ಡಿ.19ರಂದು ಮೆಗಾ ಲೋಕ ಅದಾಲತ್‌: ನ್ಯಾ| ಅಂಬಲಿ


Team Udayavani, Nov 12, 2020, 3:39 PM IST

ಡಿ.19ರಂದು ಮೆಗಾ ಲೋಕ ಅದಾಲತ್‌: ನ್ಯಾ| ಅಂಬಲಿ

ಭಾಲ್ಕಿ: ಭಾಲ್ಕಿಯ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಡಿ.19ರಂದು ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗುವುದು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಲಿ ಹೇಳಿದರು.

ಪಟ್ಟಣದ ಕೋರ್ಟ್‌ ಸಭಾಭವನದಲ್ಲಿ ನಡೆದ ಮೆಗಾ ಲೋಕ ಅದಾಲತ್‌ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದು.

ಮೆಗಾ ಲೋಕ ಅದಾಲತ್‌ನಲ್ಲಿ ಬ್ಯಾಂಕ್‌ನಲ್ಲಿ ಸಾಲ ಪಡೆದ ಸುಸ್ತಿ ಸಾಲಗಾರರು ಬ್ಯಾಂಕ್‌ ವ್ಯವಸ್ಥಾಪಕರನ್ನುಸಂಪರ್ಕಿಸಿ ಕಾನೂನು ಸೇವೆಯೊಂದಿಗೆ ಸಾಲ ಮರು ಪಾವತಿ ಮಾಡಿದ್ದಲ್ಲಅಂಥವರ ಮೇಲಿನ ವ್ಯಾಜ್ಯ ಸಂಪೂರ್ಣ  ಮುಕ್ತಗೊಳಿಸಲಾಗುವುದು. ಯಾವುದೇ  ತರಹದ ಹಣಕಾಸಿನ ವ್ಯವಹಾರ ಕಾನೂನು ರೀತಿಯಲ್ಲಿ ಬಗೆಹರಿಸಲುಮೆಗಾ ಲೋಕ ಅದಾಲತ್‌ ಸಹಾಯ ಪಡೆಯಬಹುದು ಎಂದರು.

ಕಾರ್ಮಿಕರ ತಕರಾರು ಕಾನೂನು ರೀತಿಯಲ್ಲಿ ಯಾವುದೇ ಶುಲ್ಕವಿಲ್ಲದೇ ಬಗೆಹರಿಸಲು ಅದಾಲತ್‌ಸಹಕಾರಿಯಾಗಿದೆ. ವಿದ್ಯುತ್‌ ಮತ್ತು ನೀರಿನ ಬಿಲ್‌ ಪೆಂಡಿಂಗ್‌ ಪಾವತಿಗಳಿಗೆ ಸಂಬಂಧಿಸಿದ ವ್ಯಾಜ್ಯ ಸೇರಿದಂತೆ ಇತರೆ ಯಾವುದೇ ಪ್ರಕಾರದ ಕಾನೂನು ವ್ಯಾಜ್ಯಗಳನ್ನು ಉಚಿತವಾಗಿ ಬಗೆಹರಿಸಿಕೊಳ್ಳಬಹುದು ಎಂದರು.

ಈ ವೇಳೆ ನ್ಯಾಯಮೂರ್ತಿ ಪ್ರಶಾಂತ ಬಾದವಾಡಗಿ, ಸರ್ಕಾರಿ ಅಭಿಯೋಜಕ ಶಿವರಾಜ ಶಟಕಾರ, ಡಿವೈಎಸ್‌ಪಿ ಡಾ| ದೇವರಾಜ.ಬಿ, ಉಪ ತಹಶೀಲ್ದಾರ್‌ ಗೋಪಾಲ ಹಿಪ್ಪರಗಿ, ತಾಪಂ ಸಹಾಯಕ ನಿರ್ದೇಶಕಿ ಶಿವಲೀಲಾ, ಎಸ್‌ಬಿಐ ವ್ಯವಸ್ಥಾಪಕನವೀನ ಕುಮಾರ ಇತರರು ಇದ್ದರು.

ಪ್ರಬುದ್ಧ  ಸಮಾಜಕ್ಕಾಗಿ ಪಾದಯಾತ್ರೆ’ :

ಬೀದರ: ಪ್ರಬುದ್ಧ ಸಮಾಜ ನಿರ್ಮಾಣಕ್ಕಾಗಿ ಬೆಂಗಳೂರಿನ ವಿವೇಕಾನಂದ ಎಚ್‌.ಕೆ ಜಿಲ್ಲೆಯ ವನಮಾರಪಳ್ಳಿಯಿಂದ ನ. 1ರಿಂದ ಆರಂಭಿಸಿರುವ ಪಾದಯಾತ್ರೆ ಭಾಲ್ಕಿ, ಹುಮನಾಬಾದದಿಂದ ಬೀದರಗೆ ಬರುವಹಾದಿಯಲ್ಲಿ ಆಣದೂರ ಹತ್ತಿರ ಜಿಲ್ಲಾ ಕಸಾಪ ಸಾಥ್‌ ನೀಡಿತು.

ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟಿx, ಸಂಚಾಲಕ ಶಿವಶಂಕರ ಟೋಕರೆ, ಉಪಾಧ್ಯಕ್ಷ ವಿಜಯಕುಮಾರ ಗೌರೆ ಅವರು ವಿವೇಕಾನಂದ ಅವರನ್ನು ಬರಮಾಡಿಕೊಂಡು ಸನ್ಮಾನಿಸಿದರು. ಅವರ ಜೊತೆಯಲ್ಲಿ ಕಾರ್ಯದರ್ಶಿ ಮಹೇಶ ಗೋರನಾಳಕರ್‌, ಸಂತೋಷ ಬೋರಾ, ಸಂದೀಪ ಕಾಟೆ ಇಸ್ಲಾಂಪುರ ಸಾಥ್‌ ನೀಡಿದರು.

ವಿವೇಕಾನಂದ ಮಾತನಾಡಿ, ಇಂದಿನ ವ್ಯವಸ್ಥೆಯಲ್ಲಿ ಸುಧಾರಣೆ ಹೇಳುವುದಕ್ಕಿಂತ ಸ್ವತಃ ಮಾಡಿ ತೋರಿಸುವುದು ಲೇಸು. ಇಂದು ನಾನು ಕಲ್ಯಾಣ ನಾಡಿನಿಂದ ಪ್ರಾರಂಭಿಸಿದ ಪಾದಯಾತ್ರೆ ಬೆಂಗಳೂರಿನ ತನಕ ಹೋಗಿ ಜಾಗೃತಿ ಮೂಡಿಸಬೇಕೆಂಬ ಉದ್ದೇಶ ನನ್ನದಾಗಿದೆ ಎಂದರು.

ಸುರೇಶ ಚೆನ್ನಶೆಟ್ಟಿ ಮಾತನಾಡಿ, ಇಂದು ಯುವ ಜನಾಂಗ ಎಚ್ಚೆತ್ತು ಸಮಾಜ ಶುದ್ಧೀಕರಣಗೊಳ್ಳಲು ತಮ್ಮ ಪಾದಯಾತ್ರೆ ಒಂದು ಪ್ರೇರಣೆ. ನಮ್ಮಲ್ಲಿ ಉಪದೇಶ ಪುಕ್ಕಟೆ ಇದೆ. ಆದರೆ, ಅನುಷ್ಠಾನ ಶೂನ್ಯ. ಶರಣರ ಕರ್ಮಭೂಮಿಯಿಂದ ಪ್ರಾರಂಭಿಸಿದ ಜ್ಞಾನ ದೀಕ್ಷೆ ಪಾದಯಾತ್ರೆ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಶಿವಶಂಕರ ಟೋಕರೆ ಮಾತನಾಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.