ಸಚಿವ ರಾಯರೆಡ್ಡಿ ಕಮೀಷನ್‌ ಏಜೆಂಟ್‌: ಬಿಎಸ್‌ವೈ ಆರೋಪ


Team Udayavani, Dec 9, 2017, 12:09 PM IST

bid-1.jpg

ಬೀದರ: ವಿಶ್ವವಿದ್ಯಾಲಯಗಳ ಅಂಕಪಟ್ಟಿ ಮುದ್ರಣ ಕಾಗದ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ ಕಾಂಗ್ರೆಸ್‌ ಸರ್ಕಾರದಲ್ಲಿದೆ. ಉನ್ನತ ಶಿಕ್ಷಣ ಸಚಿವರು ಕಮೀಷನ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಗಾಗಿ ಶ್ರಮಿಸಬೇಕಿದ್ದವರೇ ಅಕ್ರಮಗಳಲ್ಲಿ ತೊಡಗಿದ್ದಾರೆ. ಸಚಿವ ರಾಯರೆಡ್ಡಿ ರಾಜೀನಾಮೆ ನೀಡದಿದ್ದಲ್ಲಿ ಮುಖ್ಯಮಂತ್ರಿಯವರೇ ಅವರನ್ನು ಸಂಪುಟದಿಂದ ಕೈ ಬಿಡಬೇಕು. ಕಾಂಗ್ರೆಸ್‌ ಸರ್ಕಾರ ತೊಲಗಿದಾಗ ಮಾತ್ರ ರಾಜ್ಯದ ಜನ ನೆಮ್ಮದಿಯಿಂದ ಉಸಿರಾಡಲು ಸಾಧ್ಯ
ಎಂದರು.

ರಾಜ್ಯದಲ್ಲಿ ಸಾಕಷ್ಟು ಮರಳು ಇದೆ. ಸಚಿವರ ಪ್ರಭಾವಿಗಳ ಮಕ್ಕಳು, ಸಂಬಂಧಿಕರು ಮರಳು ದಂಧೆಯಲ್ಲಿ ತೊಡಗಿದ್ದು,
ಎಫ್‌ಐಆರ್‌ ಸಹ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಕಾನೂನು ಕ್ರಮ ಕೈಗೊಳ್ಳುವ ಬದಲು ಮಲೇಶಿಯಾ ದಿಂದ ಮರಳು ಆಮದು ಮಾಡಿಕೊಳ್ಳಲು ಹೊರಟಿದ್ದಾರೆ.

ಈ ತೀರ್ಮಾನದ ಹಿಂದೆ ದುಡ್ಡು ಹೊಡೆಯುವ ದುರಾಲೋಚನೆ ಇದೆ ಎಂದು ಆರೋಪಿಸಿದ ಅವರು, ವಿಧಾನಸಭೆಯಲ್ಲಿ ಈ ಕುರಿತಂತೆ ಚರ್ಚಿಸಬೇಕು. ಆಮದು ಕುರಿತ ತೀರ್ಮಾನವನ್ನು ಮುಂದಿನ ಸರ್ಕಾರಕ್ಕೆ ಬಿಟ್ಟು ಕೊಡಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಸತ್ಯದ ಕಡೆಗೆ ನಡಿಗೆ’ ಆರಂಭಿಸುವುದಾಗಿ ಹೇಳಿದ್ದಾರೆ. ಅವರು ಯಾವ ಸತ್ಯದ ಕಡೆಗೆ ಹೋಗುತ್ತಾರೋ ಎನ್ನುವುದು ತಿಳಿಯುತ್ತಿಲ್ಲ ಎಂದ ಅವರು, ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ನಿಗದಿಪಡಿಸಿದೆ. 

ರಾಜ್ಯ ಸರ್ಕಾರವೂ ತನ್ನ ಪಾಲಿನ ಮೊತ್ತ ಸೇರಿಸಿ, ರೈತರಿಗೆ ಅನುಕೂಲವಾಗುವಂತೆ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದರು. ಸಂಸದ ಭಗವಂತ ಖೂಬಾ, ಮಾಜಿ ಸಚಿವ ಗೋವಿಂದ ಕಾರಜೋಳ, ಶಾಸಕ ಪ್ರಭು ಚವ್ಹಾಣ, ಪ್ರಮುಖರಾದ ಕೆ.ಪಿ. ನಂಜುಂಡಿ, ಸೂರ್ಯಕಾಂತ ನಾಗಮಾರಪಳ್ಳಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಶ್ವೇತಪತ್ರ ಹೊರಡಿಸಲಿ ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕುರಿತಂತೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್‌ಕೆಆರ್‌ಡಿಬಿ ಅನುದಾನ ಸದ್ಬಳಕೆಯಾಗುತ್ತಿಲ್ಲ. 

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ 40,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆ ಏನಾಯಿತು ಎಂದು ಪ್ರಶ್ನಿಸಿದರು. ಸಂವಿಧಾನದ 371ನೇ ಕಲಂ (ಜೆ) ತಿದ್ದುಪಡಿಯಿಂದ ಈ ಭಾಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಸಿಕ್ಕ ಸೌಲಭ್ಯದ ಮಾಹಿತಿಯನ್ನು ಜನತೆಯ ಮುಂದಿಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.