ವಲಸೆ ತಡೆಗೆ ನರೇಗಾ ಸಹಕಾರಿ
Team Udayavani, Mar 23, 2022, 3:28 PM IST
ಮಾನ್ವಿ: ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆ ಕಡಿಮೆ ಆಗುವುದರಿಂದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸಲು, ಕೂಲಿ ಕಾರ್ಮಿಕರಿಗೆ ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿಯೇ ಉದ್ಯೋಗ ಕಲ್ಪಿಸಲು, ಗ್ರಾಮಕ್ಕೆ ಶಾಶ್ವತ ಆಸ್ತಿ ರೂಪಿಸಲು ನರೇಗಾ ಯೋಜನೆ ಸಹಕಾರಿ ಎಂದು ತಾಪಂ ಇಒ ಸ್ಟೇಲಾ ವರ್ಗೀಸ್ ಹೇಳಿದರು.
ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆಯ ದುಡಿಯೋಣ ಬಾ ಅಭಿಯಾನ ನಿಮಿತ್ತ ಹಮ್ಮಿಕೊಂಡಿದ್ದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರದಿಂದ ನರೇಗಾ ಯೋಜನೆಯಲ್ಲಿ ಮಾ.15ರಿಂದ ಜೂ.30ರವರೆಗೆ 100 ದಿನಗಳ ಕಾಲ ನಿರಂತರ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು, ಮಹಿಳೆಯರು, ವೃದ್ಧರು, ವಿಕಲಚೇತನರು ಕೆಲಸ ಪಡೆಯಬಹುದು. ವಿವಿಧ ವಸತಿ ಯೋಜನೆಗಳ ಫಲಾನುಭವಿಗಳು, ಸಣ್ಣ ರೈತರು ವೈಯಕ್ತಿಕ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ತಾಲೂಕಿನ ಜನರಿಗೆ ನರೇಗಾ ಕುರಿತು ಮಾಹಿತಿ ನೀಡಲು ಉದ್ಯೋಗ ವಾಹಿನಿ ಜಾಗೃತಿ ರಥದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಈ ವೇಳೆ ರೇಷ್ಮೆ ಇಲಾಖೆ ನಿರೀಕ್ಷಕರಾದ ಮಹಾಂತಮ್ಮ, ನರೇಗಾ ಯೋಜನೆ ಅಧಿಕಾರಿಗಳಾದ ವೀರೇಶ, ಲಿಂಗಪ್ಪ, ಅಶೋಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!