ಬೀದರ ಜಿಲ್ಲೆಗೆ “ಮಹಾ’ ಗಂಡಾಂತರ


Team Udayavani, Jun 9, 2020, 7:28 AM IST

ಬೀದರ ಜಿಲ್ಲೆಗೆ “ಮಹಾ’ ಗಂಡಾಂತರ

ಬೀದರ: ಮಹಾರಾಷ್ಟ್ರದ ನಂಟಿನಿಂದ ಬೀದರನಲ್ಲಿ ಆರ್ಭಟಿಸುತ್ತಿರುವ ಕೋವಿಡ್ ಸೋಂಕಿನಿಂದಾಗಿ ಮುಂಬರುವ ದಿನಗಳಲ್ಲಿ ಗಂಡಾಂತರ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಅತಿ ಹೆಚ್ಚು 48 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ತ್ರಿಶತಕದತ್ತ ದಾಪುಗಾಲು ಹಾಕುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಸೋಮವಾರ ಪತ್ತೆಯಾಗಿರುವ ಹೊಸ ಪ್ರಕರಣಗಳಲ್ಲಿ ಒಂದು ಕೇಸ್‌ (ಪಿ-2968)ರ ಸಂಪರ್ಕ ಹೊರತುಪಡಿಸಿದರೆ ಉಳಿದ 47 ಸೋಂಕಿತರೆಲ್ಲರೂ ಮಹಾರಾಷ್ಟ್ರದ ಸಂಪರ್ಕವನ್ನೇ ಹೊಂದಿದ್ದಾರೆ. ದಿನ ಕಳೆದಂತೆ “ಮಹಾ’ ನಂಟಿನಿಂದ ಜಿಲ್ಲೆಗೆ ಹಾನಿ ಹೆಚ್ಚಾಗುತ್ತಿದೆ. ಮುಖ್ಯವಾಗಿ ಹಳ್ಳಿ ಹಳ್ಳಿಗಳಿಗೆ ಸೋಂಕು ವ್ಯಾಪಿಸುತ್ತಿರುವುದು ಆತಂಕವನ್ನುಂಟು ಮಾಡಿದೆ. ಮುಂಬಯಿ, ಪುಣೆಯಿಂದ ವಾಪಸ್‌ ಬಂದು ಕ್ವಾರಂಟೈನ್‌ನಲ್ಲಿರುವ ವಲಸೆ ಕಾರ್ಮಿಕರಲ್ಲಿ ಪಾಸಿಟಿವ್‌ ಪತ್ತೆಯಾಗುತ್ತಿವೆ. ಇದಲ್ಲದೇ ಕೆಲವರದ್ದು ಕ್ವಾರಂಟೈನ್‌ ಅವಧಿ ಮುಗಿಸಿ ಮನೆಗೆ ವಾಪಸಾದ ಬಳಿಕ ಟೆಸ್ಟಿಂಗ್‌ ವರದಿ ಬರುತ್ತಿರುವುದು ಸೋಂಕು ವ್ಯಾಪಿಸುವ ಆತಂಕ ಹೆಚ್ಚುತ್ತಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿಗೆ ಹೆಚ್ಚು ಕೋವಿಡ್ ವೈರಾಣು ಬಾಧಿಸಿದ್ದು, ತಾಲೂಕಿನ ದೇವಿ ತಾಂಡಾ ಒಂದರಲ್ಲೇ 17 ಪಾಸಿಟಿವ್‌ ಪತ್ತೆಯಾಗಿರುವುದು ಆ ಪ್ರದೇಶದಲ್ಲಿ ಭೀತಿ ಆವರಿಸುವಂತೆ ಮಾಡಿದೆ. ಬಸವಕಲ್ಯಾಣ ತಾಲೂಕಿನ ದೇವಿ ತಾಂಡಾ 17, ಹಿಪ್ಪಳಗಾಂವ 4, ತಮಗ್ಯಾಳ 2, ಜಾನಾಪುರ, ಹಿರಣಗಾಂವ್‌, ಓತಗಿ, ಲಾಡವಂತಿ, ಶಿರುರಿ ಮತ್ತು ಕೋಹಿನೂರನಲ್ಲಿ ತಲಾ 1 ಕೇಸ್‌ನಂತೆ ಒಟ್ಟು 29 ಪ್ರಕರಣಗಳು ವರದಿಯಾಗಿವೆ. ಹುಮನಾಬಾದ ಪಟ್ಟಣದ ಜನತಾ ನಗರದ 3, ತಾಲೂಕಿನ ಬೆನಚಿಂಚೋಳಿ 2, ಧುಮ್ಮನಸೂರ, ಸಿಂದಬಂದಗಿ, ಜಾಮನಗರದಲ್ಲಿ ತಲಾ 1 ಕೇಸ್‌ ಸೇರಿ 8 ಸೋಂಕಿತರು, ಕಮಲನಗರ ಪಟ್ಟಣದ 2, ತಾಲೂಕಿನ ಕೋಟಗ್ಯಾಳ, ಗಣೇಶಪುರ ಮತ್ತು ಬಸನಾಳ ಗ್ರಾಮದಲ್ಲಿ ತಲಾ 1 ಸೇರಿ ಒಟ್ಟು 5 ಪ್ರಕರಣಗಳು ಪತ್ತೆಯಾಗಿವೆ.

ಭಾಲ್ಕಿ ತಾಲೂಕಿನ ಕೇರೂರ 2, ಮಳಚಾಪುರದಲ್ಲಿ 1 ಸೇರಿ 3 ಕೇಸ್‌ ಹಾಗೂ ಚಿಟಗುಪ್ಪ ಪಟ್ಟಣದಲ್ಲಿ 3 ಪಾಸಿಟಿವ್‌ ಕಂಡು ಬಂದಿವೆ. ಹೊಸದಾಗಿ ಪತ್ತೆಯಾಗಿರುವ ಸೋಂಕಿತರಲ್ಲಿ 9 ಜನ ಮಕ್ಕಳು ಸೇರಿದ್ದಾರೆ. 31 ಜನ ಪುರುಷರಿದ್ದರೆ, 17 ಮಂದಿ ಮಹಿಳೆಯರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 270 ಪ್ರಕರಣಗಳು ವರದಿಯಾದಂತೆ ಆಗಿದ್ದು, 97 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇನ್ನೂ 167 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆಯ ಹೆಲ್ತ್‌ ಬುಲೆಟಿನ್‌ ದೃಢಪಡಿಸಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.