ಮುಂಗಾರು ಬೆಳೆ ಕಟಾವು ಸಮೀಕ್ಷೆ ಎಡವಟ್ಟು!


Team Udayavani, Jan 6, 2022, 11:42 AM IST

11crop

ಮುದಗಲ್ಲ: 2020-21ನೇ ಸಾಲಿನ ಮುಂಗಾರು ಬೆಳೆ ಕಟಾವು ಸಮೀಕ್ಷೆಯಲ್ಲಿ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಾಗಿ ರೈತರಿಗೆ ಬರಬೇಕಿದ್ದ ನೆರೆ ಪರಿಹಾರ ಬಾರದಂತಾಗಿದೆ.

ಯಾರದೋ ಜಮೀನಿನಲ್ಲಿ ಮಾಡಬೇಕಾದ ಜಿಪಿಎಸ್‌ ಸೆರೆ ಹಿಡಿಯುವ ಛಾಯಚಿತ್ರ ಇನ್ನಾರದೋ ಜಮೀನಿನಲ್ಲಿ ಮಾಡಲಾಗಿದೆ. ಅಚ್ಚರಿಯಂದರೆ ತೊಗರಿ ಬೆಳೆದ ಹೊಲದಲ್ಲಿ ಸಜ್ಜೆ ಎಂದು, ಸಜ್ಜೆ ಬೆಳೆದ ಹೊಲದಲ್ಲಿ ಹತ್ತಿ ಎಂದು, ಹತ್ತಿ ಬೆಳೆದ ಹೊಲದಲ್ಲಿ ದಾಳಿಂಬೆ ಎಂದು ಅಧಿಕಾರಿಗಳು ಜಿಪಿಎಸ್‌ ಮಾಡಿದ್ದರಿಂದ ಸರಕಾರದ ನಯಾಪೈಸೆ ರೈತರಿಗೆ ಸಿಕ್ಕಿಲ್ಲ.

ತಲೇಖಾನ ಗ್ರಾಪಂದಲ್ಲಿ ಜಿಪಿಎಸ್‌ ಸರಿಯಾಗಿ ಮಾಡದಿರುವುದರಿಂದ ಬೆಳೆ ಪರಿಹಾರವೂ ಸಿಕ್ಕಿಲ್ಲ. ತೊಗರಿ ಖರೀದಿ ಕೇಂದ್ರದಲ್ಲಿ ತೊಗರಿ ನೋಂದಣಿಯಾಗುತ್ತಿಲ್ಲ. ಬೆಂಬಲ ಬೆಲೆಗೆ ತೊಗರಿ ಖರೀದಿ ಮಾಡುವ ಕೇಂದ್ರದ ಅಧಿಕಾರಿಗಳು ನಿಮ್ಮ ಪಹಣೆಯಲ್ಲಿ ತೊಗರಿ ಎಂದು ನಮೋದಿಸಿಲ್ಲ ಎಂದು ಮರಳಿಸುತ್ತಿದ್ದಾರೆಂದು ಹಡಗಲಿ, ಸೊಂಪೂರ, ಯರದೊಡ್ಡಿ, ದೇಸಾಯಿ ಭೋಗಾಪೂರ, ಹಡಗಲಿ ತಾಂಡಾದ ರೈತರು ಆರೋಪಿಸಿದ್ದಾರೆ.

ಒಂದು ಭಾರಿ ಜಿಪಿಎಸ್‌ ಸೆರೆ ಹಿಡಿಯುವದರಿಂದ ರೈತರಿಗೆ ಎರಡು ತೊಂದರೆ ಅನುಭವಿಸುವಂತಾಗಿದೆ. ಸತತ ಮಳೆಯಿಂದ ಹೊಲದಲ್ಲಿನ ಫಸಲು ಕಳೆದುಕೊಂಡ ರೈತರು ಸರಕಾರ ಘೋಷಿಸಿದ ಪರಿಹಾರ ಹಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯ್ದರು ಉಪಯೋಗವಾಗಿಲ್ಲ. ಇನ್ನು ದೇವರು ವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬಂತೆ ಅಧಿಕಾರಿಗಳ ತಪ್ಪಿನಿಂದ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಧನ ಜಮೆಯಾಗಿಲ್ಲ. ಕನ್ನಾಳ ಮತ್ತು ಮೆದಕಿನಾಳ ಗ್ರಾಪಂದಲ್ಲಿಯೂ ಜಿಪಿಎಸ್‌ ತಪ್ಪಾಗಿದೆ ಎಂದು ಅಲ್ಲಿನ ರೈತರು ಆರೋಪಿಸಿದ್ದಾರೆ.

ಬೇರೆ ಗ್ರಾಪಂಗಳಲ್ಲಿ ಬೆಳೆ ಪರಿಹಾರ ಬಂದಿದೆ. ಆದರೆ, ನಾವು ತಿಂಗಳಿಂದ ಪರಿಹಾರ ಹಣಕ್ಕೆ ತಹಶೀಲ್ದಾರ್‌ ಕಚೇರಿಗೆ ಅಲೆದು ಸಾಕಾಗಿದೆ. ಪರಿಹಾರ ಹಣ ಬ್ಯಾಂಕ್‌ ಖಾತೆಗೆ ಜಮೆಯಾಗಿಲ್ಲ. ಈ ಬಗ್ಗೆ ಯಾವ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. -ದೊಡ್ಡನಗೌಡ ಪಾಟೀಲ್‌, ಹಡಗಲಿ ಗ್ರಾಮದ ರೈತ

ತೊಗರಿ ಬೆಳೆ ಜಿಪಿಎಸ್‌ ಸೆರೆ ಹಿಡಿಯದ ಅರ್ಜಿಗಳನ್ನು ರೈತರಿಂದ ಸ್ವೀಕರಿಸಲಾಗಿದೆ. ಕೃಷಿ ಇಲಾಖೆಯಿಂದ ಮಹಜರ ವರದಿ ಮಾಡಿ ಪುನಃ ಬೆಳೆ ತಂತ್ರಾಂಶದಲ್ಲಿ ಅಳವಡಿಸಿದ ಬಳಿಕ ತೊಗರಿ ಬೆಳೆದ ರೈತರ ಪಹಣಿಯಲ್ಲಿ ನಮೋದಾಗುತ್ತದೆ. -ಶಿವಶರಣ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.