ಸ್ವದೇಶಿ ವಸ್ತು ಬಳಕೆಯಿಂದ ರಾಷ್ಟ್ರಪ್ರೇಮ


Team Udayavani, Mar 30, 2019, 2:28 PM IST

bid-1

ಹುಮನಾಬಾದ: ವಿದ್ಯಾರ್ಥಿಗಳು ಸ್ವದೇಶಿ ವಸ್ತು ಬಳಸಿ, ರಾಷ್ಟ್ರಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ| ಸುಚಿತಾನಂದ ಮಲ್ಕಾಪುರೆ ಹೇಳಿದರು.

ವೀರಭದ್ರೇಶ್ವರ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ಬಸವತೀರ್ಥ ವೀರಭದ್ರೇಶ್ವರ ದೇವಸ್ಥಾನ ಪ್ರಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ವಿದೇಶಿ ಪಾನೀಯ ಬಳಕೆ ಬೇಡ: ರಾಸಾಯನಿಕ ಮಿಶ್ರಣದಿಂದ ಕೂಡಿದ ಹಾಗೂ ಅನಾರೋಗ್ಯಕ್ಕೆ ಕಾರಣವಾಗುವ ವಿದೇಶಿ ಪಾನೀಯಗಳನ್ನು ಸೇವಿಸಿ ಹಣದ ಜೊತೆಗೆ ಆರೋಗ್ಯ ಹಾಳು ಮಾಡಿಕೊಳ್ಳದೇ ದೇಶೀಯ ಪಾನೀಯಗಳಾದ ಎಳೆ ನೀರು, ಮಜ್ಜಿಗೆ, ಕಲ್ಲಂಗಡಿ ಇತ್ಯಾದಿಗಳನ್ನೂ ಸವಿಯುವ ಮೂಲಕ ಹಣ ಉಳಿತಾಯದ ಜೊತೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉತ್ತಮ ಸಂಸ್ಕೃತಿ ಅಳವಡಿಸಿಕೊಳ್ಳಿ: ವಿದ್ಯಾರ್ಥಿಗಳು ಗುರುಗಳು, ಹೆತ್ತ ತಂದೆ-ತಾಯಿ, ಹಿರಿಯರನ್ನು ಗೌರವಿಸಬೇಕು. ಕಷ್ಟ ಕಾಲದಲ್ಲಿ ಇತರರಿಗೆ ಸಹಾಯ ಮಾಡಬೇಕು. ಸಹಾಯ ಮಾಡಲು ಆಗದಿದ್ದರೆ ಅನ್ಯರ ಬಗ್ಗೆ ಕೇಡು ಬಯಸಬಾರದು ಎಂದು ಹೇಳಿದರು.

ಕಷ್ಟದಲ್ಲಿದ್ದವರಿಗೆ ಆಸರೆಯಾಗಿ: ಮುಖ್ಯ ಅತಿಥಿಯಾಗಿ ವೀರಭದ್ರೇಶ್ವರ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ಶಿವಾನಂದ ಮಠಪತಿ ಮಾತನಾಡಿ, ಜೀವಿತಾವಧಿ ಯಲ್ಲಿ ಕಷªಲ್ಲಿದ್ದವರಿಗೆ ಆಸರೆ ಆಗಬೇಕು. ಪಶು-ಪಕ್ಷಿ, ಗಿಡ-ಮರಗಳಿಂದ ಮನುಷ್ಯ ಏನೆಲ್ಲ ಕಲಿಯಬೇಕಾಗಿದೆ. ದ್ವೇಷ,
ಅಸೂಯೆ ತೊರೆದು ಎಲ್ಲರ ಜೊತೆಯಲ್ಲಿ ಬೆರೆತು ಬಾಳುವುದನ್ನು ಕಲಿಯಬೇಕು ಎಂದು ಹೇಳಿದರು.

ವಾರ್ಷಿಕ ವಿಶೇಷ ಶಿಬಿರಗಳು ತಿಂದುಂಡು, ಮೋಜು ಮಸ್ತಿ ಮಾಡಿ, ವ್ಯರ್ಥ ಕಾಲಹರಣಕ್ಕೆ ಮಾತ್ರ ಸೀಮಿತವಾಗದೇ ಆತ್ಮಾವಲೋಕನ ಮಾಡಿಕೊಂಡು ರಾಷ್ಟ್ರಪ್ರೇಮ ಅಂಕುರಿಸುವ ವೇದಿಕೆಯಾಗಿಸಿಕೊಂಡರೆ ಶಿಬಿರದಲ್ಲಿ ಪಾಲ್ಗೊಂಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.

ಶಿಬಿರಕ್ಕೆ ಅಗತ್ಯ ಸಹಕಾರ: ಕಲ್ಲೂರ ಗ್ರಾಪಂ ಅಧ್ಯಕ್ಷ ಸಂಜೀವಕುಮಾರ ರಾಜೇಶ್ವರ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಅಭಿವೃದ್ಧಿ ಗ್ರಾಮಗಳಿಂದಲೇ ಆರಂಭವಾಗಬೇಕು. ಎನ್ನೆಸ್ಸೆಸ್‌ ಶಿಬಿರದ ಮೂಲಕ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡ ಶಿಬಿರಾರ್ಥಿಗಳ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದ ಅವರು, ಪಂಚಾಯಿತಿ ವತಿಯಿಂದ ಶಿಬಿರಕ್ಕೆ ಅಗತ್ಯ ಸಹಾಯ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಅಶೋಕ ಖಾಜಾಪುರೆ, ಅವಿನಾಶ ಪಾಟೀಲ, ಪ್ರವೀಣ ಕಲ್ಬರ್ಗಿ, ಸಿ.ಕೆ. ಲದ್ದೆ, ಸಂಜಯ್‌ ದಂತಕಾಳೆ ಇತರರು ಉಪಸ್ಥಿತರಿದ್ದರು.

ಪ್ರಿಯಾ ಬಶೆಟ್ಟಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ| ಬಸವರಾಜ ಭಜಂತ್ರಿ ಸ್ವಾಗತಿಸಿದರು. ಶಿಬಿರಾಧಿಕಾರಿ ಪ್ರೊ| ಎಸ್‌. ಎಸ್‌. ರಟಕಲೆ ಪ್ರಾಸ್ತಾವಿಕ ಮಾತನಾಡಿದರು. ಪ್ರೊ| ರವೀಂದ್ರನಾಥ ನಿರೂಪಿಸಿದರು. ಡಾ| ಡಿ.ಕೆ. ಬಿರಾದಾರ ವಂದಿಸಿದರು.

ಮತದಾನ ಸಂವಿಧಾನ ನಮಗೆ ನೀಡಿದ ಮಹತ್ವದ ಹಕ್ಕು. ಇನ್ನಿಲ್ಲದ ನೆಪವೊಡ್ಡಿ ಮತದಾನದಿಂದ ತಪ್ಪಿಸಿಕೊಳ್ಳದೇ ಕಡ್ಡಾಯವಾಗಿ ಮತದಾನ ಮಾಡಬೇಕು. ಮತ ಚಲಾಯಿಸದಿದ್ದರೆ ನಾವು ಇದ್ದೂ ಸತ್ತಂತೆ.
ಡಾ| ಸುಚಿತಾನಂದ ಮಲ್ಕಾಪುರೆ, ಪ್ರಾಧ್ಯಾಪಕ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.