ಡಿಕೆಶಿ ಫೋನ್ ಸರಿಯಾಗಿರದಿದ್ದರೆ ಶಿವಾಜಿ ನಗರದ ಅಂಗಡಿಯಲ್ಲಿ ರಿಪೇರಿ ಮಾಡಲಿ: ಅಶೋಕ್ ತಿರುಗೇಟು


Team Udayavani, Aug 27, 2020, 4:06 PM IST

ಡಿಕೆಶಿ ಫೋನ್ ಸರಿಯಾಗಿರದಿದ್ದರೆ ಶಿವಾಜಿ ನಗರದ ಅಂಗಡಿಯಲ್ಲಿ ರಿಪೇರಿ ಮಾಡಲಿ: ಅಶೋಕ್ ತಿರುಗೇಟು

ಬೀದರ್: ದೇಶದಲ್ಲಿ ಫೋನ್ ಕದ್ದಾಲಿಕೆ ಕಂಡು ಹಿಡಿದ ಪಿತಾಮಹರೇ ಕಾಂಗ್ರೆಸ್ಸಿನವರು. ಯಾರು ಕದ್ದಾಲಿಕೆ ಮಾಡಿ ತನಿಖೆ ಎದುರಿಸುತ್ತಿದ್ದಾರೆ ಅವರ ಬಾಯಲ್ಲಿ (ಕಾಂಗ್ರೆಸ್) ಆರೋಪ ಕೇಳಿ ಬರುತ್ತಿರುವುದು ಆಶ್ಚರ್ಯಕರ. ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಇಂಥ ಕೆಲಸಕ್ಕೆ ಕೈ ಹಾಕುವುದಿಲ್ಲ, ಅದರ ಅನುಭವವೂ ನಮಗಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಅವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿ ಸೇರಿದಂತೆ ಹಲವರ ಫೋನ್ ಕದ್ದಾಲಿಕೆ ಆಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಫೋನ್ ಸೌಂಡ್ ಸರಿಯಾಗಿರದಿದ್ದರೆ ಶಿವಾಜಿ ನಗರದ ಒಳ್ಳೆ ಅಂಗಡಿಯಲ್ಲಿ ರಿಪೇರಿ ಮಾಡಿಸಿಕೊಳ್ಳಲಿ, ಅಥವಾ ಉತ್ತಮ ಕಂಪನಿಯ ಮೊಬೈಲ್ ಖರೀದಿಸಲಿ ಎಂದು ಸಲಹೆ ನೀಡಿದರು.

ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ವ್ಯಕ್ತಿಗಳಿಗೆ ವಿದೇಶಿ ಐಎಸ್‌ಐ ಸಂಘಟನೆಗಳೊಂದಿಗೆ ಲಿಂಕ್ ಇರುವುದು ತನಿಖೆಯಿಂದ ಗೊತ್ತಾಗಿದೆ. ಗಲಭೆ ಮೂಲಕ ಬೆಂಗಳೂರಿನಲ್ಲಿ ಭಯ ಹುಟ್ಟಿಸುವವರನ್ನು ಸರ್ಕಾರ ಬಗ್ಗು ಬಡಿದು ನ್ಯಾಯಾಂಗದ ಕಟಕಟ್ಟೆ ಹಚ್ಚಿಸುತ್ತೇವೆ. ಈ ಘಟನೆನಿಂದ ಕಾಂಗ್ರೆಸ್ ಪಕ್ಷ ಸಹ ಪಾಠ ಕಲಿಯಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರವಾಹ ಹಾನಿ ಪರಿಶೀಲನೆಗಾಗಿ ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ: ಸಚಿವ ಅಶೋಕ್

ಡಿ.ಜೆ ಹಳ್ಳಿ ಘಟನೆ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದ ಘಟನೆ, ಹೊರತು ಕೋಮು ಗಲಭೆ ಅಲ್ಲ. ದಲಿತ ಶಾಸಕ, ಕಾರ್ಪೋರೇಟರ್ ಮತ್ತು ಎಸ್‌ಡಿಪಿಐ ಮೂರು ಸಂಘಟನೆ ನಡುವಿನ ಹೊಡೆದಾಟ. ಈ ಘಟನೆ ಮತ್ತು ಮೈಸೂರಿನ ಶಾಸಕ ತನ್ವೀರ್ ಸೇಠ್ ಹಲ್ಲೆ ಪ್ರಕರಣಕ್ಕೂ ಸ್ವಾಮತ್ಯತೆ ಕಂಡು ಬಂದಿದೆ. ಒಬ್ಬ ದಲಿತ ಶಾಸಕ ಮನೆ ಮೇಲೆ ಹಲ್ಲೆ ಘಟನೆಯನ್ನು ಖಂಡಿಸದ ಕೆಪಿಸಿಸಿ ಅಧ್ಯಕ್ಷರು ಕೇವಲ ನಮ್ಮ ಕಾರ್ಪೋರೇಟರ್ ಗಳನ್ನು ಏಕೆ ಬಂಧಿಸಿದ್ದೀರಿ ಎಂದಷ್ಟೇ ಕೇಳುತ್ತಾರೆ ಎಂದು ಸಚಿವ ಅಶೋಕ್ ಕಿಡಿಕಾರಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.