ಮನ: ಪರಿವರ್ತನೆಗಾಗಿ ಪ್ರವಚನ ಆಲಿಸಲು ಬನ್ನಿ: ಸ್ವಾಮೀಜಿ


Team Udayavani, Aug 7, 2018, 11:40 AM IST

bid-2.jpg

ಭಾಲ್ಕಿ: ಪ್ರವಚನ ಆಲಿಸುವುದರಿಂದ ಹತ್ತು ಜನರಲ್ಲಿ ಒಬ್ಬರಾದರೂ ಪರಿವರ್ತನೆ ಹೊಂದಬಹುದು ಎನ್ನುವ ಆಸೆಯಿಂದ ಬಸವ ಭಕ್ತರು ಪ್ರವಚನ ಆಲಿಸಲು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹಿರೇಮಠ ಸಂಸ್ಥಾನದ
ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು. 

ಪಟ್ಟಣದ ಚನ್ನಬಸವಾಶ್ರಮದಲ್ಲಿ ನಡೆದ ಶ್ರಾವಣಮಾಸ ಪ್ರವಚನ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪಟ್ಟಣದ ವಿವಿಧ ಓಣಿಗಳ ಭಕ್ತಾದಿಗಳು ತಾವು ಪ್ರವಚನಕ್ಕೆ ಬರುವುದರೊಂದಿಗೆ ಗುರು ಕಾರ್ಯವೆಂದು ತಿಳಿದು ತಮ್ಮ ನೆರೆ ಹೊರೆಯವರನ್ನು ಕರೆದುಕೊಂಡು ಬರಬೇಕು ಎಂದರು.

ನಮ್ಮ ಮಾತಿಗೆ ಗೌರವ ಸಿಗಬೇಕಾದರೆ, ನಾವು ಆಡಿದ ಮಾತನ್ನು ಆಚರಣೆಗೆ ತರಬೇಕು. ನುಡಿದಂತೆ ನಡೆದರೆ ಮಾತ್ರ ನಮ್ಮ ಜೀವನ ಸಾರ್ಥಕ. ಬಸವ ಭಕ್ತರು ನುಡಿದಂತೆ ನಡೆಯುವ ಆದರ್ಶ ವ್ಯಕ್ತಿಗಳು. ಅಂತಹವರಲ್ಲಿ ಬಸವತತ್ವವನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡ ಲಿಂಗೈಕ್ಯ ಡಾ| ಚನ್ನಬಸವ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ನಡೆದ ಡಾ| ಬಸವಲಿಂಗ ಪಟ್ಟದ್ದೇವರು ಭಾಲ್ಕಿಯಲ್ಲಿ ಸುಮಾರು 30 ವರ್ಷಗಳಿಂದ ಪ್ರತಿ ವರ್ಷ ತಪ್ಪದೇ ಶ್ರಾವಣ ಮಾಸದಲ್ಲಿ ಒಂದು ತಿಂಗಳ ಕಾಲ ಪ್ರತಿನಿತ್ಯ ಶರಣರ ತತ್ವಾದರ್ಶಗಳ ಬಗ್ಗೆ ಪ್ರವಚನ ಮಾಡಿಕೊಂಡು ಬರುತ್ತಿದ್ದಾರೆ.

ಈ ವರ್ಷವೂ ಪ್ರವಚನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರವಚನ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಕಾಂತ ಬಿರಾದಾರ ಮಾತನಾಡಿ, ಗುರುಕಾರ್ಯ ಮಾಡುವುದು ಭಕ್ತರ ಕರ್ತವ್ಯವಾಗಿದೆ. ಹೀಗಾಗಿ ಪಟ್ಟಣದ ಪ್ರತಿ ಓಣಿಯ  ಗುರು ಭಕ್ತರು, ಹಿರೇಮಠದ ವತಿಯಿಂದ ಪ್ರಕಟಿಸಲಾದ ಕರ ಪತ್ರವನ್ನು ತಮ್ಮ ತಮ್ಮ ನೆರೆಯವರಿಗೆ ಕೊಟ್ಟು, ಪ್ರವಚನಕ್ಕೆ ಆಗಮಿಸಲು ಪ್ರೇರೇಪಿಸಬೇಕು ಎಂದು
ಹೇಳಿದರು.

ಇದೇವೇಳೆ ವಿವಿಧ ಓಣಿಯ ಪ್ರಮುಖ ಭಕ್ತರನ್ನು ಗುರುತಿಸಿ, ಅವರ ಓಣಿಯ ನಾಗರಿಕರಿಗೆ ಕರ ಪತ್ರ ಹಂಚಿ, ಪ್ರವಚನ ಆಲಿಸಲು ಪ್ರೇರೇಪಿಸುವ ಬಗ್ಗೆ ಮಾಹಿತಿ ನೀಡಲಾಯಿತು. ನ್ಯಾಯವಾದಿ ವಿಜಯಕುಮಾರ ಪಾಟೀಲ, ಗಣಪತಿ ಬೋಚರೆ, ಮಲ್ಲಮ್ಮಾ ನಾಗನಕೇರೆ, ರಮೇಶ ಕರಕಾಳೆ, ವಿಜಯಕುಮಾರ ಗೌಡಗಾವೆ, ಸಂತೋಷ ಹಡಪದ, ರಾಜೇಶ ಮುಗಟೆ, ಶರಣಪ್ಪ ಬಿರಾದಾರ, ಬಸವಪ್ರಭು ಸೊಲ್ಲಾಪೂರೆ ಇದ್ದರು. ಬಸವರಾಜ ಮರೆ ಸ್ವಾಗತಿಸಿದರು. ಪ್ರೊ|ಚಂದ್ರಕಾಂತ ಬಿ. ನಿರೂಪಿಸಿದರು. ನಿವೃತ್ತ ಅಭಿಯಂತರ ವಿಶ್ವನಾಥಪ್ಪ ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.