ಲಿಂಗಾಯತ ಧರ್ಮೋದಯ ದಿನಾಚರಣೆ ಕಾರ್ಯಕ್ರಮ
Team Udayavani, Jan 16, 2022, 2:16 PM IST
ಬಸವಕಲ್ಯಾಣ: ಲಿಂಗಾಯತ ಧರ್ಮ ಸೃಷ್ಟಿಯ ಬೀಜರೂಪದ ಧರ್ಮವಾಗಿದೆ. ಸೃಷ್ಟಿಯ ಎಲ್ಲ ಮೌಲ್ಯಗಳು, ಗುಣಗಳು ಹೊತ್ತುಕೊಂಡು ಬಂದ ಧರ್ಮವಾಗಿದೆ. ಇದರಲ್ಲಿ ಯಾವುದೇ ಅನೈಸರ್ಗಿಕವಾದುದಿಲ್ಲ. ಮನುಷ್ಯ ಮನೋತ್ಪತ್ತಿಯ ಯಾವುದೇ ಕಲ್ಮಶ ಇದರಲಿಲ್ಲ. ಇದು ಅತ್ಯಂತ ವೈಜ್ಞಾನಿಕವಾಗಿದೆ ಎಂದು ಡಾ| ಗಂಗಾಂಬಿಕಾ ಅಕ್ಕ ನುಡಿದರು.
ನಗರದ ಹರಳಯ್ಯನವರ ಗವಿಯಲ್ಲಿ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮ ಕ್ಷೇದ್ರದ ವತಿಯಿಂದ ನಡೆದ ಲಿಂಗಾಯತ ಧರ್ಮೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿಜ್ಞಾನ ಏನು ಹೇಳುತ್ತದೆ ಅಂದರೆ ವಿಶ್ವ ಅನ್ ಡಿಜೈನ್ಆಗಿದೆ. ಅಂದರೆ ಯಾರು ವಿನ್ಯಾಸ ಮಾಡಲಾರದೆ ಹುಟ್ಟಿದೆ. ಡಿಜೈನ್ ಮಾಡುವದು ಅಂದರೆ ಪರಮಾತ್ಮ ಮೇಲೆ ಎಲ್ಲೊ ಕುಳಿತಿದ್ದಾನೆ. ಅವನು ಇದನ್ನು ನಿರ್ಮಾಣ ಮಾಡುತ್ತಿದ್ದಾನೆ ಎಂದು ಕೆಲವು ಧರ್ಮಗಳು ಹೇಳುತ್ತಿವೆ. ಆದರೆ, ವಿಜ್ಞಾನ ಏನು ಹೇಳುತ್ತದೆ ಅಂದರೆ ಸೃಷ್ಟಿ ಸ್ವಯಂ ನಿರ್ಮಿತ ಸ್ವಯಂ ಸಿದ್ಧ ಅದಕ್ಕೆ ಯಾರು ಡಿಜೈನ್ ಮಾಡಿಲ್ಲ. ಹಾಗೆ ಮನುಷ್ಯನು ಸೃಷ್ಟಿಯ ಅಂಗವೇ ಇದ್ದಾನೆ. ಅವನು ಸೃಷ್ಟಿಯ ಹಾಗೆ ಸ್ವಯಂ ನಿರ್ಮಿತ ಇದ್ದಾನೆ. ಅವನಿಗೆ ಯಾರು ನಿರ್ಮಾಣ ಮಾಡಿಲ್ಲ. ಅದಕ್ಕೆ ಬಸವಣ್ಣನವರು ಕೊಟ್ಟ ಧರ್ಮ ಮಾನವ ಆಧಾರಿತ ಧರ್ಮವಾಗಿದೆ. ಶೂನ್ಯ ಸ್ವರೂಪಿ ಪರಮಾತ್ಮ ಎಲ್ಲರೊಳಗೆ ಇದ್ದಾನೆ. ಅದಕ್ಕೆ ನಿನ್ನೊಳಗಿನ ಶಕ್ತಿ ನಿನ್ನ ಪರಮಾತ್ಮ. ಅದನ್ನೇ ನೀನು ಆರಾಧಿಸಬೇಕು ಎಂದರು.
ಶ್ರೀ ಸತ್ಯಕ್ಕತಾಯಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಬಸವತತ್ವ ಪ್ರಸಾರ ಕೇಂದ್ರದ ಅಧ್ಯಕ್ಷ ಶಂಕ್ರಣ್ಣ ಕೊಳಕೂರ, ಜಗನ್ನಾಥ ಕುಶನೂರೆ, ಗಣಪತಿ ಕಾಸ್ತೆ, ಇಂದುಮತಿ ಅಬ್ದಗಿರೆ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ