾದ್ನ ಬಸವ ಮಂಟಪದಲ್ಲಿ ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳು ಮತ್ತು ಹಿತೈಶಿಗಳ ಸಂಘ, ಶರಣ ಸಂಸ್ಕೃತಿ ಪ್ರಸಾರ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಶತಮಾನದ ಸಂತ ಶಿವಕುಮಾರ ಸ್ವಾಮೀಜಿ ಕುರಿತ ವಿಚಾರ ಸಂಕಿರಣ
ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮೀಜಿ ಅವರ ಕೃಪೆಯಿಂದಾಗಿ ಅಸಂಖ್ಯಾತ ಜನ ಬದುಕು ಕಟ್ಟಿಕೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಲ್ಲಿ ಇದ್ದಾರೆ. ಸ್ವಾಮೀಜಿ ಈ ಶತಮಾನದ ಅಪರೂಪದ ಮಹಾಸ್ವಾಮಿಗಳು ಆಗಿದ್ದಾರೆ. ಅವರ ಕಾರ್ಯಗಳನ್ನು ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ. ಯಾವುದೇ ಫಲಾಪೇಕ್ಷೆಯಿಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಶಿವಕುಮಾರ ಪಾಟೀಲ ಮಾತನಾಡಿ, ಸಿದ್ಧಗಂಗಾ ಮಠ ಸರ್ವ ಧರ್ಮ ಸಮನ್ವಯದ ಕೇಂದ್ರವಾಗಿದೆ. ಬಡವರು, ಅನಾಥ ಮಕ್ಕಳ ಆಶ್ರಯ ತಾಣವಾಗಿದೆ. ಸರ್ಕಾರದ ಕಾರ್ಯವನ್ನು ಶಿವಕುಮಾರ ಸ್ವಾಮೀಜಿ ಮಾಡುತ್ತಿದ್ದಾರೆ. ಅವರು ಭಾರತ ರತ್ನ ಪ್ರಶಸ್ತಿಗೆ ಎಲ್ಲ ರೀತಿಯಿಂದಲೂ ಅರ್ಹರಾಗಿದ್ದಾರೆ. ಅವರಿಗೆ ಪ್ರಶಸ್ತಿ ನೀಡಿದರೆ ಭಾರತರತ್ನದ ಗೌರವವೇ ಹೆಚ್ಚಾಗಲಿದೆ. ಕೇಂದ್ರ ಸರ್ಕಾರ ಅವರ ಜೀವಿತಾವಧಿಯಲ್ಲೇ ಪ್ರಶಸ್ತಿ ನೀಡಿದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸಿದ್ಧಗಂಗಾ ಮಠದ ಸಾವಿರಾರು ಹಳೆಯ ವಿದ್ಯಾರ್ಥಿಗಳು ಇದ್ದಾರೆ. ಎಲ್ಲರೂ ಒಂದುಗೂಡಿ ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳ ಸಂಘದ ಜಿಲ್ಲಾ ಘಟಕ ಅಸ್ತಿತ್ವಕ್ಕೆ ತರಲಾಗಿದೆ. ಶಿವಕುಮಾರ ಸ್ವಾಮೀಜಿ ಅವರ ಆಶಯದಂತೆ ಎರಡು ವರ್ಷಗಳಿಂದ ವಿವಿಧ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ, ಸಾಹಿತಿ ಶ್ರೀದೇವಿ ಹೂಗಾರ, ಕಲ್ಯಾಣರಾವ್ ಚಳಕಾಪುರೆ ಮಾತನಾಡಿದರು. ಶರಣ ಸಂಸ್ಕೃತಿ ಪ್ರಸಾರ ವೇದಿಕೆ ಅಧ್ಯಕ್ಷ ಸಿದ್ರಾಮಪ್ಪ ಕಪಲಾಪುರ, ದೇವೇಂದ್ರ ಕೊಳಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ