ಗಡಿನಾಡಲ್ಲಿ ರಂಗೇರಿದ ಹಳ್ಳಿ ಫೈಟ್‌

ಮತಕ್ಕಾಗಿ ಹಣ- ಹೆಂಡದ ಹೊಳೆ,ಅಭ್ಯರ್ಥಿ ಖರ್ಚು-ವೆಚ್ಚಕ್ಕಿಲ್ಲ ಕಡಿವಾಣ

Team Udayavani, Dec 21, 2020, 5:04 PM IST

ಗಡಿನಾಡಲ್ಲಿ ರಂಗೇರಿದ ಹಳ್ಳಿ ಫೈಟ್‌

ಬೀದರ: ಗಡಿ ನಾಡು ಬೀದರನಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ “ಹಳ್ಳಿ ಫೈಟ್‌’ ಮತ್ತಷ್ಟು ರಂಗೇರಿದೆ. ಮತದಾರ ಪ್ರಭುಗಳನ್ನು ಸೆಳೆಯಲು ರಣತಂತ್ರ ರೂಪಿಸಿರುವ ಅಭ್ಯರ್ಥಿಗಳು ತೆರೆ ಮೆರೆಯಲ್ಲಿ ಕಸರತ್ತುಗಳನ್ನು ನಡೆಸುತ್ತಿದ್ದು, ತೀವ್ರ ಚಳಿ ನಡುವೆಯೂ ಗ್ರಾಮಗಳಲ್ಲಿ ಅಖಾಡದ ಕಾವು ಜೋರಾಗಿದೆ.

ಗಡಿ ಜಿಲ್ಲೆ ಬೀದರನಲ್ಲಿ 178 ಗ್ರಾಪಂಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಗ್ರಾಪಂ ಪಕ್ಷ ರಹಿತ ಚುನಾವಣೆ ಆಗಿದ್ದರೂ ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ದೃಷ್ಟಿಯಿಂದ ಹೆಚ್ಚು  ಮಹತ್ವ ಪಡೆದಿದ್ದು, ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯಾಗಿಸಿಕೊಂಡಿದ್ದಾರೆ. ಹೀಗಾಗಿ ಜಿಲ್ಲೆಯ ಚುನಾಯಿತ ಪ್ರತಿನಿ ಧಿಗಳು ತಮ್ಮ ಪಕ್ಷಗಳ ಬೆಂಬಲಿಗರನ್ನು ಗೆಲ್ಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಡಿ.22ರಂದು ಬಸವಕಲ್ಯಾಣ, ಹುಲಸೂರ, ಭಾಲ್ಕಿ, ಹುಮನಾಬಾದ ಮತ್ತು ಚಿಟಗುಪ್ಪಾ ತಾಲೂಕುಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಕದನಕ್ಕೆ ಇನ್ನೂ ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಮಿನಿ ಸಮರದ ಕಣವಾಗಿ ಮಾರ್ಪಟ್ಟಿದೆ. ಹೇಗಾದರೂ ಸರಿ ಈ ಬಾರಿ ಪಂಚಾಯತ ಗದ್ದುಗೆ ಏರಲೇಬೇಕೆಂಬ ಆಸೆ ಹೊತ್ತಿರುವ ಕದನ ಕಲಿಗಳು ಕೋವಿಡ್‌-19 ಆತಂಕವನ್ನೇ ಬದಗಿಟ್ಟು ತಮ್ಮ ಚಿಹ್ನೆ ಗುರುತುಗಳೊಂದಿಗೆ ಬಿರುಸಿನ ಪ್ರಚಾರಕ್ಕೆ ಇಳಿದಿದ್ದಾರೆ. ಬಹುತೇಕರು ಫೆಸ್‌ಬುಕ್‌, ವಾಟ್ಸ್‌ ಆ್ಯಪ್‌ ಮೂಲಕ ಡಿಜಿಟಲ್‌ ಪ್ರಚಾರದ ಮೊರೆ ಹೋಗಿದ್ದಾರೆ.

ಇನ್ನೂ ಅಧಿಕಾರ ವಿಕೇಂದ್ರೀಕರಣದಿಂದಾಗಿ ಪಂಚಾಯತಗಳಿಗೆ ಅನುದಾನ ಹರಿದು ಬರುತ್ತಿರುವ ಕಾರಣ ಗ್ರಾಪಂ ಚುನಾವಣೆ ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿದೆ. ಜತೆಗೆ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ  5 ವರ್ಷಕ್ಕೆ ನಿಗದಿಪಡಿಸಿರುವುದು, ಸ್ಥಳೀಯವಾಗಿ ಜನರ ಕೆಲಸ ಮಾಡಿಕೊಟ್ಟು ರಾಜಕೀಯಕ್ಷೇತ್ರದಲ್ಲಿ ಬೆಳೆಯಬಹುದೆಂಬ ಆಸೆ ಸಣ್ಣಪುಟ್ಟ ನಾಯಕರಲ್ಲಿ ಬೆಳೆಯುತ್ತಿರುವುದರಿಂದ ಯುವ ಸಮೂಹ ಸ್ಪರ್ಧೆಗಿಳಿದಿದ್ದು, ಜಿದ್ದಾ ಜಿದ್ದಿನ ಪೈಪೋಟಿಗೆ ವೇದಿಕೆ ಸಿದ್ಧವಾಗುತ್ತಿದೆ. ಪ್ರತಿ ಗ್ರಾಮ, ಓಣಿಗಳಲ್ಲಿ ಚುನಾವಣೆಯದ್ದೇ ಸದ್ದು. ಪಂಚಾಯತಿ ಕಟ್ಟೆ, ಹೊಟೇಲ್‌ಗ‌ಳು,ಸಭೆ- ಸಮಾರಂಭಗಳಲ್ಲಿ ಕದನದ ಚರ್ಚೆ ನಡೆಯುತ್ತಿದೆ.

78 ಗ್ರಾಪಂ, 3151 ಸದಸ್ಯ ಸ್ಥಾನ :  ಗಡಿ ಜಿಲ್ಲೆ ಬೀದರನಲ್ಲಿ ಒಟ್ಟು 185 ಗ್ರಾಪಂಗಳ ಪೈಕಿ 7 ಪಂಚಾಯತಿ ಅವಧಿ ಇನ್ನೂ ಮುಗಿದಿಲ್ಲ. ಹೀಗಾಗಿ 178 ಗ್ರಾಪಂಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 1047 ಕ್ಷೇತ್ರಗಳ 3151 ಸದಸ್ಯ ಸ್ಥಾನಕ್ಕೆ ಚುನಾವಣೆ ಜರುಗಲಿದ್ದು, 9,99,001 ಜನರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಬೀದರ ರಾಜ್ಯದಲ್ಲೇ ಇವಿಎಂ ಬಳಸುತ್ತಿರುವ ಏಕೈಕೆ ಜಿಲ್ಲೆ ಆಗಿದೆ.

ಹಣ- ಹೆಂಡದ ಸುರಿಮಳೆ :  ಇನ್ನೂ ಪಂಚಾಯತ ಕದನಕ್ಕೆ ಖರ್ಚು-ವೆಚ್ಚಕ್ಕೆ ಮಿತಿ ಇಲ್ಲವಾದ್ದರಿಂದ ಅಭ್ಯರ್ಥಿಗಳು ತೆರೆ ಮರೆಯಲ್ಲಿ ಹಣ- ಹೆಂಡದ ಹೊಳೆ ಹರಿಸುತ್ತಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧದ ನಡುವೆಯೂ ಅಭ್ಯರ್ಥಿಗಳು ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿರುವ ಮದ್ಯವನ್ನು ಮಿತಿ ಮೀರಿ ಹಂಚುತ್ತಿದ್ದಾರೆ. ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಿರುವ ಬೆಂಬಲಿಗರಿಗಾಗಿ ಹಳ್ಳಿಗಳ ಹೊರ ವಲಯದ ದಾಬಾಗಳು ನಿತ್ಯ ಬುಕ್‌ ಆಗಿರುತ್ತಿದ್ದು, ಗುಂಡು- ತುಂಡಿನ ವ್ಯವಸ್ಥೆ ಎಗ್ಗಿಲ್ಲದೇ ಸಾಗಿದೆ. ವಿಶೇಷವಾಗಿ ಎಂದಿಗೂ ಹುಟ್ಟು ಹಬ್ಬಗಳನ್ನು ಆಚರಿಸಿಕೊಳ್ಳದವರು ಸಹ ಇದೇ ನೆಪದಲ್ಲಿ ಭರ್ಜರಿ ಬಾಡೂಟ ಮಾಡಿಸುವುದು, ಸಾರ್ವಜನಿಕ ಕಾರ್ಯಕ್ಕೆ ಹಣ ಖರ್ಚು ಮಾಡಿ ಓಲೈಸಿಕೊಳ್ಳುತ್ತಿದ್ದಾರೆ.

 

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.