![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಕಾಂಗ್ರೆಸ್ಸಿಗರಿಂದ ದಾರಿ ತಪ್ಪಿಸುವ ಕೆಲಸ: ಸಂಸದ ಭಗವಂತ ಖೂಬಾ
Team Udayavani, Oct 3, 2020, 4:07 PM IST
![ಕಾಂಗ್ರೆಸ್ಸಿಗರಿಂದ ದಾರಿ ತಪ್ಪಿಸುವ ಕೆಲಸ: ಸಂಸದ ಭಗವಂತ ಖೂಬಾ](https://www.udayavani.com/wp-content/uploads/2020/10/bidara-tdy-2-620x372.jpg)
ಬೀದರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ರೈತರ ಹಿತಕ್ಕಾಗಿ ಎಪಿಎಂಸಿ ಕಾಯ್ದೆ ಸೇರಿ ಹೊಸ ಮಸೂದೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ಸಿಗರು ಈ ಬಗ್ಗೆ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದು, ರೈತರು ಇಂತಹ ಹೇಳಿಕೆಗಳಿಂದ ದೂರವಿರಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಪ್ಪಂದವು ರೈತರಿಗೆ ಪೂರ್ವನಿಗದಿತ ದರ ಪಡೆಯಲು ಅನುವು ಮಾಡಿಕೊಡಲಿದೆ. ಯಾವಾಗ ಬೇಕಾದರೂ ರೈತರು ಒಪಂದದಿಂದ ನಿರ್ಗಮಿಸಬಹುದು. ರೈತರು ಭೂಮಿಯನ್ನು ಮಾರಾಟ, ಲೀಸ್ ಅಥವಾ ಅಡ ಇಡುವಿಕೆಗೆ ನಿಷೇಧಿಸಲ್ಪಟ್ಟಿದೆ ಎಂದು ಮಸೂದೆಯಲ್ಲಿ ಸ್ಪಷ್ಟವಾಗಿ ನಿರ್ದೇಶಿಸಲ್ಪಟ್ಟಿದೆ, ಒಪ್ಪಂದವು ಬೆಳೆಗಳಿಗೆ ಸಂಬಂಧಿಸಿದೆ ಹೊರತು ಭೂಮಿಗೆ ಸಂಬಂಧಿಸಿಲ್ಲ. ಕೃಷಿ ಮಸೂದೆಗೂ ಕನಿಷ್ಠ ಬೆಂಬಲ ಬೆಲೆಗೂ ಯಾವುದೇ ಸಂಬಂಧವಿಲ್ಲ. ಎಂ.ಎಸ್.ಪಿ. ನೀಡಲಾಗುತ್ತದೆ ಮತ್ತು ಮುಂದೆಯೂ ಅದು ಮುಂದುವರಿಯುತ್ತದೆ. ಕೃಷಿ ಮಸೂದೆಯೂ ರೈತರಿಗೆ ಸ್ವಾತಂತ್ರ್ಯ ನೀಡಲಿದೆ. ಈಗ ರೈತರು ತಮ್ಮ ಬೆಳೆಗಳನ್ನು ಯಾರಿಗೆ ಬೇಕಾದರೆ, ಯಾವಾಗ ಬೇಕಾದರೂ ಮಾರಾಟ ಮಾಡಬಹುದು ಮತ್ತು ಇದು ಒಂದು ರಾಷ್ಟ್ರ ಒಂದು ಮಾರುಕಟ್ಟೆ ಸೃಷ್ಟಿಸಲಿದೆ.
ರೈತನು ತಾನು ಬೆಳೆದ ಬೆಳೆಗಳನ್ನು ತನಗಿಷ್ಟವಾದಲ್ಲಿ, ತನಗೆ ಸರಿಹೊಂದುವ ಬೆಲೆಯಲ್ಲಿ ದೇಶಾದ್ಯಂತ ಎಲ್ಲಿ ಬೇಕಾದರೂ ಮಾರಾಟ ಮಾಡಲಿ ಎನ್ನುವ ಉದ್ದೇಶದಿಂದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ ಜಾರಿಗೆ ತರಲಾಗಿದೆ. ಇತರ ರಾಜ್ಯಗಳ ಪರವಾನಗಿ ಹೊಂದಿದ ವ್ಯಾಪಾರಿಗಳೊಂದಿಗೆ ನೇರವಾಗಿ ಒಪ್ಪಂದ ಮಾಡಿಕೊಂಡು ರೈತ ವ್ಯವಹರಿಸಬಹುದಾಗಿದೆ, ದಲ್ಲಾಳಿಗಳಿಂದ ಮುಕ್ತಿ ನೀಡುವುದು ಮಸೂದೆ ಉದ್ದೇಶವಾಗಿದೆ ಎಂದರು.
ಬೆಳೆ ಖಾತ್ರಿ ಮತ್ತು ಕೃಷಿ ಸೇವೆಗಳ ಮಸೂದೆಯಿಂದ ಸಣ್ಣ ರೈತ ಕೂಡ ನೇರವಾಗಿ ಸಗಟು ಮಾರಾಟಗಾರರೊಂದಿಗೆ ಮತ್ತು ರಫ್ತುದಾರರೊಂದಿಗೆ ನೇರ ಒಪ್ಪಂದ ಅಥವಾ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಬಹುದು. ಸರಿಯಾದ ಕೃಷಿ ಯಂತ್ರೋಪಕರಣಗಳನ್ನು ಖರೀದಿದಾರರೇ ರೈತರಿಗೆ ನೀಡುತ್ತಾರೆ. ಜತೆಗೆ, ತಾಂತ್ರಿಕ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುವರು. ಇದರಿಂದ ದೇಶದ ಬೆನ್ನೆಲುಬಾಗಿರುವ ರೈತನ ಆದಾಯ 2022ರವೆಳೆಗೆ ದ್ವಿಗುಣಗೊಳಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.