ಜಿಲ್ಲೆ ಅಭಿವೃದ್ದಿಗೆ ಶ್ರಮ ವಹಿಸಿ: ಸಿಇಒ ನಸೀಮ್
Team Udayavani, Apr 9, 2022, 4:44 PM IST
ಬೀದರ: ಆಡಳಿತ ಸಹಾಯಕ ಸಿಬ್ಬಂದಿ, ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರಿಗೆ ನರೇಗಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಜವಾಬ್ದಾರಿಗಳ ನಿರ್ವಹಣೆಯಲ್ಲಿ ನೆರವಾಗಲು ಪರಿಶೀಲನಾ ವರದಿಗಳ ತಯಾರಿಕೆ, ಪ್ರಗತಿ ವರದಿ ಸಿದ್ಧಪಡಿಸುವುದು, ಹೀಗೆ ಜಿಲ್ಲೆಯ ಅಭಿವೃದ್ಧಿಗಾಗಿ ತಾವೆಲ್ಲರೂ ಶ್ರಮವಹಿಸಬೇಕು ಎಂದು ಜಿಪಂ ಸಿಇಒ ಜಹೀರಾ ನಸೀಮ್ ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಡಳಿತ ಸಹಾಯಕ ಸಿಬ್ಬಂದಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಬಿಎಪ್ಟಿ, ಗ್ರಾಮ ಕಾಯಕ ಮಿತ್ರರಿಗೆ ಸಂಬಂಧಿಸಿದ ವಿಷಯಗಳ ನಿರ್ವಹಣೆ ಮಾಡಬೇಕು. ನರೇಗಾ ಯೋಜನೆಗೆ ಸಂಬಂಧಿಸಿದ ಸಾಮಗ್ರಿಗಳ ಖರೀದಿ ಮತ್ತು ಸೇವೆಗಳಿಗೆ ಸಂಬಂಧಿಸಿದ ದಾಖಲೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ನರೇಗಾ ಯೋಜನೆಗಳಿಗೆ ಸಂಬಂಧಿಸಿದ ದಾಖಲಾತಿಗಳ ನಿರ್ವಹಣೆ ಜವಾಬ್ದಾರಿ ಪೂರ್ವಕವಾಗಿ ಮಾಡಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಮಾತನಾಡಿದರು. ಜಿಪಂ ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಅಧಿಕಾರಿ ಬೀರೇಂದ್ರ ಸಿಂಗ್ ಠಾಕೂರ್ ಮಾತನಾಡಿ, ಸಿಬ್ಬಂದಿಗಳ ದಿನಚರಿ ಹಾಗೂ ಸರಿಯಾದ ಸಮಯದಲ್ಲಿ ಕೂಲಿ ಪಾವತಿ ಆಗಿದೆಯೇ ಇಲ್ಲವೆಂಬುದನ್ನು ಎಲ್ಲರೂ ಖಚಿತ ಪಡಿಸಿಕೊಳ್ಳಬೇಕು. ಯೋಜನೆ ಅನುಷ್ಠಾನ, ಸಾಮಾಜಿಕ ಪರಿಶೋಧನೆ, ಹೊರಗುತ್ತಿಗೆ ಸಿಬ್ಬಂದಿ ಕಾರ್ಯ ನಿರ್ವಹಣೆ ಸಂಬಂಧಿಸಿದ ಇಲಾಖೆಗಳಿಗೆ ಸಮನ್ವಯ ಸಾಧಿಸಬೇಕು ಎಂದರು.
ಜಿಪಂ ಎಡಿಪಿಸಿ ದೀಪಕ ಕಡಿಮನಿ ಹಾಗೂ ಡಿಎಂಐಎಸ್ ಕೋಮಲ ಕಿರಣ್ ಆಡಳಿತ ಸಹಾಯಕರಿಗೆ ತರಬೇತಿ ನೀಡಿದರು. ಈ ವೇಳೆ ಜಿಪಂ ಐಇಸಿ ಸಂಯೋಜಕ ಮರೆಪ್ಪ ಹರವಾಳಕರ್ ಸೇರಿದಂತೆ ಆಡಳಿತ ಸಹಾಯಕ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ