ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ನಿಲ್ಲದು: ಕಿರಣಕುಮಾರ
Team Udayavani, Jul 18, 2022, 5:35 PM IST
ಭಾಲ್ಕಿ: ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟ ಪ್ರಾರಂಭಿಸಿ ಇಂದಿಗೆ 5 ವರ್ಷಗಳು ಗತಿಸಿವೆ. ಲಿಂಗಾಯತರು ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೆ ಸುಮ್ಮನಿರುವೆವು ಎಂದು ಜಾಗತಿ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಕಿರಣಕುಮಾರ ಖಂಡ್ರೆ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರವಿವಾರ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟದ 5ನೇ ವರ್ಷದ ಸಾಂಕೇತಿಕ ಧರಣಿ ನಿಮಿತ್ತ ಬಸವ ಧರ್ಮ ಧ್ವಜ ಹಾರಿಸಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸ್ವತಂತ್ರ ಧರ್ಮದ ಹೋರಾಟ ತಣ್ಣಗಾಗಿತ್ತು. ಜು.17, 2018ರಿಂದ ಇಂದಿನ ವರೆಗೆ 5 ವರ್ಷಗಳ ಕಾಲದಿಂದಲೂ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೇವೆ. ಕೋವಿಡ್ ಮಹಾಮಾರಿ ತಣ್ಣಗಾಗಿದೆ. ಆದರೆ, ಲಿಂಗಾಯತ ಹೋರಾಟದ ಗತಿ ತಣ್ಣಗಾಗದು ಎಂದು ಹೇಳಿದರು.
ವಿಶ್ವಕ್ರಾಂತ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, ಲಿಂಗಾಯತ ಮಠಾಧಿಧೀಶರ ಒಕ್ಕೂಟ ಕಟ್ಟಿಕೊಂಡ ಮಠಾಧಿ àಶರು ಬಸವಣ್ಣವರ ಹೆಸರಿನಲ್ಲಿ ಮಠಗಳ ಅಭಿವೃದ್ಧಿ, ಆಸ್ತಿ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡ ಲಿಂಗಾಯತರು ಇಂದು ಬೀದಿ ಪಾಲಾಗುತ್ತಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಬಸವದಳದ ಅಧ್ಯಕ್ಷ ಶ್ರೀಕಾಂತ ಭೊರಾಳೆ ಮಾತನಾಡಿದರು. ಡಾ| ಅಮೀತ ಅಷ್ಟೂರೆಯವರಿಂದ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖಂಡರಾದ ಜೈರಾಜ ಕೊಳ್ಳಾ, ನಾಗಶೆಟ್ಟೆಪ್ಪ ಲಂಜವಾಡೆ, ದತ್ತುಕುಮಾರ ಕರಕಾಳೆ, ದೀಪಕ ಸಿಂಧೆ, ವೈಜಿನಾಥ ತಗಾರೆ, ರಾಜಕುಮಾರ ಜಲೆª, ಪ್ರಕಾಶ ಜವಳಗಾ, ಈಶ್ವರ ಕಿನೆಗಾವೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ