ರೈತರ ಜೊತೆಗಿನ ಚೆಲ್ಲಾಟ ಒಳ್ಳೆಯದಲ್ಲ: ಬಿಜೆಪಿ ಸರಕಾರಕ್ಕೆ ಹೆಚ್ ಡಿಕೆ ಎಚ್ಚರಿಕೆ
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ತೊಗರಿ ಬೆಳೆಗಾರರೊಂದಿಗೆ ಪ್ರತಿಭಟನೆ
Team Udayavani, Jan 13, 2023, 3:56 PM IST
ಕಲಬುರಗಿ: ರಾಜ್ಯದಲ್ಲಿನ ರೈತ ವರ್ಗದ ಜೊತೆಗಿನ ಬಿಜೆಪಿ ಸರ್ಕಾರದ ಚೆಲ್ಲಾಟ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆ ಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ತೊಗರಿ ಬೆಳೆಗಾರರೊಂದಿಗೆ ಸೇರಿಕೊಂಡು ಪ್ರತಿಭಟನೆ ಮಾಡಿದ ಅವರು, ರಾಜ್ಯದಲ್ಲಿ ತೊಗರಿ ಬೆಳೆ ಸಂಪೂರ್ಣವಾಗಿ ನೆಟೆ ರೋಗಕ್ಕೆ ತುತ್ತಾಗಿ ಹೋಗಿದೆ. ಆದರೂ ಸರ್ಕಾರ ಜಾನ ಕುರುಡುತನ ತೋರುತ್ತಿದೆ. ಈಗಾಗಲೇ ಕಲ್ಯಾಣವೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ತೊಗರಿ ರಾಶಿ ಮಾಡುತ್ತಿರುವ ರೈತರು ಸಂಕಷ್ಟದಲ್ಲಿದ್ದಾರೆ. ನಿರೀಕ್ಷೆ ಮಾಡಿದ್ದಷ್ಟು ಬೆಳೆ ಬಂದಿಲ್ಲ.ಕಲಬುರಗಿ, ಯಾದಗಿರ ಜಿಲ್ಲೆಯಲ್ಲಂತೂ ರೋಗದಿಂದ ತೊಗರಿ ಹಾಳಾಗಿ ಹೋಗಿದೆ. ಈ ಸಂದರ್ಭದಲ್ಲಿ ಅವರ ನೆರವಿಗೆ ಬರಬೇಕಾದ ಸರ್ಕಾರ ಕೇವಲ ಹೇಳಿಕೆಗಳಿಗೆ ಸೀಮಿತವಾಗಿದೆ. ಅದು ಅಲ್ಲದೆ ಬೆಳೆ ವಿಮೆ ಕೂಡ ರೈತರ ಕೈ ಸೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿವೇಕಾನಂದರ ಹೆಸರಲ್ಲಿ ಯುವಜನೋತ್ಸವ ಮಾಡಿದ್ದಾರೆ. ಆದರೆ ಅಲ್ಲಿ ವಿವೇಕಾನಂದರ ಫೋಟೋಗಳನ್ನೇ ಹಾಕಿಲ್ಲ. ರೈತರ ಹೆಸರಿನಲ್ಲಿ ರಾಜಕೀಯ ಮಾಡಿ, ಅವರಿಗೆ ಯಾವುದೇ ಅನುಕೂಲ ಮಾಡಿ ಕೊಟ್ಟಿಲ್ಲ.ಇನ್ನು 3 ತಿಂಗಳಿನಲ್ಲಿ ರಾಜ್ಯದ ಜನ ಬಿಜೆಪಿಯನ್ನು ನಿರ್ಮೂಲನ ಮಾಡುತ್ತಾರೆ ಎಂದು ಹರಿಹಾಯ್ದರು.
ತೊಗರಿ ಬೆಳೆಗಾರರ ಬಗ್ಗೆ ವಿಶೇಷ ಗಮನ ಸೆಳೆಯಬೇಕು ಎಂದು ಹೇಳಿದ್ದೆ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ಬಂಡೆಪ್ಪ ಕಾಶೆಂಪೂರ್ ಪ್ರಸ್ತಾಪ ಮಾಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಓರ್ವ ಲಂಬಾಣಿ ಸಮಾಜದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆ ಕಾರ್ಯಕ್ರಮ, ಈ ಕಾರ್ಯಕ್ರಮ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಆದರೆ ಹೇಳುವುದು ಒಂದು.ಮಾಡುವುದು ಮತ್ತೊಂದು ಇಂತಹ ಸರಕಾರದಿಂದ ಜನರ ಸಮಸ್ಯೆ ತೀರಿಸಲು ಆಗುತ್ತಿಲ್ಲ ಎಂದು ಖೇದ ವ್ಯಕ್ತಪಡಿಸಿದರು.
ರೈತರಿಗೆ ಬೆಳೆ ವಿಮೆ ಹಣ ಸಿಕ್ಕಿಲ್ಲ.ಸರ್ಕಾರದಿಂದ ಪರಿಹಾರವೂ ಸಿಕ್ಕಿಲ್ಲ. ಖಾಸಗಿ ಕಂಪನಿಗಳು ರೈತರ ಹಣ ಕೊಳ್ಳೆ ಹೊಡೆದಿವೆ. ಹೀಗಾದರೆ ರೈತರ ಗತಿ ಏನು. ರೈತರ ಆದಾಯ ದ್ವಿಗುಣ ಮಾಡುವ ಮಾತುಕೊಟ್ಟಿದ್ದ ಮೋದಿ ಅವರು ಎಲ್ಲಿ. ಅವರನ್ನು ಮುಖ್ಯಮಂತ್ರಿ ಆದಿಯಾಗಿ ಯಾವ ಸ್ಥಳೀಯ ನಾಯಕರು ಕೇಳುತ್ತೀರಿ ಎಂದು ಪ್ರಶ್ನಿಸಿದರು.
ಈ ವೇಳೆಯಲ್ಲಿ ನೆಟೆ ರೋಗಕ್ಕೆ ತುತ್ತಾಗಿದ್ದ ತೊಗರಿ ಗಿಡಗಳನ್ನು ಹಿಡಿದು ರೈತರು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ನುಗ್ಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್
MUST WATCH
ಹೊಸ ಸೇರ್ಪಡೆ
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಸೋಲಾರ್ ಪ್ಲಾಂಟ್ ಹೆಸರಲ್ಲಿ ವಂಚನೆ: ಸೆರೆ
ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ
ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ