ಲಾಕ್ ಡೌನ್ ಎಫೆಕ್ಟ್: ಮದ್ಯ, ಊಟ ಸಿಗದೆ ಕಾರ್ಮಿಕ ಆತ್ಮಹತ್ಯೆ
Team Udayavani, Mar 29, 2020, 2:49 PM IST
ಬೀದರ್: ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ಲಾಕ್ ಡೌನ್ ಪರಿಣಾಮ ಸಮಯಕ್ಕೆ ಸರಿಯಾಗಿ ಊಟ ಸಿಗದ ಕಾರಣ ಭಾಲ್ಕಿಯಲ್ಲಿ ಹೋಟೆಲ್ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೀದರ ಜಿಲ್ಲೆಯ ಭಾಲ್ಕಿಯಲ್ಲಿ ಈ ಘಟನೆ ನಡೆದಿದ್ದು, ಭಾಸ್ಕರ್( 41) ಎಂಬಾತ ಭಾಲ್ಕಿ ಪಟ್ಟಣದ ಝರಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಂದಾಪುರ ಮೂಲದವನಾಗಿರುವ ಭಾಸ್ಕರ್ ಬಾಲ್ಕಿ ಪಟ್ಟಣದ ಗಾಂಧಿ ವೃತ್ತ ಹತ್ತಿದ ಉಡುಪಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನು.
ಲಾಕ್ ಡೌನ್ ನಂತರ ಕೆಲಸವಿಲ್ಲ. ಹಣ ಇಲ್ಲ. ಊಟದ ಸಮಸ್ಯೆ ಆಗಿತ್ತು. ಇದರೊಟ್ಟಿಗೆ ಈತನು ಕುಡಿತದ ಚಟ ಹೊಂದಿದ್ದ. ಕುಡಿಯಲು ಮದ್ಯ ಇಲ್ಲ, ಊಟಕ್ಕೂ ಹಣವಿಲ್ಲ. ಇದೆಲ್ಲದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು