ಸಂಗೀತದಿಂದ ಜೀವನಕ್ಕೆ ಉಲ್ಲಾಸ ಸಾಧ್ಯ
Team Udayavani, Feb 7, 2022, 3:17 PM IST
ಬೀದರ: ಮನಸ್ಸಿಗೆ ಚೈತನ್ಯ ನೀಡಿ, ಜೀವನಕ್ಕೆ ಉಲ್ಲಾಸ ತುಂಬುವ ಶಕ್ತಿ ಸಂಗೀತಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
ಅಕ್ಕಮಹಾದೇವಿ ಮಹಿಳಾ ಜಾನಪದ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ತಾಲೂಕಿನ ಕಂಗನಕೋಟ ಗ್ರಾಮದ ಅಕ್ಕಮಹಾದೇವಿ ಮಂದಿರದಲ್ಲಿ ನಡೆದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಿ ಮನರಂಜನೆಯ ಜೊತೆಗೆ ಕನ್ನಡ ಭಾಷೆ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಮಾತನಾಡಿ, ಅಕ್ಕಮಹಾದೇವಿ ಮಹಿಳಾ ಸಂಸ್ಥೆ ಉತ್ತಮ ಸಾಂಸ್ಕೃತಿಕ ಚಟುವಟಿಕೆಗಳು ನಡೆಸುತ್ತಿದೆ ಎಂದು ಹೇಳಿದರು.
ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಮಾತನಾಡಿದರು. ಸಾಹಿತಿ ಓಂಕಾರ ಪಾಟೀಲ, ಗ್ರಾಪಂ ಸದಸ್ಯರಾದ ಅವೀರ ಸಾವಂತ, ಕೃಷ್ಣಮ್ಮ ಪುಂಡಲಿಕ, ಸುರೇಶ ಪಾಟೀಲ ಇದ್ದರು. ಗಣಪತಿ ಶಂಭು ಪ್ರಾಸ್ತಾವಿಕ ಮಾತನಾಡಿದರು. ಗೀತಾ ಭುಳ್ಳಾ ತಂಡದಿಂದ ಸಂಗೀತ, ಪುತಳಾಬಾಯಿ ತಂಡದಿಂದ ಸಂಪ್ರದಾಯಿಕ ಪದ, ನಿರ್ಮಲಾಬಾಯಿ ಶಂಭು ತಂಡದಿಂದ ತತ್ವಪದ, ಶಂಕರಯ್ನಾ ಸ್ವಾಮಿ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ