ಕೋವಿಡ್ ನಿಧಿಗೆ ವೇತನ ನೀಡಿದ ಸಚಿವ
Team Udayavani, May 23, 2020, 5:51 AM IST
ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಾವು ಈ ಹಿಂದೆ ತಿಳಿಸಿದಂತೆ ತಮ್ಮ 3 ತಿಂಗಳ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ನೀಡಿದ್ದಾರೆ.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವರಿಗೆ ಭೇಟಿ ಮಾಡಿ, ತಮ್ಮ ವೇತನದ 4,22,730 ರೂ.ಚೆಕ್ ಸಲ್ಲಿಸಿದರು. ಇದೇ ವೇಳೆ ಸಚಿವರು, ಬೀದರ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಎಲ್ಲ ಸಿಬ್ಬಂದಿ ಒಂದು ದಿನದ ಸಂಬಳದ 23,46,340 ರೂ. ಚೆಕ್ ಕೂಡ ಸಿಎಂ ಪರಿಹಾರ ನಿಧಿಗೆ ನೀಡಿದರು.
ಸಿಬ್ಬಂದಿಗೆ ಅಭಿನಂದನೆ: ಕೋವಿಡ್ -19 ಹಿನ್ನೆಲೆಯಲ್ಲಿ ಜನತೆಗೆ ಸಹಾಯವಾಗಲೆಂದು ಒಂದು ದಿನದ ಸಂಬಳ ನೀಡಿದ ಬೀದರ್ ಪಶು ವೈದ್ಯಕೀಯ ವಿವಿಯ ಎಲ್ಲ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಕಷ್ಟದಲ್ಲಿದ್ದವರಿಗೆ ಸಹಾಯ: ಕೋವಿಡ್-19 ಸಂಕಷ್ಟದಿಂದ ಭಾರತ ನಲುಗಿ ಹೋಗಿದೆ. ದೇಶ ಹಾಗೂ ಜನರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕವಾಗಿಯೂ ಲಾಕ್ ಡೌನ್ನಿಂದ ಹೊಡೆತ ಬಿದ್ದಿದೆ. ನನ್ನ ಮತಕ್ಷೇತ್ರದಲ್ಲಿ ಕಷ್ಟದಲ್ಲಿದ್ದವರಿಗೆ ತಾವು ಕೂಡ ಜನರಿಗೆ ಆಹಾರದ ವ್ಯವಸ್ಥೆ ಮಾಡಿ ಸಹಾಯ ಮಾಡಿದ್ದಾಗಿ ಸಚಿವ ಚವ್ಹಾಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು