ಮದುವೆಗಾಗಿ ಕಚೇರಿಗೆ ಬೀಗ!
Team Udayavani, Nov 16, 2021, 2:24 PM IST
ಮಸ್ಕಿ: ಖಾಸಗಿ ಕಾರ್ಯಕ್ರಮಕ್ಕಾಗಿ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಚೇರಿಗೆ ಬೀಗ ಹಾಕಿದ ಘಟನೆ ತಾಲೂಕಿನ ಗುಡದೂರು ಗ್ರಾಮದಲ್ಲಿ ನಡೆದಿದೆ.
ಬೇರೆ ತಾಲೂಕಿನಲ್ಲಿ ಸಹಕಾರಿ ಸ್ವಾಮ್ಯದ ಬ್ಯಾಂಕ್ ಸಿಬ್ಬಂದಿಯೊಬ್ಬರ ಮದುವೆ ಕಾರ್ಯಕ್ರಮದ ನಿಮಿತ್ತ ಗುಡದೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿ ಸಮಯದಲ್ಲಿ ಕಚೇರಿಗೆ ಬೀಗ ಹಾಕಿ ತೆರಳಿದ್ದು ಕಾನೂನು ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ರೈತ ಸಂಘ (ಕೆಆರ್ಎಸ್) ತಾಲೂಕು ಘಟಕದ ಅಧ್ಯಕ್ಷ ಸಂತೋಷ ಹಿರೇದಿನ್ನಿ ಆರೋಪಿಸಿದ್ದಾರೆ.
ಈಗಾಗಲೇ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ನಡೆದಿವೆ. ಕಚೇರಿಗೆ ಬೀಗ ಹಾಕಿದ್ದರಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ಪಿಕೆಎಸ್ಎಸ್ಎನ್ ಕೇಂದ್ರಕ್ಕೆ ಆಗಮಿಸಿದ್ದ ರೈತರು ಪರದಾಡಿ ವಾಪಸ್ ಹೋದ ಘಟನೆ ನಡೆದವು. ಕಚೇರಿ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಖಾಸಗಿ ಕೆಲಸಕ್ಕೆ ಹೋದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂತೋಷ ಹಿರೇದಿನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಹಕಾರ ಇಲಾಖೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ