“ಸಹಾರ್ದ’ ರಾಜ್ಯದಲ್ಲೇ ಮಾದರಿ ತರಬೇತಿ ಸಂಸ್ಥೆ


Team Udayavani, Jul 7, 2017, 9:33 AM IST

BIDAR-1.jpg

ಬೀದರ: ಸಹಾರ್ದ ಸಂಸ್ಥೆಯು ಜಿಲ್ಲೆಯಲ್ಲಿ ನಡೆದಿರುವ ಸ್ವಸಹಾಯ ಗುಂಪುಗಳ ಮೂಲಕ ಮಹಿಳಾ ಸಬಲೀಕರಣದ ಮೌನ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸುವ ಮತ್ತು ಹಬ್ಬಿಸುವ ಕೆಲಸವನ್ನು ತರಬೇತಿ ಮೂಲಕ ಸಮರ್ಥವಾಗಿ ಮಾಡುತ್ತಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಸ್ಥಾಪಿಸಲ್ಪಟ್ಟಿರುವ ಸಹಾರ್ದ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, ದೇಶದ 371 ಡಿಸಿಸಿ ಬ್ಯಾಂಕ್‌ಗಳ ಪೈಕಿ 256 ಬ್ಯಾಂಕ್‌ಗಳ ಅಧ್ಯಕ್ಷರು, ಆಡಳಿತ ಮಂಡಳಿ ಮತ್ತು ಹಿರಿಯ ಅ ಧಿಕಾರಿಗಳು ಸಂಸ್ಥೆಯಲ್ಲಿ ತರಬೇತಿ ಪಡೆದು ತಮ್ಮ ಜಿಲ್ಲೆಗಳಲ್ಲೂ ಇದೇ ಮಾದರಿ ಅಳವಡಿಸಿಕೊಂಡಿರುವುದು ಬೀದರಗೆ ಹೆಮ್ಮೆಯ ವಿಷಯ. ಬೀದರ ಮಾದರಿಯನ್ನು ತಮ್ಮ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ದೇಶಾದ್ಯಂತ ಉಳಿದ ಬ್ಯಾಂಕ್‌ಗಳಿಗೆ ಮಾರ್ಗದರ್ಶ, ನೆರವು ನೀಡಿದೆ ಎಂದರು.

ಸ್ವಸಹಾಯ ಗುಂಪುಗಳ ತರಬೇತಿಗಳಲ್ಲದೇ ಸಹಾರ್ದ ಸಂಸ್ಥೆಯು ಇತರ ಚಟುವಟಿಕೆಗಳಲ್ಲೂ ಪಾಲ್ಗೊಂಡಿದ್ದು, ಅದರಲ್ಲಿ ಸ್ವಸಹಾಯ ಸಂಘಗಳಲ್ಲಿ ಉದ್ಯಮಶೀಲತೆ ಬೆಳೆಸುವುದು, ಯುವಕರಿಗೆ ಜಂಟಿ ಬಾಧ್ಯತಾ ಗುಂಪುಗಳ ಮೂಲಕ ಆದಾಯ ಉತ್ಪನ್ನ ಚಟುವಟಿಕೆ ನಡೆಸುವಂಥ ತರಬೇತಿ ನೀಡುತ್ತಿರುವುದು, ಶಾಲೆಗಳಲ್ಲಿ ಉತ್ತಮ  ಕಲಿಕಾ ವರ್ಧನೆ ಚಟುವಟಿಕೆ, ರೈತರಿಗೆ ರೈತರ ಕೂಟದನಿರ್ವಹಣೆ ತರಬೇತಿ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದೆ ಎಂದರು. 

ರೈತರ ಕೂಟಗಳನ್ನು ಕಾರ್ಯೋನ್ಮುಖಗೊಳಿಸುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಸುಮಾರು 302 ಬುನಾದಿ ತರಬೇತಿಗಳನ್ನು 3,878 ರೈತರಿಗೆ ಮತ್ತು 10 ನಾಯಕತ್ವ ತರಬೇತಿಗಳ ಮೂಲಕ 757 ರೈತರಿಗೆ ತರಬೇತಿ ನೀಡಲಾಗಿದೆ. ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ 6,182 ತರಬೇತಿಗಳನ್ನು ನೀಡಲಾಗಿದೆ. 10 ವರ್ಷಗಳಿಂದ ಸತತವಾಗಿ ಜಿಲ್ಲೆಯಲ್ಲಿ ತರಬೇತಿ ಪಡೆದ ಸ್ವಸಹಾಯ
ಗುಂಪುಗಳು ನಬಾರ್ಡ್‌ ಅತ್ಯುತ್ತಮ ಸ್ವಸಹಾಯ ಸಂಘ ರಾಜ್ಯ ಪ್ರಶಸ್ತಿಗೆ ಪಾತ್ರವಾಗುತ್ತಿರುವುದು ಅಭಿನಂದನಾರ್ಹ ಎಂದರು.

ದೇಶದಲ್ಲೇ ಒಂದು ಡಿಸಿಸಿ ಹೊಂದಿರುವ ಪ್ರಥಮ ತರಬೇತಿ ಸಂಸ್ಥೆಯೆಂದು ಸಹಾರ್ದ ಹೆಸರು ವಾಸಿಯಾಗಿದೆ. ಉಳಿದ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ತರಬೇತಿ ಪಡೆದ ಬೆಳಗಾವಿ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳ ಆಯ್ದ ಪಿಕೆಪಿಎಸ್‌ ಅಧ್ಯಕ್ಷರಿಗೆ ಪ್ರಮಾಣ ಪತ್ರ ವಿತರಿಸಿದರು. ನಬಾರ್ಡ್‌ ಜಿಲ್ಲಾ ಅಭಿವೃದ್ಧಿ ಅಧಿ ಕಾರಿ ಡಿವಿಎಸ್‌ ಜೋಶಿ, ಲೀಡ್‌ ಬ್ಯಾಂಕ್‌ ಪ್ರಬಂಧಕ ಪಂಡಿತ ಹೊಸಳ್ಳಿ, ಡಿಸಿಸಿ  ಬ್ಯಾಂಕ್‌ ಸಿಇಒ ಮಲ್ಲಿಕಾರ್ಜುನ ಮಹಾಜನ, ನಿರ್ದೇಶಕ ಜಗನ್ನಾಥ ರೆಡ್ಡಿ, ಉಪ ಪ್ರಧಾನ ವ್ಯವಸ್ಥಾಪಕ ಅನೀಲ ಪಾಟೀಲ, ಚನಬಸಯ್ನಾ ಸ್ವಾಮಿ ಉಪಸ್ಥಿತರಿದ್ದರು. ಸಹಾರ್ದ
ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ನಾಗಶೆಟ್ಟಿ ಘೋಡಂಪಳ್ಳಿ ಮತ್ತು ಅನೀಲ ಪರೇಷಣೆ ನಿರೂಪಿಸಿದರು.
ಎಸ್‌.ಜಿ. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.