ಮಹರ್ಷಿ ವಾಲ್ಮೀಕಿ ಜ್ಞಾನದ ಸಂಪತ್ತಿನ ಮೇರು ಪರ್ವತ
Team Udayavani, Oct 21, 2021, 2:26 PM IST
ಸುರಪುರ: ಮಹರ್ಷಿ ವಾಲ್ಮೀಕಿ ಜ್ಞಾನ ಸಂಪತ್ತಿನ ಮೇರು ಪರ್ವತ ಇದ್ದಂತೆ. ಬದುಕಿಗೆ ಹತ್ತಿರದ ನೈತಿಕ ಮೌಲ್ಯಗಳುಳ್ಳ ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಸಮಾಜಕ್ಕೆ ಉತ್ಕೃಷ್ಟ ಗ್ರಂಥ ನೀಡಿದ ಮಹಾನ್ ದಾರ್ಶನಿಕ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೋಷಿತ ಕೆಳ ಸಮುದಾಯದಲ್ಲಿ ಜನಿಸಿದ್ದರು ಕೂಡಾ ಅವರು ತಮ್ಮ ವಿದ್ವತ್ ಮತ್ತು ಪ್ರಖರ ಪಾಂಡಿತ್ಯದಿಂದ ಮೇಲೆ ಬಂದರು. ರಾಮಾಯಣ ಮಹಾ ಕಾವ್ಯದ ಮೂಲಕ ಮಾನವ ಜನಾಂಗಕ್ಕೆ ಸತ್ಯ, ಧರ್ಮ, ನ್ಯಾಯ, ನೀತಿಗಳ ಬಗ್ಗೆ ತಿಳಿಸಿಕೊಡುವ ಮೂಲಕ ವಿಶ್ವದ ಸಂತರಾಗಿದ್ದಾರೆ ಎಂದರು.
ಉಪನ್ಯಾಸಕ ಡಾ| ಉಪೇಂದ್ರ ನಾಯಕ ಸುಬೇದಾರ ಮಾತನಾಡಿ, ಸ್ವಾತಂತ್ರ್ಯ ಪೂರ್ವ ಮತ್ತು ನಂತರದಿಂದ ಇಲ್ಲಿಯವರೆಗೆ ಸುರಪುರವನ್ನು ನಾಯಕ ಸಮುದಾಯದವರೆ ಆಳುತ್ತಿದ್ದಾರೆ. ಆದರೆ ಪರಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮೂಲ ಸೌಕರ್ಯಗಳಿಲ್ಲ. ಕೆಲ ಸಮುದಾಯಗಳು ಕನಿಷ್ಠ ಸೂರಿಲ್ಲದೆ ನರಳುತ್ತಿವೆ. ಇದಕ್ಕೆಲ್ಲ ರಾಜಕೀಯ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ: ಫಲಾನುಭವಿಗಳೊಂದಿಗೆ ಮೋದಿ ಸಂವಾದ
ಪಿಎಸ್ಐ ಕೃಷ್ಣಾ ಸುಬೇದಾರ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ಮಾತನಾಡಿದರು. ನಗರಸಭೆ ಅಧ್ಯಕ್ಷ ಸುಜಾತಾ ಜೇವರ್ಗಿ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಇಒ ಅಮರೇಶ, ಸತ್ಯನಾರಾಯಣ ದಬರಾರಿ ಇದ್ದರು. ಇದೇ ವೇಳೆ ಸಮಾಜದ ಹಿರಿಯರನ್ನು, ಸಾಧಕರನ್ನು ಸಮಾಜದ ವತಿಯಿಂದ ಗೌರವಿಸಲಾಯಿತು.
ನಗರದ ಡೊಣ್ಣಿಗೇರಿ ವಾಲ್ಮೀಕಿ ದೇವಸ್ಥಾನದಿಂದ ವಾಲ್ಮೀಕಿ ಭವನದವರೆಗೆ ಬೈಕ್ ರ್ಯಾಲಿ ಮೂಲಕ ಮೆರವಣಿಗೆ ಮಾಡಲಾಯಿತು. ಸಮಾಜದ ಗಣ್ಯರು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ