ಅಹಂ ನಿರಸನ ಸಾರ್ಥಕ ಬದುಕಿಗೆ ಪ್ರೇರಣೆ: ಶಿವಕುಮಾರ


Team Udayavani, Dec 9, 2021, 2:51 PM IST

26motivation

ಔರಾದ: ಅಹಂಕಾರ ಪ್ರಕೃತಿಗೆ ಇರುವುದಿಲ್ಲ, ಮನುಷ್ಯರಿಗೆ ಮಾತ್ರ ಇರುತ್ತದೆ. ಆದ್ದರಿಂದ ಅಹಂ ನಿರಸನ ಜೀವನವೇ ಸಾರ್ಥಕ ಬದುಕಿಗೆ ಪ್ರೇರಣೆ ಆಗುತ್ತದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ನುಡಿದರು.

ತಾಲೂಕಿನ ಬಲ್ಲೂರ ಗ್ರಾಮದಲ್ಲಿ ಮಲ್ಲಶೆಟ್ಟೆಪ್ಪ ಉದಗಿರೆಯವರ ಎರಡನೇ ಸ್ಮರಣೋತ್ಸವ ಹಾಗೂ ಸಾಹಿತ್ಯ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜೀವಿಯ ಬದುಕಿಗೂ ಒಂದು ಅರ್ಥವಿರುತ್ತದೆ. ಆದರೆ ಜೀವನಕ್ಕೆ ಅರ್ಥಬರುವಂತೆ ಬದುಕುವವರು ವಿರಳ. ಪರೋಪಕಾರಿಯಾಗಿ ಸಾಮಾಜಿಕ ಮೌಲ್ಯಗಳನ್ನು ಬದುಕಿದ ಮಲ್ಲಶೆಟ್ಟೆಪ್ಪ ಜೀವನ ಮುಂದಿನ ಜನಾಂಗಕ್ಕೆ ಮಾದರಿಯಾಗಿದೆ ಎಂದರು.

ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ಕೆಲವರು ಸಾವಿಗೂ ಒಂದು ಅರ್ಥ ತಂದು ಕೊಡುವುದರ ಮೂಲಕ ಸಾವಿನಾಚೇಗೂ ಬದುಕುಳಿಯುತ್ತಾರೆ. ಅಂಥ ಹಿರಿಯರ ಸ್ಮರಣೆ ನಮ್ಮ ಬದುಕಿಗೆ ಸತ್ಪ್ರೇರಣೆಯಾಗಬೇಕು. ಜತೆಗೆ ಸಾಮಾಜಿಕ ಸೇವೆ ನಮ್ಮ ಬದುಕಿನ ಭಾಗವಾಗಬೇಕು ಅಂದಾಗ ನಮ್ಮ ಜೀವನಕ್ಕೂ ಅರ್ಥಬರುತ್ತದೆಂದು ಅಭಿಪ್ರಾಯಪಟ್ಟರು.

ಮಲ್ಲಿಕಾರ್ಜುನ ಬಂಬುಳಗೆ ಅವರು ಅನುಭಾವ ನುಡಿ ನುಡಿಯುತ್ತ ಮಲ್ಲಶೆಟ್ಟೆಪ್ಪ ಅವರ ಜೀವನ ಆದರ್ಶಮಯವಾಗಿದ್ದು ಅನೇಕರ ಬದುಕಿಗೆ ನೆರವಾಗುವ ಮೂಲಕ ಸಾರ್ಥಕ ಜೀವನ ನಡೆಸಿ ನಮಗೆಲ್ಲ ಆದರ್ಶಪ್ರಾಯ ಆಗಿದ್ದರು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಶರಣಬಸವ ಚಲುವಾ, ಉದ್ಯಮಿ ಬಸವರಾಜ ಪಾಟೀಲ ಮಾತನಾಡಿದರು. ಎನ್‌ಜಿಒ ಗೃಹ ನಿರ್ಮಾಣ ಮಂಡಳಿ ನಿರ್ದೇಶಕ ಸಿದ್ದಾರೆಡ್ಡಿ ನಾಗೋರಾ, ಹಿರಿಯ ಮುಖಂಡ ಕಲ್ಯಾಣರಾವ್‌ ಸಂಗಾಪಾಟೀಲ, ಗ್ರಾಪಂ ಸದಸ್ಯರಾದ ಶಿವರಾಜ ಪಾಟೀಲ, ಪ್ರಭು ಬಳತೆ, ಶಿಲ್ಪಾ ರೇವಣಪ್ಪ, ಪಂಡಿತ ಮಾಣಿಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿವಕುಮಾರ ತರನಾಳೆ ಮತ್ತು ದೇವೇಂದ್ರ ಕರಂಜೆ ಅವರನ್ನು ಸನ್ಮಾನಿಸಲಾಯಿತು.

ಕಸ್ತೂರಿ ಪಟಪಳ್ಳಿ, ವಿದ್ಯಾವತಿ ಬಲ್ಲೂರ, ಡಾ| ಬಂಡಯ್ಯ ಸ್ವಾಮಿ, ಡಾ| ರಾಜಕುಮಾರ ಅಲ್ಲೂರೆ, ಡಾ| ಈಶ್ವರಯ್ಯ ಕೊಡಂಬಲ್‌, ಡಾ| ಶಿವರಾಜ ಪಾಟೀಲ, ಡಾ| ಮನ್ಮಥ ಡೋಳೆ, ಜಗನ್ನಾಥ ಮೂಲಗೆ, ಓಂಪ್ರಕಾಶ ದಡ್ಡೆ, ಶರಣಬಸವಪ್ಪ ಕಾರೆಮುಂಗೆ, ಶರಣಪ್ಪ ಬಿರಾದಾರ ಮುಸ್ತಾಪುರ, ಶಿವಪುತ್ರ ಪಟಪಳ್ಳಿ, ರಾಜಕುಮಾರ ಉದ್ಗೀರೆ, ಗಂಗಶೆಟ್ಟಿ ಪಾಟೀಲ, ಸಂಗಶೆಟ್ಟಿ ಉದ್ಗಿರೆ, ಶಿವರಾಜ ಚಿಲ್ಲಾಳೆ, ಪ್ರಭಾಕರ ದೇಸಾಯಿ, ಅಮರೇಶ ನಿಡೋದೆ ಇನ್ನಿತರರಿದ್ದರು. ಡಾ| ಬಸವರಾಜ ಬಲ್ಲೂರ ಪ್ರಾಸ್ತಾವಿಕ ನುಡಿದರು. ಶಿವಶಂಕರ ಟೋಕರೆ ಸ್ವಾಗತಿಸಿದರು. ಜಗನ್ನಾಥ ಕಮಲಾಪುರೆ ನಿರೂಪಿಸಿದರು. ಟಿ.ಎಂ. ಮಚ್ಚೆ ವಂದಿಸಿದರು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.