![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪೊಲೀಸ್ ಠಾಣೆ ಆವರಣದಲ್ಲಿ ಮಾದರಿ ಉದ್ಯಾನವನ
Team Udayavani, Sep 9, 2020, 4:24 PM IST
![ಪೊಲೀಸ್ ಠಾಣೆ ಆವರಣದಲ್ಲಿ ಮಾದರಿ ಉದ್ಯಾನವನ](https://www.udayavani.com/wp-content/uploads/2020/09/bidar-tdy-1-6-620x372.jpg)
ಭಾಲ್ಕಿ: ಪಟ್ಟಣದ ಪೊಲೀಸ್ ಉಪಾಧೀಕ್ಷಕರ ಉಪ ವಿಭಾಗ (ಡಿವೈಎಸ್ಪಿ) ಕಚೇರಿಗೆ ಸೋಮವಾರ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಆವರಣದಲ್ಲಿ ತಲೆಯೆತ್ತುತ್ತಿರುವ ಔಷಧೀಯ ಸಸ್ಯಗಳ ಉದ್ಯಾನವನ, ಪೊಲೀಸ್ ಬೃಂದಾವನ ಹಾಗೂ ಕೃಷಿ ಹೊಂಡ ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ಡಿವೈಎಸ್ಪಿ ಡಾ|ದೇವರಾಜ್ ಕ್ರಿಯಾಶೀಲರಾಗಿದ್ದು, ಅಧಿ ಕಾರ ವಹಿಸಿ ಕೊಂಡು ಕೆಲವೇ ತಿಂಗಳಾದರೂ ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ರೂಪಿಸಿ ಇತರೆ ಪೊಲೀಸ್ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಪೊಲೀಸ್ ಆವರಣದಲ್ಲಿ ಡಿವೈಎಸ್ಪಿ ನೇತೃತ್ವದ ತಂಡ ಔಷಧೀಯ ಸಸ್ಯಗಳ ಹಾಗೂ ಉದ್ಯಾನವನ ಅಭಿವೃದ್ಧಿಪಡಿಸುತ್ತಿರುವುದು ಮಾದರಿ. ಮಾವು, ತೆಂಗು ಸೇರಿದಂತೆ ವಿವಿಧ ತಳಿಯ ಸುಮಾರು 3 ಸಾವಿರ ಸಸಿ ನೆಡುವ ಜತೆಗೆ 78 ವಿವಿಧ ಬಗೆಯ 700ಕ್ಕೂ ಅಧಿಕ ಔಷ ಧೀಯ ಗುಣ ಹೊಂದಿರುವ ಸಸಿ ಬೆಳೆಸುತ್ತಿರುವುದು ಪ್ರಯೋಜನಕಾರಿ. ಸಸಿಗಳ ನಿರ್ವಹಣೆಗೆ ನೀರಿನ ಕೊರತೆಯಾಗದಂತೆ ಕೃಷಿ ಹೊಂಡ, ಕೊಳವೆಬಾವಿ ಬಳಿ ಇಂಗು ಗುಂಡಿ, ಕಾಂಪೌಂಡ್ ನಿರ್ಮಿಸಿರುವುದು ಸಂತಸ ತಂದಿದೆ ಎಂದರು.
ಡಿವೈಎಸ್ಪಿ ಡಾ| ದೇವರಾಜ್.ಬಿ ಮಾತನಾಡಿ, ಪೊಲೀಸ್ ಆವರಣದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪಾರ್ಥೇನಿಯಂ, ಕಸ, ಕಡ್ಡಿ ಬೇರ್ಪಡಿಸಿ ದಾನಿಗಳ ಸಹಾಯದಿಂದ ಉದ್ಯಾನವನ ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡಲಾಗಿದೆ ಎಂದರು. ಈ ವೇಳೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಶಶಿಧರ ಕೋಸಂಬೆ, ಕೆ.ಡಿ. ಗಣೇಶ, ರೋಹಿತ ವೈರಾಗ್ಯ, ಕಪಿಲ್ ಕಲ್ಯಾಣೆ ಇತರರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.