ಮೈದುಂಬಿಕೊಂಡ ಕಾರಂಜಾ ಜಲಾಶಯ


Team Udayavani, Aug 7, 2022, 4:41 PM IST

7water

ಬೀದರ: ಜಲಾನಯನ ಪ್ರದೇಶದಲ್ಲಿ ವರ್ಷಧಾರೆಯಿಂದಾಗಿ ಮುಂಗಾರು ಋತುವಿನಲ್ಲೇ ಗಡಿ ನಾಡು ಬೀದರ ರೈತರ ಜೀವನಾಡಿ ಆಗಿರುವ ಕಾರಂಜಾ ಜಲಾಶಯದ ಒಡಲು ಮತ್ತೆ ಮೈದುಂಬಿಕೊಂಡಿದ್ದು, ಜೀವ ಕಳೆ ಬಂದಿದೆ.

ಜಲಾಶಯ ಭರ್ತಿಗೆ ಒಂದು ಟಿಎಂಸಿಗಿಂತ ಕಡಿಮೆ ಬಾಕಿ ಉಳಿದಿದ್ದು, ಯಾವ ಸಮಯದಲ್ಲಾದರೂ ನದಿಗೆ ನೀರು ಹರಿಬಿಡುವ ಸಾಧ್ಯತೆಯಿದೆ. ಜಿಲ್ಲೆಯ ಜೀವಜಲವಾಗಿರುವ ಕಾರಂಜಾ ಜಲಾಶಯ 7.69 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಶನಿವಾರದವರೆಗೆ 6.294 ಟಿಎಂಸಿ ನೀರು ಸಂಗ್ರಹವಾಗಿದೆ.

ಕಳೆದ ಎರಡು ದಿನಗಳ ಹಿಂದೆ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದ ನಿತ್ಯ 500ಕ್ಕೂ ಅಧಿಕ ಕ್ಯೂಸೆಕ್‌ ನೀರಿನ ಒಳ ಹರಿವು ದಾಖಲಾಗಿದ್ದು, ಸದ್ಯ45 ಕ್ಯೂಸೆಕ್ಸ್‌ಗೆ ಇಳಿಕೆಯಾಗಿದೆ. ಕಳೆದ 2020 ಮತ್ತು 2021ರಲ್ಲಿ ಉತ್ತಮ ಮಳೆಯಿಂದ ಜಲಾಶಯ ಭರ್ತಿಯಾಗಿ ಭೋರ್ಗರೆದಿದ್ದು, ಡ್ಯಾಮ್‌ನ ಮೂರೂ ಗೇಟ್‌ಗಳ ಮೂಲಕ ಸಾವಿರಾರು ಕ್ಯೂಸೆಕ್‌ ನೀರನ್ನು ಮಾಂಜ್ರಾ ನದಿಗೆ ಹರಿಬಿಡಲಾಗಿತ್ತು. ಅದಕ್ಕೂ ಮೊದಲು 2016ರಲ್ಲಿ ಡ್ಯಾಮ್‌ ಗರಿಷ್ಠ ಮಟ್ಟ ತಲುಪಿತ್ತು.

10 ದಿನದಲ್ಲಿ ಅರ್ಧ ಟಿಎಂಸಿ ನೀರು

ಪೂರ್ವ ಮುಂಗಾರು ಮುನ್ನ ಜಲಾಶಯದಲ್ಲಿ 4.8 ಟಿಎಂಸಿ ನೀರು ಸಂಗ್ರಹ ಇತ್ತು. ಮುಂಗಾರು ಋತುವಿನಲ್ಲಿ ಸುರಿದ ಉತ್ತಮ ಮಳೆಯಿಂದ ಡ್ಯಾಮ್‌ಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಳೆದ ಎರಡು ತಿಂಗಳಲ್ಲಿ 1.42 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಕೆಲವೆಡೆ ಮಳೆ ಅವಾಂತರದಿಂದ ರೈತ ಸಮುದಾಯಕ್ಕೆ ಘಾಸಿಯಾಗಿದ್ದರೆ, ಕಾರಂಜಾ ಒಡಲು ತುಂಬಿರುವುದು ಮುಂದಿನ ಒಂದೆರೆಡು ಬೇಸಿಗೆಯ ಜಲ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂಬ ಸಮಾಧಾನ ತಂದಿದೆ. ಯೋಜನೆಗಳ ನನೆಗುದಿಯಿಂದ ಸದಾ ಚರ್ಚೆಗೆ ಒಳಪಡುವ ಕಾರಂಜಾ ಕಳೆದ 50 ವರ್ಷಗಳಲ್ಲಿ ಆರೇಳು ಬಾರಿ ಮಾತ್ರ ತುಂಬಿದೆ. ಮಹತ್ವಕಾಂಕ್ಷಿ ಯೋಜನೆ ಆರಂಭವಾಗಿ ದಶಕಗಳು ಉರುಳಿದರೂ ಅಪೂರ್ಣ ಸ್ಥಿತಿಯಲ್ಲೇ ಇದೆ. ಹಣ ನೀರಿನಂತೆ ಹರಿಯಿತೇ ಹೊರತು ಕೊನೆಯಂಚಿನ ರೈತರಿಗೆ ನೀರು ಉಣಿಸಲು ಈವರೆಗೂ ಸಾಧ್ಯವಾಗಲೇ ಇಲ್ಲ. ಜಲಾಶಯವು ಹೆಚ್ಚಿನ ಪ್ರಮಾಣದಲ್ಲಿ ಬೀದರ ಜಿಲ್ಲೆಯ ನಗರ, ಪಟ್ಟಣಗಳ ಕುಡಿಯುವ ನೀರಿನ ದಾಹ ಇಂಗಿಸುವುದಕ್ಕೆ ಸೀಮಿತವಾದಂತಾಗಿದೆ.

ಮಾಂಜ್ರಾದ ಉಪನದಿಯಾದ ಕಾರಂಜಾ ಅಥವಾ ನಾರಂಜಾ ನದಿ ತೆಲಂಗಾಣದಲ್ಲಿ ಹುಟ್ಟಿ ಕರ್ನಾಟಕ ಪ್ರವೇಶಿಸುತ್ತದೆ. ಬೀದರ-ಹುಮನಾಬಾದ ತಾಲೂಕುಗಳ ನಡುವೆ ಹರಿಯುತ್ತ ಭಾಲ್ಕಿ ತಾಲೂಕು ಪ್ರವೇಶಿಸುವ ಮಾರ್ಗವಾದ ಹಾಲಹಳ್ಳಿಯ ಬಳಿ ಈ ಜಲಾಶಯ ನಿರ್ಮಿಸಲಾಗಿದೆ. 1960ರಲ್ಲಿ ಕೇವಲ 9 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರಂಭವಾದ ಜಲಾಶಯ ಕಾಮಗಾರಿಗೆ ಈವರೆಗೆ 564 ಕೋಟಿ ರೂ. ವೆಚ್ಚವಾಗಿದೆ.

50 ವರ್ಷದಲ್ಲಿ ಆರೇಳು ಬಾರಿ ಭರ್ತಿ

ಕಾರಂಜಾ ಜಲಾನಯನದ ಒಟ್ಟು 782 ಚ.ಕಿ.ಮೀ. ಪ್ರದೇಶ ಪೈಕಿ ತೆಲಂಗಾಣ 565 ಚ.ಕಿ.ಮೀ. ಬೀದರ ಜಿಲ್ಲೆ 217 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಒಟ್ಟಾರೆ 7.69 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 7 ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳಬಹುದು. ಒಳ ಹರಿವು ಹೆಚ್ಚಾದರೆ ಬೀದರ-ಹುಮನಾಬಾದ ತಾಲೂಕಿನ ಹತ್ತಾರು ಗ್ರಾಮಗಳಿಗೆ ಹಿನ್ನೀರು ನುಗ್ಗುವ ಆತಂಕ ಇದೆ. ಜಲಾಶಯದಲ್ಲಿ ಕಳೆದ 1997-98, 2008-09, 2010-11ನೇ ಸಾಲಿನಲ್ಲಿ 6 ಟಿಎಂಸಿ ನೀರು ಸಂಗ್ರಹವಾಗಿತ್ತು. ನಂತರ 2016, 2020 ಮತ್ತು 2021ರಲ್ಲಿ ಗರಿಷ್ಠ ಮಟ್ಟ ತಲುಪಿದ್ದರಿಂದ ನದಿಗೆ ನೀರು ಬಿಡಲಾಗಿತ್ತು. ಈಗ ಮತ್ತೆ ಮಳೆ ಅಬ್ಬರದಿಂದ ಜಲಾಶಯಕ್ಕೆ ಕಳೆ ತಂದುಕೊಟ್ಟಿದೆ.

ಜಿಲ್ಲೆಯ ಕಾರಂಜಾ ಜಲಾಶಯ 7.69 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಆ.6ರವರೆಗೆ 6.294 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು ಸದ್ಯ ಕಡಿಮೆಯಾಗಿದ್ದು, 45 ಕ್ಯೂಸೆಕ್‌ ದಾಖಲಾಗಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮುಂಗಾರು ಆರಂಭದಿಂದ 1.42 ಟಿಎಂಸಿ ನೀರು ಕಾರಂಜಾ ಒಡಲು ಸೇರಿದೆ. 6.5 ಟಿಎಂಸಿಗೆ ಹೆಚ್ಚಿದಲ್ಲಿ ಜಲಾಶಯದಿಂದ ನದಿಗೆ ನೀರು ಹರಿಬಿಡಲಾಗುವುದು. ಭರತಕುಮಾರ, ಸಹಾಯಕ ಇಂಜಿನಿಯರ್‌, ಕಾರಂಜಾ ಜಲಾಶಯ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.