ಉದ್ಯೋಗ ಯೋಜನೆ ದೇಶಕ್ಕೆ ಮಾದರಿ


Team Udayavani, May 1, 2022, 3:28 PM IST

19model

ಬೀದರ: ಟಾಟಾ ಸಹಯೋಗದೊಂದಿಗೆ 150 ಕಡೆಗಳಲ್ಲಿ ಅನುಷ್ಠಾನ ಗೊಂಡಿರುವ ಉದ್ಯೋಗ ಯೋಜನೆ ಇಂದು ದೇಶಕ್ಕೆ ಮಾದರಿಯಾಗಿದೆ. ತರಬೇತಿದಾರರು ಇತ್ತೀಚಿನ ಕೈಗಾರಿಕೆಯ ಬಹು ಕೌಶಲ ತಂತ್ರಜ್ಞಾನ ಕಲಿಯಲು ಉದ್ಯೋಗ ಯೋಜನೆ ಬಲು ಸಹಕಾರಿಯಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕ ಯೋಗೇಶ್ವರ ಎಸ್‌. ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ ಅಭಿವೃದ್ಧಿ ಜೀವನ ಸಮೃದ್ಧಿ ತರಬೇತಿದಾರರಿಗೆ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಯೋಜನೆಯಡಿ ಮೆಕ್ಯಾನಿಕ ಎಲೆಕ್ಟ್ರಿಕ್‌ ವೆಹಿಕಲ್‌ ಹಾಗೂ ರೋಬೆಟಿಕ ಕೋರ್ಸ್‌ ಪ್ರಾರಂಭಿಸಿದೆ. ಇನ್ನು ಅನೇಕ ಅಲ್ಪಾವಧಿ ಕೋರ್ಸ್‌ಗಳು ಸಹ ಉಚಿತವಾಗಿ ಕಲ್ಪಿಸಲಾಗುವುದು. ಕೋಟ್ಯಂತರ ಬೆಲೆಬಾಳುವ ಯಂತ್ರೋಪಕರಣ ಹಾಗೂ ಅತ್ಯಂತ ಬೆಲೆ ಬಾಳುವ ಸಾಪ್ಟವೇರ್‌ ಅಳವಡಿಸಿದೆ. ಇದೊಂದು ತಂತ್ರಜ್ಞಾನದ ಹಬ್‌ ಆಗಬೇಕೆಂಬ ವಿಚಾರ ನಮ್ಮೆಲ್ಲರದ್ದಾಗಿದೆ ಎಂದರು.

ದೇಶದಲ್ಲೆ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ಚಾಲನೆ ಮಾಡಿದ್ದು, ಇಲ್ಲಿ ಕಲಿತ ಎಲ್ಲರಿಗೆ ಖಂಡಿತವಾಗಿ ನೌಕರಿಗಾಗಿ ಪರಿತಪಿಸುವ ಭ್ರಮೆ ಇಲ್ಲ. ಈಗಾಗಲೇ ಟಾಟಾನವರ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಪ್ರಾಯೋಗಿಕ ಪರಿಣಿತ ಕುಶಲಕರ್ಮಿಗಳಿಗೆ ಅವರೇ ಉದ್ಯೋಗ ಕೊಡುತ್ತಾರೆ. ತಾವು ಕೇವಲ ಕಲಿಯುವುದರ ಕಡೆಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಹಿರಿಯ ಪ್ರಾಧ್ಯಾಪಕ ಪ್ರೊ| ಅಶೋಕ ಪಾಟೀಲ ಮಾತನಾಡಿ, ಇಂದು ಶಿಕ್ಷಣಕ್ಕೆ ಬೆಲೆ ಸಿಕ್ಕು, ನೌಕರಿ ಬೇಕೆಂದರೆ ವ್ಯಕ್ತಿಯಲ್ಲಿ ಕೌಶಲ ಕರಗತವಾಗಿರಬೇಕು. ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೂ ಎರಡು ವರ್ಷಗಳಿಂದ ಮೆಕ್ಯಾನಿಕಲ್‌ ಹಾಗೂ ವೆಲ್ಡಿಂಗ್‌ ಡೆಕ್ನೊಲಾಜಿ ಬಗ್ಗೆ ಇಲ್ಲಿ ಪ್ರಾಯೋಗಿಕ ಹಾಗೂ ವೃತ್ತಿ ಸಿದ್ಧಾಂತ ಹೇಳಿಕೊಡಲಾಗುತ್ತಿದೆ. ಇದರಿಂದ ತುಂಬ ಅನುಕೂಲವಾಗಿದೆ. ಇನ್ಮುಂದೆ ಕೌಶಲ ಇದ್ದವನಿಗೆ ಮಾತ್ರ ನೌಕರಿ ಎಂಬುದು ನಾವೆಲ್ಲರೂ ಅರಿಯಬೇಕಿದೆ ಎಂದು ಹೇಳಿದರು.

ಜಿಲ್ಲಾ ಐಟಿಐ ನೋಡಲ್‌ ಅಧಿಕಾರಿ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ, ಅನೇಕ ಸಂಕಷ್ಟಗಳ ಮಧ್ಯೆಯು ಇಲಾಖೆಯ ಮಾರ್ಗದರ್ಶನ ಹಾಗೂ ಸ್ಥಳಿಯ ಜನಪ್ರತಿನಿಧಿಗಳ ಸಹಕಾರ ಜೊತೆಗೆ ಅನೇಕ ಕೈಗಾರಿಕೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ನಮ್ಮ ಆಮಂತ್ರಣಕ್ಕೆ ಮನ್ನಣೆ ನೀಡಿರುವ ಫಲವೇ ಇಂದು ನಮ್ಮ ಬೀದರ ಐಟಿಐ ಅಭಿವೃದ್ಧಿ ಹೊಂದಲು ಪ್ರಮುಖ ಕಾರಣವಾಗಿದೆ ಎಂದರು.

ನಿವೃತ್ತ ಪಾಚಾರ್ಯ ಪ್ರೊ| ರಾಜಪ್ಪ ಅವರನ್ನು ಗೌರವಿಸಿದರು. ಇಲಾಖೆಯ ಹಿರಿಯ ಉಪನಿರ್ದೇಶಕ ಕೆ.ಆರ್‌. ಹಾಲಪ್ಪ ಶೆಟ್ಟಿ, ಪ್ರಾಚಾರ್ಯರಾದ ಲಕ್ಷ್ಮೀಕಾಂತ ಭಾಲ್ಕಿ, ಶಿವಕುಮಾರ ಪಾಟೀಲ, ವೀರೇಶ ಪಾಟೀಲ, ಬಸವರಾಜ ಗುಪ್ತಾ ಸೇರಿ ಇನ್ನಿತರರಿದ್ದರು. ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಕಿರಿಯ ತರಬೇತಿ ಅಧಿಕಾರಿ ಯೂಸುಫಮಿಯ್ಯ ಜೋಜನಾ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.