ಬಸವಣ್ಣ ದೇಗುಲದೆದುರು ಭದ್ರತೆ
Team Udayavani, Apr 10, 2020, 3:39 PM IST
ನಾರಾಯಣಪುರ: ಬಸವೇಶ್ವರ ದೇಗುಲದ ಎದುರು ಪೊಲೀಸರು ಭದ್ರತೆ ಒದಗಿಸಿದರು.
ನಾರಾಯಣಪುರ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಸುಕ್ಷೇತ್ರ ಕಾಲಜ್ಞಾನಿ ಕೊಡೇಕಲ್ ಬಸವಣ್ಣ ದೇವರ ಜೋಡು ಪಲ್ಲಕ್ಕಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಗುರುವಾರ ರದ್ದಾಗಿದರಿಂದ ದೇಗುಲದ ಎದುರು ಪೊಲೀಸ್ ಸಿಬ್ಬಂದಿ ಸೂಕ್ತ ಭದ್ರತೆ ಒದಗಿಸಿದ್ದರು.
ಗುರುವಾರ ಪೀಠಾಧಿಪತಿ ವೃಷಬೇಂದ್ರ ಅಪ್ಪನವರ ಮಾರ್ಗದರ್ಶನ ಅರಸು ಮನೆತನದ ಜಹಗೀರದಾರ ನೇತೃತ್ವದಲ್ಲಿ ವರ್ಷದ ಪದ್ಧತಿಯಂತೆ ಅಷ್ಟ ವಿಧಾರ್ಚನೆಯ ಪೂಜೆ, ಬಾರಾ ಬಲೂತಿ ಸಂಪ್ರದಾಯದಂತೆ ಜೋಡು ಪಲ್ಲಕ್ಕಿಗಳ ಉತ್ಸವ ನಡೆಯಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಗೊಳಿಸಿದ್ದು, ಜಿಲ್ಲಾಡಳಿತ ಜಾತ್ರೆ-ಉತ್ಸವಗಳಿಗೆ ಬ್ರೇಕ್ ಹಾಕಿದೆ. ಹೀಗಾಗಿ ಜಾತ್ರಾ ಉತ್ಸವದ ಎಲ್ಲ ಧಾರ್ಮಿಕ ಕಾರ್ಯಕ್ರಮ ರದ್ದುಗೊಳಿಸಿದ್ದರಿಂದ ಭಕ್ತರು ಮನೆಯಿಂದ ಹೊರಬರಲಿಲ್ಲ. ಪ್ರತಿ ವರ್ಷದಂತೆ ಜರುಗುತ್ತಿದ್ದ ಜಾನುವಾರು ಜಾತ್ರೆ ರದ್ದುಗೊಳಿಸಲಾಗಿದೆ. ಹುಣಸಗಿ ಸಿಪಿಐ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ