ಅಧ್ಯಾತ್ಮ ಸಾಧನೆಯಿಂದ ಬದುಕು ಸುಂದರ: ಬಸವಲಿಂಗ ಶ್ರೀ


Team Udayavani, Jul 26, 2017, 10:12 AM IST

26-BID-4.jpg

ಬೀದರ: ಶರೀರವು ಶ್ರೀಗಂಧದ ಪೆಟ್ಟಿಗೆಯಂತಿದ್ದು, ಅದರಲ್ಲಿರುವ ವಿಷಯಾಸಕ್ತ ಅರಿಷಡ್ವರ್ಗಗಳನ್ನು ಹೊರಹಾಕಿ ಅಧ್ಯಾತ್ಮಿಕ ಸಾಧನೆ ಮಾಡಿ ಬದುಕು ಸುಂದರಗೊಳಿಸಿಕೊಳ್ಳಬೇಕು ಎಂದು ಭಾಲ್ಕಿಯ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು. 

ನಗರದ ಡಾ| ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಶ್ರಾವಣಮಾಸ ನಿಮಿತ್ತ ಆಯೋಜಿಸಿರುವ “ಬಸವ ತತ್ವ ದರ್ಶನ’ ಪ್ರವಚನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಕೃತಿಯ ಸೌಂದರ್ಯದ ಮಧ್ಯದಲ್ಲಿ ದೇವರು ನಮ್ಮನ್ನು ಹುಟ್ಟಿಸಿದ್ದಾನೆ. ಶರಣರ ಅನುಭಾವಗಳು ನಮಗೆ ಬದುಕಿನ ಸುಂದರ ಪಾಠ ಕಲಿಸುತ್ತವೆ. ಶರಣರ- ಸಂತರ ಸತ್ಯದ ನುಡಿಗಳೇ ದೇವತ್ವವನ್ನು ಪಡೆಯುವ ಮಾರ್ಗವಾಗಿದೆ. ಶರಣರ-ಸಂತರ ಬದುಕು ಸುಖ ದುಃಖದ ಸಮ್ಮಿಲತದಿಂದ ಕೂಡಿದ್ದಾಗಿದೆ. ಅವರ ಬದುಕು ನಮಗೆ ಸಂಜೀವಿನಿ ಇದ್ದಂತೆ ಎಂದರು.

ನಗರಸಭೆ ಉಪಾಧ್ಯಕ್ಷೆ ಶಾಲಿನಿ ಚಿಂತಾಮಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕಾಗಿ ಶೈಕ್ಷಣಿಕ, ಪ್ರಸಾದ ದಾಸೋಹ, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ಹಿರೇಮಠ ಸಂಸ್ಥಾನ ತೊಡಗಿಸಿಕೊಂಡಿದ್ದು, ಡಾ| ಬಸವಲಿಂಗ ಪಟ್ಟದ್ದೇವರು ಬಡ ದಿನ ದಲಿತ ಮಕ್ಕಳ ಕಣ್ಮಣಿಯಾಗಿದ್ದಾರೆ ಎಂದರು. ನಾಗರಿಕರು ಪ್ಲಾಸ್ಟಿಕ್‌ ಬಳಸುವುದನ್ನು ನಿಷೇಧಿ ಸಿ, ಬಟ್ಟೆ ಚೀಲ ಬಳಸುವ ಮನೋಭಾವವುಳ್ಳವರಾಗಿ ಪ್ರಕೃತಿಯಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದರು. 

ಪ್ರವಚನಕಾರರಾದ ಶ್ರೀ ಮಹಾಲಿಂಗ ಸ್ವಾಮೀಜಿ ಮಾತನಾಡಿ, ನಿಜವಾದ ಬದುಕಿನ ಅರಿವು ಪಡೆಯುವುದು ಪ್ರವಚನದ ಉದ್ದೇಶವಾಗಿದೆ. ಶರಣರ, ಸಂತರ, ದೇವರ ಚಿಂತನೆ ಇದಾಗಿದೆ. ಬದುಕಿನ ಮೌಲ್ಯಗಳನ್ನು ಅರಿತುಕೊಳ್ಳಬೇಕಾದರೆ ಸಾಧಕನಿಗೆ ಚಿಂತನೆಯ ಅವಶ್ಯಕತೆ ಇದೆ. ಬಸವ ತತ್ವ ಚಿಂತನೆಯಿಂದ ಬದುಕಿನ ವಾಸ್ತವಿಕ ದರ್ಶನವಾಗಲು ಸಾಧ್ಯವಿದೆ ಎಂದರು.
ಬಾಬು ವಾಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ ಮಕ್ಕಳಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಬೇಕಾದರೆ
ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಬೇಕು. ಮತ್ತು ವಿಶ್ವಕ್ಕೆ ಬಸವ ತತ್ವ ಸಂದೇಶ ತಲುಪಬೇಕಾದರೆ ಧರ್ಮಕ್ಕೆ ಮಾನ್ಯತೆ ದೊರಕಬೇಕೆಂದು ಹೇಳಿದರು. ಡಾ| ವೈಜಿನಾಥ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. 

ಪ್ರೊ| ಎಸ್‌.ಬಿ. ಬಿರಾದಾರ, ಪಿ. ಸಂಗಪ್ಪಾ, ಕಾಮಶೆಟ್ಟಿ ಚಿಕಬಸೆ ವೇದಿಕೆಯಲ್ಲಿದ್ದರು. ಪ್ರಮುಖರಾದ ಮಲ್ಲಿಕಾರ್ಜುನ ಹುಡಗೆ, ಸಂಗ್ರಾಮಪ್ಪಾ ಬಿರಾದಾರ, ಶ್ರೀಕಾಂತ ಬಿರಾದಾರ, ಶಿವಕುಮಾರ ಭಾಲ್ಕೆ, ಶ್ರೀಕಾಂತ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ಪ್ರೊ| ಉಮಾಕಾಂತ ಮೀಸೆ ಸ್ವಾಗತಿಸಿದರು. ಬಸವರಾಜ ರುದನೂರ ನಿರೂಪಿಸಿದರು. ಯೋಗೇಂದ್ರ ಯದ್ಲಾಪುರೆ ವಂದಿಸಿದರು.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.