ಮಂಗಳೂರಿನಿಂದ ಸ್ವಗ್ರಾಮಕ್ಕೆ ಮರಳಿದ ಕಾರ್ಮಿಕರು
Team Udayavani, May 1, 2020, 1:28 PM IST
ನಾರಾಯಣಪುರ: ಕೊಡೇಕಲ್ ಪಟ್ಟಣಕ್ಕೆ ಮಂಗಳೂರಿನಿಂದ ಆಗಮಿಸಿದ ಕಾರ್ಮಿಕರು ಆರೋಗ್ಯ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆ ಎದುರು ಸಾಮಾಜಿಕ ಅಂತರದಲ್ಲಿ ನಿಂತಿರುವುದು.
ನಾರಾಯಣಪುರ: ಉದ್ಯೋಗ ಅರಸಿ ಮಂಗಳೂರು ಜಿಲ್ಲೆಗೆ ಗುಳೆ ಹೋಗಿದ್ದ ಕೊಡೇಕಲ್ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಕೂಲಿ ಕಾರ್ಮಿಕರು ಬುಧವಾರ ಮತ್ತು ಗುರುವಾರ ಪ್ರತ್ಯೇಕ ಎರಡು ಸಾರಿಗೆ ಬಸ್ಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಮರಳಿದರು.
ಮಂಗಳೂರಿನಿಂದ ಬುಧವಾರ ಕೊಡೇಕಲ್ ಆಗಮಿಸಿದ ಮಾರನಾಳ ಗ್ರಾಮದ 7 ಜನ ಬಲಶೆಟ್ಟಿಹಾಳ ಗ್ರಾಮದ ಇಬ್ಬರು ಕಾರ್ಮಿಕರನ್ನು ಕೊಡೇಕಲ್ ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಡ ಕಚೇರಿ ಉಪತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಮಂಗಳೂರಿಗೆ ತೆರಳಿದ್ದ ವಲಯದ ಕಾರ್ಮಿಕರನ್ನು ಅಲ್ಲಿನ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕಳುಹಿಸಿಕೊಟ್ಟಿದ್ದಾರೆ.
ಈಗಾಗಲೇ ಅವರು 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದು ಮತ್ತೆ ಸ್ಕ್ರೀನಿಂಗ್ ಮೂಲಕ ತಪಾಸಣೆ ಮಾಡಲಾಗಿದೆ. ಪ್ರತಿಯೊಬ್ಬರ ಮಾಹಿತಿ ದಾಖಲಿಸಿಕೊಂಡು ಮನೆಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು. ಗುರುವಾರ ಕೊಡೇಕಲ್ ಹೋಬಳಿ ವ್ಯಾಪ್ತಿಯ ಎಣ್ಣಿವಡಿಗೇರಿ ಮತ್ತು ಮದಲಿಂಗನಾಳ ಗ್ರಾಮಗಳಿಂದ ಗುಳೆ ಹೋಗಿದ್ದ ಕಾರ್ಮಿಕರು ಕೂಡ ಎರಡು ಪ್ರತ್ಯೇಕ ಬಸ್ಗಳಲ್ಲಿ ಸ್ವಗ್ರಾಮಗಳಿಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೂ ಕೂಡ ಕೊಡೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಪವನರಾವ ತಪಾಸಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್