ರಾಜಧಾನಿಗೆ ರೆಕ್ಕೆ ಬಿಚ್ಚಲಿದೆ ಲೋಹದ ಹಕ್ಕಿ!


Team Udayavani, Feb 24, 2022, 1:26 PM IST

16airport

ಬೀದರ: ರಾಜಧಾನಿ ಬೆಂಗಳೂರಿಗೆ ಲೋಹದ ಹಕ್ಕಿಯಲ್ಲಿ ಹಾರಾಡಬೇಕೆಂಬ ಧರಿನಾಡು ಬೀದರ ಜನರ ಕನಸು ನನಸಾಗಲಿದೆ. ಏರ್‌ ಕ್ರಾಫ್ಟ್‌ (ವಿಮಾನ) ಮತ್ತು ಪ್ರಯಾಣಿಕರ ಕೊರತೆ ನೆಪವೊಡ್ಡಿ ಕಳೆದ ಮೂರ್‍ನಾಲ್ಕು ತಿಂಗಳಿಂದ ವಿಮಾನ ಹಾರಾಟ ಸೇವೆ ಸ್ಥಗಿತಗೊಳಿಸಿದ್ದ ಟ್ರೂಜೆಟ್‌ ಸಂಸ್ಥೆ, ಫೆ.24ರಿಂದ ಮತ್ತೆ ಪುನರ್‌ ಆರಂಭಿಸಲು ನಿರ್ಧರಿಸಿದೆ.

ದಶಕಗಳ ಹೋರಾಟದ ಫಲವಾಗಿ ಯುದ್ಧ ವಿಮಾನಗಳ ತರಬೇತಿ ನೆಲೆಯಾಗಿರುವ ಬೀದರನಲ್ಲಿ ನಾಗರಿಕ ವಿಮಾನಯಾನ (ಕೇಂದ್ರದ ಪ್ರಾದೇಶಿಕ ಸಂಪರ್ಕ ಯೋಜನೆಯಡಿ) ಆರಂಭಿ ಸಲಾಗಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ, ಕೋವಿಡ್‌ ಮತ್ತು ಲಾಕ್‌ಡಾನ್‌ ತೆರವು ಬಳಿಕವೂ ಟ್ರೂಜೆಟ್‌ ಸಂಸ್ಥೆ ವಿಮಾನಗಳ ಕೊರತೆ ಸಮಸ್ಯೆ ಮುಂದಿಟ್ಟು ತನ್ನ ಸೇವೆಯನ್ನು ನಿಲ್ಲಿಸಿತ್ತು. ಹಾಗಾಗಿ ಏರ್‌ಪೋರ್ಟ್‌ ಉದ್ಘಾಟನೆಗೊಂಡ ಒಂದೂವರೆ ವರ್ಷದಲ್ಲೇ ವಿಮಾನಯಾನಕ್ಕೆ ಗ್ರಹಣ ಹಿಡಿದು, ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

70 ಆಸನಗಳ ಸೌಲಭ್ಯವುಳ್ಳ ಟ್ರೂಜೆಟ್‌ ಸಂಸ್ಥೆ ಬೀದರ-ಬೆಂಗಳೂರು ನಡುವೆ ವಿಮಾನ ಹಾರಿಸುತ್ತಿದ್ದು, ಆರಂಭದಲ್ಲಿ ವಾರದ 7 ದಿನಗಳ ಕಾಲ ಲಭ್ಯವಿದ್ದ ವಿಮಾನ ಸೇವೆ ನಂತರ ಕೋವಿಡ್‌ ಲಾಕ್‌ಡೌನ್‌ ನಿಂದ 2 ತಿಂಗಳು ವಿಮಾನಯಾನ ಸೇವೆ ಸ್ಥಗಿತಗೊಳಿಸಿತ್ತು. ಲಾಕ್‌ಡೌನ್‌ ತೆರವು ಬಳಿಕ ವಾರದಲ್ಲಿ ಕೇವಲ 2 ದಿನ ಮಾತ್ರ ಸೇವೆ ನೀಡಿದ್ದ ಟ್ರೂಜೆಟ್‌ ಸಂಸ್ಥೆ, ಕಳೆದ ನವೆಂಬರನಿಂದ ವಾರದಲ್ಲಿ 4 ದಿನ ವಿಮಾನ ಹಾರಾಟ ಶುರು ಮಾಡಿತ್ತು. ನಂತರ ಎರಡು ವಾರಕ್ಕೊಂದು ವಿಮಾನ ಹಾರಾಡಿ ಬಳಿಕ ಸೇವೆಯನ್ನೇ ಸ್ಥಗಿತಗೊಳಿತ್ತು.

ಕೋವಿಡ್‌ ಲಾಕ್‌ಡೌನ್‌ ನಡುವೆಯೂ ವಿಮಾನಯಾನ ಆರಂಭವಾದ ಒಂದು ವರ್ಷದ ಅವಧಿಯಲ್ಲಿಯೇ ಬೀದರ-ಬೆಂಗಳೂರು ನಡುವೆ 166 ವಿಮಾನಗಳ ಹಾರಾಟ ಆಗಿದ್ದು, 6923 ಜನರು ಪ್ರಯಾಣಿಸಿದ್ದರು. ಲಾಕ್‌ ಡೌನ್‌ ತೆರವು ಬಳಿಕ ಬೇಡಿಕೆ ಹೆಚ್ಚುತ್ತಿದ್ದರಿಂದ ಹಿಂದಿನಂತೆ ನಿತ್ಯ ಕಾರ್ಯಾಚರಣೆ ಮಾಡಬೇಕು. ಜತೆಗೆ ಬೀದರನಿಂದ ಮುಂಬೈ, ಪುಣೆ, ದೆಹಲಿ ಮತ್ತು ಅಮೃತಸರ್‌ಗೆ ವಿಮಾನ ಹಾರಿಸಬೇಕೆಂಬ ಬೇಡಿಕೆ ಇತ್ತು. ಆದರೆ, ಇತ್ತ ಟ್ರೂಜೆಟ್‌ ಸಂಸ್ಥೆ ಸದ್ಯ ಲಭ್ಯವಿದ್ದ ವಿಮಾನಯಾನ ಸೇವೆಯನ್ನೇ ಕಡಿತ ಮಾಡಿ ಜನರ ಕೆಂಗೆಣ್ಣಿಗೆ ಗುರಿಯಾಗಿತ್ತು.

ಇದರಿಂದ ಜಿಲ್ಲೆಯ ಜನ ಅನಿವಾರ್ಯವಾಗಿ ಕಲ್ಬುರ್ಗಿ ಅಥವಾ ಹೈದ್ರಾಬಾದ್‌ ಮೂಲಕ ಬೆಂಗಳೂರಿಗೆ ತೆರಳಬೇಕಾದಂಥ, ಇಲ್ಲವೇ ರೈಲು ಮತ್ತು ಬಸ್‌ಗಳ ಮೂಲಕ ಸಂಚರಿಸಬೇಕಾದ ಸ್ಥಿತಿ ಎದುರಾಗಿತ್ತು. ವಿಮಾನಯಾನ ಬಂದ್‌ಗೆ ಸಾಮಾಜಿಕ ಜಾಲತಾಣದಲ್ಲಿ ಜನಾಕ್ರೋಶ ವ್ಯಕ್ತವಾಗಿತ್ತಲ್ಲದೇ ಜಿಲ್ಲೆಯ ಶಾಸಕರು ಸಹ ಧ್ವನಿ ಎತ್ತಿದ್ದರು. ಕೊನೆಗೂ ಕೇಂದ್ರದ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರು ಟ್ರೂಜೆಟ್‌, ಜಿಎಂಆರ್‌ ಸಂಸ್ಥೆ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸಿ, ಎದುರಾಗಿದ್ದ ತೊಡಕುಗಳನ್ನು ನಿವಾರಿಸಿ ಮತ್ತೆ ಆಗಸದಲ್ಲಿ ಮತ್ತೆ ವಿಮಾನ ಹಾರಾಟ ಶುರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟ್ರೂಜೆಟ್‌ ಸಂಸ್ಥೆ ಫೆ.24ರಿಂದ ಸದ್ಯ ವಾರದಲ್ಲಿ ಮಂಗಳವಾರ, ಗುರುವಾರ ಮತ್ತು ರವಿವಾರ ಮೂರು ದಿನ ವಿಮಾನ ಹಾರಿಸಲು ಮುಂದಾಗಿದೆ.

ವಿಮಾನ ನಂ.2ಟಿ625 ಬೆಳಿಗ್ಗೆ 11.25ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.10 ಬೀದರ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ವಿಮಾನ ನಂ.2ಟಿ626 ಮಧ್ಯಾಹ್ನ 1.40ಕ್ಕೆ ಬೀದರನಿಂದ ಹೊರಟು ಮಧ್ಯಾಹ್ನ 3.25ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಒಟ್ಟು 1 ಗಂಟೆ 45 ನಿಮಿಷ ಪ್ರಯಾಣ ಇರಲಿದೆ.

ಕೋವಿಡ್‌ ಹಾಗೂ ಇತರೆ ಕಾರಣದಿಂದಾಗಿ ಬೀದರನಿಂದ ನಾಗರಿಕ ವಿಮಾನಯಾನ ಸೇವೆ ಸ್ಥಗಿತಗೊಂಡಿತ್ತು. ಇದರಿಂದ ಬೀದರ ಜನತೆಗೆ ಬೆಂಗಳೂರಿಗೆ ಪ್ರಯಾಣಿಸಲು ತುಂಬಾ ಅನಾನುಕೂಲವಾಗುತ್ತಿತ್ತು. ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯದ ಗಮನಕ್ಕೆ ತಂದು ಎಲ್ಲ ತೊಡಕುಗಳನ್ನು ನಿವಾರಿಸಿದ್ದೇನೆ. ಫೆ.24ರಿಂದ ಟ್ರೂಜೆಟ್‌ ಸಂಸ್ಥೆ ವಿಮಾನ ಹಾರಾಟ ನಡೆಸಲಿದ್ದು, ಜಿಲ್ಲೆಯ ಜನರು ವಿಮಾನಯಾನ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. -ಭಗವಂತ ಖೂಬಾ, ಕೇಂದ್ರ ಸಚಿವರು, ರಸಗೊಬ್ಬರ- ರಸಾಯನಿಕ ಖಾತೆ

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.