ಖಂಡ್ರೆ ಆರೋಪ ಅರ್ಥಹೀನ
Team Udayavani, Mar 14, 2021, 5:38 PM IST
ಬೀದರ: ಭಾಲ್ಕಿ ಶಾಸಕ ಈಶ್ವರ ಖಂಡ್ರೆಯವರು ನಾನು ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದೇನೆ, ಅಭಿವೃದ್ಧಿ ವಿರೋಧಿ ಎಂದು ಆರೋಪಿ ಸಿರುವುದು ಅರ್ಥಹೀನವಾಗಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೀದರ ನಗರದ ಹೊರವಲಯದ ರಿಂಗ್ ರಸ್ತೆ ಮಂಜೂರಿಯಾಗಿ ಕಾಮಗಾರಿ ಪ್ರಗತಿಯಲ್ಲಿತ್ತು. ಆದರೆ, ಗುತ್ತಿಗೆದಾರನ ಮೇಲೆ ದ್ವೇಷ ಸಾಧಿಸಿ ಟೆಂಡರ್ ಅನ್ನು ನೀವೆ ರದ್ದುಪಡಿಸಿರುವುದು ಅಮೃತ ಯೋಜನೆಯಡಿ ಜನವಾಡಾ ಮಾಂಜ್ರಾ ನದಿಗೆ ಬ್ರಿàಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಪೌರಾಡಳಿತ ಸಚಿವರಾಗಿದ್ದಾಗ ರದ್ದು ಮಾಡಿರುವುದು ಅಭಿವೃದ್ಧಿ ವಿರೋಧಿ ನೀತಿ ಅಲ್ಲವೇ ? ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ನಿಮ್ಮ ವ್ಯಕ್ತಿಗೆ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಸುಮಾರು 4 ವರ್ಷಗಳಿಂದ ಕೇಂದ್ರ ಪ್ರಾರಂಭಕ್ಕೆ ಬಿಡದಿರುವುದು ಬಡವರ ವಿರೋಧಿ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಅಭಿವೃದ್ಧಿ ವಿರೋಧಿ ಕೆಲಸ ಮಾಡುವುದು ನಿಮ್ಮ ಇತಿಹಾಸವಿದೆ. ನನ್ನ ಮೇಲೆ ಆರೋಪ ಮಾಡಲು ನಿಮಗೆ ಯಾವ ನೈತಿಕತೆಯಿದೆ ಎಂದು ಹೇಳಿರುವ ಖೂಬಾ, ಜಿಲ್ಲೆಯಲ್ಲಿ ಸಂಸದರ ಅವಧಿಯಲ್ಲಿ ಯಾವ್ಯಾವ ಅಭಿವೃದ್ಧಿ ಕೆಲಸಗಳು ಆಗಿವೆ ಎಂಬುದನ್ನು ಪುಸ್ತಕದ ರೂಪದಲ್ಲಿ ಹೊರತಂದು ಜನರಿಗೆ ಲೆಕ್ಕ ಕೊಟ್ಟಿರುವ ಮೊದಲ ಸಂಸದ ನಾನು. ಒಬ್ಬ ಸಂಸದನಾಗಿ ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಭ್ರಷ್ಟಾಚಾರ, ತಾನಾಶಾಯಿ, ಸಂವಿಧಾನಕ್ಕೆ ಅಗೌರವ ಹಾಗೂ ಜನರಿಗೆ ಅನ್ಯಾಯವಾಗುತ್ತಿದ್ದರೆ ಅದರ ವಿರುದ್ಧ ಧ್ವನಿ ಎತ್ತುತ್ತೇನೆ. ಅಭಿವೃದ್ಧಿ ಪರ ಕೆಲಸಗಳಿಗೆ ವಿರೋಧ ಮಾಡುವುದಿಲ್ಲ ಎಂದಿದ್ದಾರೆ.
ನಿಮ್ಮ ದುರಾಡಳಿತದಿಂದ ಭಾಲ್ಕಿ ತಾಲೂಕಿನ ಅರ್ಹ ವಸತಿ ಫಲಾನುಭವಿಗಳಿಗೆ ಹಣ ಬರುವುದು ತಡವಾಗಿದೆ. ಆದರೆ, ಈಗ ನಮ್ಮ ಸರ್ಕಾರ ಅರ್ಹ ಫಲಾನುಭವಿಗಳಿಗೆ ಹಣ ನೀಡುತ್ತಿದೆ, ಮುಂದೆಯೂ ನೀಡುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ