ಮಾನಸಿಕ ಹಸಿವಿಗೆ ಸಂಗೀತ ಅನ್ನ


Team Udayavani, Jan 28, 2018, 4:07 PM IST

gul-5.jpg

ಬೀದರ: ಮಾನವನ ಹೊಟ್ಟೆ ಹಸಿವಿಗೆ ಅನ್ನ- ನೀರು ಹೇಗೆಯೋ, ಮಾನಸಿಕ ಹಸಿವಿಗೆ ನೃತ್ಯ-ಸಂಗೀತ ಅನ್ನವಾಗಿದೆ ಎಂದು ಹಿರಿಯ ಸಾಹಿತಿ ಬಿ.ಆರ್‌. ಲಕ್ಷ್ಮಣರಾವ್‌ ಹೇಳಿದರು.

ನಗರದ ರಂಗ ಮಂದಿರದಲ್ಲಿ ಶನಿವಾರ ನಾಟ್ಯಶ್ರೀ ನೃತ್ಯಾಲಯವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ “ರಾಜ್ಯ ಮಟ್ಟದ ಸಂಗೀತ ಮತ್ತು ನೃತ್ಯೋತ್ಸವ’ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ, ಸಂಗೀತ, ನೃತ್ಯ, ಕಲೆಯಿಂದ ಲೌಕಿಕ ಲಾಭಕ್ಕಿಂತ
ಮಾನಸಿಕ ಆತ್ಮಾನಂದ ಪಡೆಯಲು ಸಾಧ್ಯ. ಇದರಿಂದ ಮನುಷ್ಯನ ಬದುಕು ಸಂತೃಪ್ತಿ ನೆಮ್ಮದಿಯಿಂದ ಸಾಗುತ್ತದೆ. ಈ ನಿಟ್ಟಿನಲ್ಲಿ ನಾಟ್ಯಶ್ರೀ ನೃತ್ಯಾಲಯದಿಂದ ಮುಂದಿನ ಜನಾಂಗಕ್ಕೆ ಭರತನಾಟ್ಯ ಕಲಿಸುತ್ತಿರುವುದು ಶ್ಲಾಘನಿಯ ಎಂದರು. 

ಹಿರಿಯ ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್‌ ಮಾತನಾಡಿ, ಬೀದರನಲ್ಲಿ ಅರವತ್ತರ ದಶಕದಲ್ಲಿ ಭರತನಾಟ್ಯಕ್ಕೆ
ಪ್ರೋತ್ಸಾಹವಿರಲಿಲ್ಲ. ನಾಟ್ಯವನ್ನು ಕಲೆಗಾಗಿ ಕಲೆಯನ್ನಾಗಿ ಮಾಡದೆ, ಬದುಕಿನ ಸಂಸ್ಕೃತಿಯಾಗಿ ಮಾಡಿರುವ ನಾಟ್ಯಶ್ರೀ ನೃತ್ಯಾಲಯ ಬೀದರನಲ್ಲಿ ಕಲೆಯ ವಾತವರಣ ನಿರ್ಮಿಸಿದೆ ಎಂದರು. 

ಶಾಸಕ ರಹೀಮ್‌ ಖಾನ್‌ ಮಾತನಾಡಿ, ಕಲೆಗೆ ಯಾವುದೇ ಜಾತಿ ಧರ್ಮವಿಲ್ಲ, ಸಾಮರಸ್ಯದ ಸಂಕೇತವಾಗಿರುವ
ಭರತನಾಟ್ಯವನ್ನು ಬೀದರಗೆ ಪರಿಚಯಿಸಿರುವ ನಾಟ್ಯಶ್ರೀ ನೃತ್ಯಾಲಯ ಕಾರ್ಯ ಅದ್ಭುತ ಎಂದರು. ಬೆಂಗಳೂರಿನ ಗಿರಿಜಾ ಲಕ್ಷ್ಮಣರಾವ್‌ ಮಾತನಾಡಿದರು. ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗಾಯನ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಅಂಧ ಕಲಾವಿದ ದೀಲಿಪ ಕಾಡವಾದ ಅವರಿಗೆ
“ನಾಟ್ಯಶ್ರೀ ಪ್ರಶಸ್ತಿ’ ಪ್ರಧಾನ ಮಾಡಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಸಂಗೀತ ಕಲಾವಿದ ರಾಜೇಂದ್ರಸಿಂಗ್‌ ಪವಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಪ್ರತಿಭಾ ಚಾಮಾ ನಿರೂಪಿಸಿದರು. ಸತ್ಯಮೂರ್ತಿ ಸ್ವಾಗತಿಸಿದರೆ ಪ್ರೊ| ವೀರಶೆಟ್ಟಿ ಮೈಲೂರಕರ ಪ್ರಶಸ್ತಿ ಪ್ರದಾನ ಮಾಡಿದರು. 

ಬೆಳಗ್ಗೆ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಬುರಗಿಯ ನಾಟ್ಯಾಂಜಲಿ ನೃತ್ಯ ತಂಡದ ಸಂಧ್ಯಾ ಪಿ. ಭಟ್‌, ದೀಕ್ಷಾ ಮತ್ತು ಸಂಗಡಿಗರು ಹಾಗೂ ನಾಟ್ಯಶ್ರೀ ನೃತ್ಯಾಲಯದ ಕಲಾವಿದರಿಂದ ವಿಶೇಷ ಭರತನಾಟ್ಯ ಪ್ರದರ್ಶನ ಜರುಗಿತು.

ಮಧ್ಯಾಹ್ನ ಬೆಂಗಳೂರಿನ ನಾಟ್ಯಾಂಜಲಿಯ ಗುರು ಅಶೋಕಕುಮಾರ ಅವರ ಮಾರ್ಗದರ್ಶನದಲ್ಲಿ ಬೀದರನಲ್ಲಿ ಪ್ರಪ್ರಥಮ ಬಾರಿಗೆ ಭರತನಾಟ್ಯ-ಕಥಕ್‌ ನೃತ್ಯ ಪ್ರದರ್ಶನ, ನೃತ್ಯೋಲ್ಲಾಸ ಕಾರ್ಯಕ್ರಮ ಮನರಂಜಿಸಿತು. ಹಿರಿಯ ಕಲಾವಿದ ಶಂಭುಲಿಂಗ ವಾಲದೊಡ್ಡಿ ಮತ್ತು ಸಂಗಡಿಗರಿಂದ ಜಾನಪದ ಗೀತೆ ಗಾಯನ, ಬಾನುಪ್ರಿಯಾ ಅರಳಿ, ಶೈಲಜಾ ದಿವಾಕರ್‌ ಮತ್ತು ರೇಣುಕಾ ಎನ್‌.ಬಿ. ಹಾಗೂ ಸಂಗಡಿಗರು ದಾಸರ ಪದಗಳ ಗಾಯನ ನೆಡೆಸಿಕೊಟ್ಟರು. ಶಿವಕುಮಾರ ಪಂಚಾಳ ಮತ್ತು ಸಂಗಡಿಗರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಹಿರಿಯ ಸಾಹಿತಿ ಶಶಿಕಲಾ ವಸ್ತ್ರದ, ಶಿವಶರಣಪ್ಪಾ ವಾಲಿ, ಪ್ರೊ| ಸಿದ್ರಾಮಪ್ಪ ಮಾಸಿಮಾಡೆ, ಬಸವರಾಜ ರುದನೂರ, ಬಸವರಾಜ ಮೂಲಗೆ, ಗಂಗಶೆಟ್ಟಿ ಖಾನಪೂರೆ, ಗುರುಮೂರ್ತಿ ಮತ್ತಿತರರು ಇದ್ದರು. 

ಸಾಹಿತ್ಯ, ಸಂಗೀತ, ನೃತ್ಯ, ಕಲೆಯಿಂದ ಲೌಕಿಕ ಲಾಭಕ್ಕಿಂತ ಮಾನಸಿಕ ಆತ್ಮಾನಂದ ಪಡೆಯಲು ಸಾಧ್ಯ.
ಇದರಿಂದ ಮನುಷ್ಯನ ಬದುಕು ಸಂತೃಪ್ತಿ ನೆಮ್ಮದಿಯಿಂದ ಸಾಗುತ್ತದೆ. ಈ ನಿಟ್ಟಿನಲ್ಲಿ ನಾಟ್ಯಶ್ರೀ ನೃತ್ಯಾಲಯದಿಂದ
ಯುವ ಜನಾಂಗಕ್ಕೆ ಭರತನಾಟ್ಯ ಕಲಿಸುತ್ತಿರುವುದು ಶ್ಲಾಘನಿಯ. 
 ಬಿ.ಆರ್‌. ಲಕ್ಷ್ಮಣರಾವ್‌, ಹಿರಿಯ ಕವಿ 

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.