ಕಾಲುವೆ ಕುಸಿದ ಸ್ಥಳಕ್ಕೆ ಶಾಸಕ ರಾಜುಗೌಡ ಭೇಟಿ-ಪರಿಶೀಲನೆ
Team Udayavani, Mar 13, 2022, 2:17 PM IST
ಹುಣಸಗಿ: ನಾರಾಯಣಪುರ ಎಡದಂಡೆ ಕಾಲುವೆ ಕುಸಿತಗೊಂಡ ಸ್ಥಳಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಶನಿವಾರ ಭೇಟಿ ನೀಡಿ ತಾತ್ಕಾಲಿಕ ಕಾಮಗಾರಿ ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ಈಗಾಗಲೇ ತಾತ್ಕಾಲಿಕವಾಗಿ ಮರಳಿನ ಚೀಲ ತುಂಬಿ ತಡೆಗಟ್ಟಲು ಪ್ರಯತ್ನಿಸಲಾಗಿದ್ದು, ರೈತರಿಗೆ ಆದಷ್ಟು ನೀರು ಹರಿಸಲು ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಹಂಗಾಮಿನಲ್ಲಿ ರೈತರಿಗೆ ವರದಾನ ಆಗುವಂತೆ ತಾತ್ಕಾಲಿಕ ಕಾಮಗಾರಿ ನಡೆಸಿಯೇ ನೀರು ಹರಿಸಬೇಕಿದೆ. ನಂತರ ಉಳಿದ ಅವಧಿಯಲ್ಲಿ ವಿನೂತನವಾಗಿ ಪರ್ಯಾಯ ಕಾಲುವೆ ಕಟಿಂಗ್ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾಲುವೆ ಪ್ರತಿಯೊಂದು ಭಾಗದಲ್ಲಿ ಸ್ಥಿತಿಗತಿ ವೀಕ್ಷಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಕೆಬಿಜೆಎನ್ನೆಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಅವರು, ಇನ್ನೆರಡು ದಿನಗಳಲ್ಲಿ ತಾತ್ಕಾಲಿಕ ಕಾಮಗಾರಿ ಮುಗಿಯಲಿದ್ದು, ಯಾವುದೇ ಕಾರಣಕ್ಕೂ ರೈತರು ಆತಂಕ ಪಡುವ ಅಗತ್ಯವಿಲ್ಲ. ನೀರು ಹರಿಸಲು ತೊಂದರೆ ಇಲ್ಲ. ಸದ್ಯ ಕಾಮಗಾರಿ ಪೂರ್ಣಗೊಂಡ ನಂತರ ಶಾಶ್ವತ ಪರಿಹಾರಕ್ಕೆ ಮುಂದಾಗುವುದಾಗಿ ಹೇಳಿದರು.
ಈ ವೇಳೆ ಸಿದ್ದನಗೌಡ ಕರಿಭಾವಿ, ಕೃಷ್ಣಾರೆಡ್ಡಿ ಮುದನೂರು, ಇಇ ಶಂಕರ ನಾಯ್ಕೊಡಿ, ಎಇ ರವಿಕುಮಾರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು