ಪೋಸ್ಟರ್‌ಗಳಿಂದ ಸ್ಮಾರಕಗಳು ವಿರೂಪ


Team Udayavani, Jun 4, 2018, 10:24 AM IST

bid-1.jpg

ಬೀದರ: ಸ್ಮಾರಕಗಳ ಖಣಿ ಎಂದೇ ಖ್ಯಾತಿ ಪಡೆದಿರುವ ಬೀದರನ ಐತಿಹಾಸಿಕ ಕಟ್ಟಡಗಳು ಅಂದ ಕಳೆದುಕೊಳ್ಳುತ್ತಿವೆ. ಫ್ಲೆಕ್ಸ್‌, ಪೋಸ್ಟರ್‌, ಬ್ಯಾನರ್‌ ಗಳಿಂದ ಮಹತ್ವದ ಸ್ಮಾರಕಗಳು ವಿರೂಪಗೊಂಡಿದ್ದು, ಇವುಗಳ ಸಂರಕ್ಷಣೆ ಮಾಡಬೇಕಾದ ಪುರಾತತ್ವ ಇಲಾಖೆ ಮತ್ತು ಜಿಲ್ಲಾಡಳಿತ ಮಾತ್ರ ಮೌನ ವಹಿಸಿದೆ.

ನಗರದ ಕೋಟೆ ಕೊತ್ತಲಗಳು ಸೇರಿದಂತೆ ಐತಿಹಾಸಿಕ ಕಮಾನುಗಳ ಇಕ್ಕೆಲಗಳಲ್ಲಿ ಫ್ಲೆಕ್ಸ್‌, ಪೋಸ್ಟರ್‌ಗಳನ್ನು ಮನಸೋ ಇಚ್ಛೆ ಹಾಕಲಾಗಿದೆ. ಪ್ರಚಾರದ ವಿವಿಧ ಫೆಕ್ಸ್‌ಗಳು, ಜಾಹೀರಾತು, ಧಾರ್ಮಿಕ ಕಾರ್ಯಕ್ರಮ, ಹುಟ್ಟುಹಬ್ಬ, ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕಟಣೆಗಳನ್ನು ಹಾಕಲಾಗುತ್ತಿದ್ದು, ಈ ಮೂಲಕ ಅಪರೂಪದ ಸ್ಮಾರಕಗಳ ಅಂದಗೆಡಿಸಲಾಗಿದೆ. ಐತಿಹಾಸಿಕ ತಜ್ಞರು, ಪರಿಸರವಾದಿಗಳು ಕೆಂಗಣ್ಣು ಬೀರುವಂತೆ ಮಾಡಿದೆ.

ಕ್ಯಾರೇ ಎನ್ನದ ಜನ: ಬೀದರ ಪಾರಂಪರಿಕ ಪಟ್ಟಣ ಎಂದು ಘೋಷಿಸಲಾಗಿದ್ದು, ಸ್ಮಾರಕಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ. ಸ್ಮಾರಕಗಳಿಗೆ ಧಕ್ಕೆ ಆದರೆ ಕ್ರಮ ಜರುಗಿಸಲಾಗುವುದು ಎಂಬ ಪುರಾತತ್ವ ಇಲಾಖೆಯ ಎಚ್ಚರಿಕೆ ಫಲಕಗಳು ಅಲ್ಲಲ್ಲಿ ಹಾಕಲಾಗಿದೆ. ಆದರೆ, ಸಾರ್ವಜನಿಕರು ಮಾತ್ರ ನಿರ್ಭಯವಾಗಿ ಪೋಸ್ಟರ್‌ಗಳನ್ನು ಅಂಟಿಸಿ ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ.

ಕೋಟೆ, ಫತ್ತೆದರ್ವಾಜಾ, ಮಂಗಲಪೇಟ್‌ ದರ್ವಾಜಾ, ಶಾಹಗಂಜ್‌ ಕಮಾನ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಖಾಸಗಿ ಕಾರ್ಯಕ್ರಮಗಳ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಇವುಗಳನ್ನು ಕಟ್ಟಲು ಕಟ್ಟಡಗಳ ಮೇಲೆ ಕಬ್ಬಿಣದ ಮೊಳೆಗಳನ್ನು ಹೊಡೆದು ವಿರೂಪಗೊಳಿಸಲಾಗುತ್ತಿದೆ. ಆಕರ್ಷಿಸುವ ಜಾಹೀರಾತುಗಳ ಮೇಲೆ ವಾಹನ ಸವಾರರ ಕಣ್ಣು ಬಿದ್ದು ಅಪಘಾತಗಳು ಸಂಭವಿಸುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಸ್ಮಾರಕಗಳ ಅತಿಕ್ರಮಣ, ಸುತ್ತಲೂ ಗಬ್ಬು: ನಗರದ ಹಿರಿಮೆ, ಗರಿಮೆ ಹೆಚ್ಚಿಸಿರುವ ಸ್ಮಾರಕಗಳ ಜಾಗವನ್ನು ಆಕ್ರಮಿಸುವ ಕಾರ್ಯ ಅಲ್ಲಲ್ಲಿ ನಡೆಯುತ್ತಿದೆ. ಸುತ್ತಮುತ್ತಲಿನ ಹೊಲಸಿನಿಂದ ಗಬ್ಬು ನಾರುವಂತೆ ಮಾಡಿದೆ. ಮತ್ತೂಂದೆಡೆ ಕಟ್ಟಡಗಳ ಮೇಲೆ ಗಿಡ-ಗಂಟಿಗಳು ಬೆಳೆದು ನಿಂತಿದ್ದು, ಅದರ ಬೇರುಗಳು ಒಳಹೊಕ್ಕು ಶಿಥಿಲಗೊಳ್ಳುವ ಸ್ಥಿತಿಗೆ ತಲುಪಿವೆ. ಆದರೆ, ಅದನ್ನು ತೆರವುಗೊಳಿಸಿ ಸಂರಕ್ಷಣೆ ಮಾಡುವ ಕೆಲಸ ಮಾತ್ರ ನಡೆಯುತ್ತಿಲ್ಲ. 

ಬೀದರ ನಗರ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುವ ನಿಟ್ಟಿನಲ್ಲಿ ಈಗಾಗಲೇ ನೂಯಾರ್ಕ್‌ನ “ವರ್ಲ್ಡ್ ಮಾನ್ಯೂಮೆಂಟ್‌ ಫಂಡ್‌ -2014′ ತಾಣಗಳ ವೀಕ್ಷಣಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ದೇಶ-ವಿದೇಶಗಳ
ಪ್ರವಾಸಿಗರನ್ನು ತನ್ನತ್ತ ಸೆಳೆಯುವಂತಾಗಿದೆ. ಆದರೆ, ಅಂದ ಕಳೆದುಕೊಳ್ಳುತ್ತಿರುವ ಸ್ಮಾರಕಗಳನ್ನು ಪ್ರವಾಸಿಗರು ಕಂಡು ಬೇಸರ ಪಡುವಂಥ ಸ್ಥಿತಿ ಬಂದಿದೆ.

ಸ್ಮಾರಕಗಳು, ಕಟ್ಟಡಗಳು ವಿರೂಪಗೊಳ್ಳುವ ಮುನ್ನ ಪುರಾತತ್ವ ಇಲಾಖೆ ಇತ್ತ ಗಮನ ಹರಿಸಬೇಕಾಗಿದೆ. ಮುಂದಿನ ಪೀಳಿಗೆಗೆ ಅಮೂಲ್ಯ ಸಂಪತ್ತನ್ನು ಸಂರಕ್ಷಣೆ ಮಾಡಬೇಕಾಗಿದೆ. 

ಕಚೇರಿಗಳ ಮೇಲೂ ಪೋಸ್ಟರ್‌ಗಳು; ನಗರದ ವಿವಿಧ ಸರ್ಕಾರಿ ಕಚೇರಿಗಳ ಸುತ್ತುಗೋಡೆಗಳ ಮೇಲೆ ಭಿತ್ತಿಪತ್ರ ಅಂಟಿಸಲಾಗುತ್ತಿದೆ. ಇದು ಕಾನೂನು ರೀತ್ಯ ಅಪರಾಧವೆಂದು ಅರಿತೂ ಈ ಕೃತ್ಯ ಎಸಗಲಾಗುತ್ತಿದೆ. ಇದನ್ನು ಪ್ರತಿದಿನ ನೋಡಿಯೂ ನೋಡದಂತೆ ಅಧಿಕಾರಿಗಳ ವರ್ಗ ವರ್ತಿಸುತ್ತಿದೆ.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.