ಪಶು ಆಸ್ಪತ್ರೆಗಳಿಗೆ ಸಚಿವ ಚವ್ಹಾಣ್ ದಿಢೀರ್ ಭೇಟಿ
Team Udayavani, Sep 9, 2019, 2:11 PM IST
ಬೀದರ್: ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸೋಮವಾರ ನಗರದ ಪಶು ಆಸ್ಪತ್ರೆಗಳಿಗೆ ಹಾಗೂ ಪಶು ಇಲಾಖೆಗೆ ದಿಢೀರ್ ಭೇಟಿ ನೀಡಿದ್ದು ಕುಡಿದ ಮತ್ತಿನಲ್ಲಿದ್ದ ‘ಡಿ’ ಗ್ರೂಪ್ ನೌಕರನಿಗೆ ಸಸ್ಪೆಂಡ್ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಡಿ ಗ್ರೂಪ್ ನೌಕರ ಬಾಬು ಎಂಬಾತನನ್ನು ಸಸ್ಪೆಂಡ್ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದರು.
ಕಚೇರಿಯ ಮತ್ತೊರ್ವ ಎಫ್ಡಿಎ ಗಾಂಧಿ ಎಂಬಾತ ಗುಟ್ಕಾ ಜಗಿಯುತ್ತಿರುವುದನ್ನು ಕಂಡ ಸಿಡಿಮಿಡಿಗೊಂಡ ಸಚಿವರು ನೌಕರನ ಚಳಿ ಬಿಡಿಸಿದರು. ಹಾಗೇ, ಉಪನಿರ್ದೇಶಕ ಗೌತಮ್ ಅರಳಿ ಸಚಿವರಿಗೆ ಹಿಂದಿಯಲ್ಲಿ ಮಾಹಿತಿ ನೀಡುವುದನ್ನು ತಡೆದ ಸಚಿವ ಚವ್ಹಾಣ್ ಕನ್ನಡದಲ್ಲೇ ಮಾತಾಡಿ ಎಂದು ತಾಕೀತು ಮಾಡಿದರು.
ನಗರದ ಗಾಂಧಿ ಗಂಜ್ ಬಳಿಯ ಪಶು ಆಸ್ಪತ್ರೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಗಳು ಸಂಗ್ರಹಿಸಿರುವ ಬಗ್ಗೆ ಕಿಡಿಕಾರಿದ ಸಚಿವರು ಆಸ್ಪತ್ರೆ ನಿರ್ವಹಣೆ ಮಾಡುತ್ತಿರುವ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕುಲಪತಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ತಿಂಗಳಲ್ಲಿ 15 ದಿನಗಳ ಕಾಲ ಬೆಂಗಳೂರಲ್ಲೆ ಇರುತ್ತಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸರಿಪಡಿಸಲಾಗುವುದು ಎಂದು ಮಾಧ್ಯಮದವರಿಗೆ ಹೇಳಿದರು.
ಇನ್ನು ಮುಂದೆ ರಾಜ್ಯದ ವಿವಿಧೆಡೆಗಳಲ್ಲಿರುವ ಪಶು ಸಂಗೋಪನಾ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ