ವಾಲಿಶ್ರೀ ಆಸ್ಪತ್ರೆ ಕಾಳಜಿಗೆ ಸಚಿವ ಚವ್ಹಾಣ ಮೆಚ್ಚುಗೆ
Team Udayavani, Aug 15, 2020, 4:34 PM IST
ಬೀದರ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಗರದ ವಾಲಿಶ್ರೀ ಆಸ್ಪತ್ರೆ ಜಿಲ್ಲಾ ಆಡಳಿತದೊಂದಿಗೆ ಕೈ ಜೋಡಿಸಿರುವುದು ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ವಾಲಿಶ್ರೀ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿದ ವಾಲಿಶ್ರೀ ಆಸ್ಪತ್ರೆ ಚೇರ್ ಮನ್ ಡಾ| ರಜನೀಶ ವಾಲಿ ಅವರ ಸಾಮಾಜಿಕ ಕಾಳಜಿ ಅನುಕರಣೀಯವಾಗಿದೆ ಎಂದರು. ವಾಲಿಶ್ರೀ ಆಸ್ಪತ್ರೆಯಲ್ಲಿ ಮುಂಚೆ 25 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿತ್ತು. ನಂತರ 40 ಬೆಡ್ ಮೀಸಲಿಡಲಾಯಿತು. ಇದೀಗ ಇನ್ನೂ 40 ಹಾಸಿಗೆ ಮೀಸಲಿಟ್ಟಿರುವುದು ಸಂತಸದ ವಿಷಯ. ಇದರಿಂದ ಸೋಂಕಿತರಿಗೆ ಅನುಕೂಲವಾಗಲಿದೆ. ವೆಂಟಿಲೇಟರ್ ಸಹಿತ ಎಲ್ಲ ಸೌಲಭ್ಯವಿದ್ದು, ಇಲ್ಲಿ ಗುಣಮುಖರಾಗುವವರ ಪ್ರಮಾಣ ಶೇ.85ರಷ್ಟಿದೆ. ಇದರಲ್ಲಿ ಆಸ್ಪತ್ರೆ ಆಡಳಿತ ವರ್ಗ, ವೈದ್ಯರ ಶ್ರಮ ಹೆಚ್ಚಿದೆ ಎಂದರು.
ಆಸ್ಪತ್ರೆಯ ಚೇರ್ಮನ್ ಡಾ| ರಜನೀಶ ವಾಲಿ ಮಾತನಾಡಿ, ಆಸ್ಪತ್ರೆಯಲ್ಲಿನ 100 ಬೆಡ್ ಪೈಕಿ 80 ಬೆಡ್ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಬ್ರಿಮ್ಸ್ನಲ್ಲಿ ಬೆಡ್ ಭರ್ತಿಯಾಗಿ, ಅಲ್ಲಿಂದ ಸೋಂಕಿತರನ್ನು ರೆಫರ್ ಮಾಡಿದ್ದಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಐಎಂಎ ಅಧ್ಯಕ್ಷ ಡಾ| ವಿ.ವಿ. ನಾಗರಾಜ ಮಾತನಾಡಿದರು. ಡಾ| ಖಾಜಾ ಮೈನುದ್ದೀನ್, ಬಾಬು ವಾಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು