ಸಾಹಿತ್ಯ ಬದುಕಿನ ಬಹುದೊಡ್ಡ ಮಾರ್ಗದರ್ಶಿ: ಪ್ರೊ| ಶಶಿಕಲಾ


Team Udayavani, Aug 19, 2017, 1:02 PM IST

bidar 6.jpg

ಬೀದರ: ತನ್ನನ್ನು ತಾನು ಅರಿತು, ತನ್ನನ್ನು ಹಾಗೂ ಸಮಾಜವನ್ನು ಗೌರವಿಸುವ ಮೌಲ್ಯವನ್ನು ಸಾಹಿತ್ಯ ಕಲಿಸುತ್ತದೆ. ಬದುಕಿನ ಪರೀಕ್ಷೆಯಲ್ಲಿ ಪಾಸಾಗಲು ನಮಗೆ ಸಾಹಿತ್ಯ ದಾರಿದೀಪವಾಗಿದೆ ಎಂದು ಬೆಂಗಳೂರಿನ ಹಿರಿಯ ಸಾಹಿತಿ ಪ್ರೊ|ಶಶಿಕಲಾ ವೀರಯ್ನಾಸ್ವಾಮಿ ಹೇಳಿದರು. ನಗರದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆತ್ಮಸೌಂದರ್ಯವೇ ನಿಜವಾದ ಸೌಂದರ್ಯವಾಗಿದೆ. ಆ ಮೂಲಕ ಸಾಹಿತ್ಯ ಬದುಕಿನ ಬಹುದೊಡ್ಡ ಮಾರ್ಗದರ್ಶಿಯಾಗಿ ನಮ್ಮ ಉತ್ತಮ ಬದುಕಿಗೆ ಪೂರಕವಾಗಿದೆ ಎಂದು ಹೇಳಿದರು. ಕಾಲೇಜು ಪ್ರಾಚಾರ್ಯ ಪ್ರೊ| ಬಿ.ಕೆ.ಮಠಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೀತ, ಸಾಹಿತ್ಯ, ಇನ್ನಿತರ ಲಲಿತ ಕಲೆಗಳು ಮಾನವರಲ್ಲಿ ಉನ್ನತ ಮೌಲ್ಯಗಳನ್ನು ಬಿತ್ತುತ್ತವೆ. ಸಾಹಿತ್ಯದ ಓದು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತದೆ. ವಿದ್ಯಾರ್ಥಿ
ಜೀವನದಲ್ಲಿಯೇ ಸಾಹಿತ್ಯದ ಓದಿನ ಗೀಳು ಬೆಳೆಸಿಕೊಳ್ಳಬೇಕು ಎಂದರು. ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್‌.ವಿ. ಕಲ್ಮಠ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸೂಕ್ತ ವೇದಿಕೆ ಸಿಗದಿರುವುದರಿಂದ ಪ್ರತಿಭೆಗಳು ಬೆಳಕಿಗೆ ಬಾರದಂತಾಗಿವೆ. ಸರ್ಕಾರದ ಅಕಾಡೆಮಿಗಳ ಮೂಲಕ ಜಿಲ್ಲೆಗೆ ಉತ್ತಮ ಕಾರ್ಯಕ್ರಮಗಳನ್ನು ತಂದು ಪ್ರತಿಭಾವಂತರಿಗೆ ಅವಕಾಶ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಜಾನಪದ ಅಕಾಡೆಮಿ ಸದಸ್ಯ
ವಿಜಯಕುಮಾರ ಸೋನಾರೆ ಮಾತನಾಡಿ, ಜಿಲ್ಲೆಯಲ್ಲಿ ಇರುವ ಅಜ್ಞಾತ ಕಲಾವಿದರಿಗೆ ಜಾನಪದ ಅಕಾಡೆಮಿ ಮೂಲಕ ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಕೊಡಲು ಪ್ರಯತ್ನಿಸುತ್ತೇನೆ. ಅಳಿವಿನ ಅಂಚಿನಲ್ಲಿರುವ ಜಾನಪದ ಕಲೆಗಳನ್ನು ಸಂರಕ್ಷಿಸಿ ಬೆಳೆಸಲು ಶ್ರಮಿಸುವೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಪ್ರೊ|ಉಮಾಕಾಂತ ಮೀಸೆ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಕರುನಾಡು ವೇದಿಕೆಯ ಗೌರವಾಧ್ಯಕ್ಷ ಸಂಜೀವಕುಮಾರ ಅತಿವಾಳೆ ವೇದಿಕೆಯಲ್ಲಿದ್ದರು. ಭಾರತಿ ವಸ್ತ್ರದ, ಶಂಭುಲಿಂಗ ವಾಲೊªಡ್ಡಿ, ವಿ.ಎಂ. ಡಾಕುಳಗಿ, ಎಂ.ಪಿ. ಮುಧಾಳೆ, ಸುಬ್ಬಣ್ಣಾ ಕರಕನಳ್ಳಿ, ಸುಲೋಚನಾ ಬಿರಾದಾರ, ಎಸ್‌. ಪ್ರಭು, ರಾಮರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು. ಗಿರೀಶ ಕುಲಕರ್ಣಿ ಸ್ವಾಗತಿ ಸಿದರು. ಶಾಮರಾವ್‌ ನೆಲವಾಡೆ ನಿರೂಪಿಸಿದರು. ಏಕನಾಥ ಸುಣಗಾರ ವಂದಿಸಿದರು. ನಾಡಿನ ಹೆಸರಾಂತ ರಂಗಕರ್ಮಿ ಏಣಗಿ ಬಾಳಪ್ಪನವರು ನಿಧನರಾದ ಹಿನ್ನೆಲೆಯಲ್ಲಿ ಸಭೆಯಲ್ಲಿ ಮೌನ ಆಚರಿಸಿ ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.